“ಪಕ್ಷದ ಸಿದ್ಧಾಂತದಂತೆ ಕಲ್ಲಡ್ಕ ಹೇಳಿಕೆ ಸೂಕ್ತ’
Team Udayavani, Jan 21, 2020, 3:03 AM IST
ವಿಜಯಪುರ: ಪಕ್ಷದ ಸಿದ್ಧಾಂತ ಆಧರಿಸಿ ಸಿಎಂ ಯಡಿಯೂರಪ್ಪ ರಾಜಕೀಯ ನಿವೃತ್ತಿಯಾಗಲಿ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದರಲ್ಲಿ ತಪ್ಪೇನಿಲ್ಲ. ಪಕ್ಷದ ಸಿದ್ಧಾಂತದ ಪ್ರಕಾರ 75 ವರ್ಷ ದಾಟಿದವರಿಗೆ ಸಕ್ರಿಯ ರಾಜಕೀಯದಿಂದ ದೂರವಾದರೂ ರಾಜ್ಯಪಾಲರಂಥ ಬೇರೆ ಹುದ್ದೆ ಕೊಡಬಹುದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಸಮರ್ಥಿಸಿದರು.
ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ನಾನು ಎಂದಿಲ್ಲ, ಬಿಜೆಪಿ ಬರುತ್ತೆ ಎಂದಂತೆ ಎಂಬರ್ಥದಲ್ಲಿ ಹೇಳಿದ್ದಾರೆ. ಚುನಾವಣೆ ಬಳಿಕ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರು ಸಿಎಂ, ಪಿಎಂ ಆಗಬೇಕು ಎನ್ನುವುದನ್ನು ಪಕ್ಷ ನಿರ್ಧರಿಸಲಿದೆ ಎಂದರು.