ಕಂಬಳ: ತಿದ್ದುಪಡಿ ಮಸೂದೆ ಮಂಡನೆ
Team Udayavani, Nov 17, 2017, 6:00 AM IST
ಬೆಳಗಾವಿ: ಕಂಬಳ ಸಹಿತ ಹೋರಿ ಓಟ ಮತ್ತು ಎತ್ತಿನ ಗಾಡಿ ಓಟಕ್ಕೆ ಕಾನೂನು ಮಾನ್ಯತೆ ದೊರಕಿಸುವ ಉದ್ದೇಶದಿಂದ ರಾಜ್ಯ ಸರಕಾರ ಸಿದ್ಧಪಡಿಸಿರುವ “ಪ್ರಾಣಿಗಳಿಗೆ ಹಿಂಸಾಚಾರ ಮಾಡುವುದನ್ನು ತಡೆಗಟ್ಟುವ (ಕರ್ನಾಟಕ ಎರಡನೇ ತಿದ್ದುಪಡಿ)’ ಮಸೂದೆಯನ್ನು ಗುರುವಾರ ಮಂಡಿಸಲಾಗಿದೆ. ಆ ಮೂಲಕ ಕಂಬಳ ಕ್ರೀಡೆ ಸಹಿತ ಮೂರು ಜಾನಪದ ಕ್ರೀಡೆಗಳ ಆಯೋಜನೆಗೆ ಶಾಶ್ವತ ಪರಿಹಾರ ಕಲ್ಪಿಸುವುದಕ್ಕೆ ಸರಕಾರ ಮುಂದಾಗಿದೆ.
ರಾಜ್ಯದಲ್ಲಿ ಕಂಬಳ ಕ್ರೀಡೆ ಮತ್ತು ಎತ್ತಿನ ಗಾಡಿ ಓಟ ಸ್ಪರ್ಧೆ ಹಾಗೂ ಹೋರಿ ಓಟದ ಸ್ಪರ್ಧೆ ಆಯೋಜನೆಗೆ ಈಗಾಗಲೇ ಅಧ್ಯಾದೇಶ ಜಾರಿ ಗೊಳಿಸುವ ಮೂಲಕ ರಾಜ್ಯ ಸರಕಾರ ತಾತ್ಕಾಲಿಕ ಪರಿಹಾರ ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ಕಂಬಳ ಕ್ರೀಡೆ ಆಯೋಜನೆಗೆ ಕಾನೂನು ಮಾನ್ಯತೆ ದೊರಕಿಸಿ ಕೊಡುವ ಕಾಯ್ದೆ ರೂಪಿಸುವ ಮೂಲಕ ಅಧ್ಯಾದೇಶವನ್ನು ಊರ್ಜಿತ ಗೊಳಿಸಬೇಕು ಎಂಬುದು ಕರಾವಳಿ ಭಾಗದ ಜನರ ಬೇಡಿಕೆಯಾಗಿತ್ತು. ಅದರಂತೆ ಕಂಬಳ ಕ್ರೀಡಾಸಕ್ತರ ಹಾಗೂ ಅಭಿಮಾನಿಗಳ ಮನವಿಗೆ ಸ್ಪಂದಿಸಿ ರಾಜ್ಯ ಸರಕಾರ ಸಿದ್ಧ ಪಡಿಸಿರುವ “ಪ್ರಾಣಿಗಳಿಗೆ ಹಿಂಸಾಚಾರ ಮಾಡುವುದನ್ನು ತಡೆಗಟ್ಟುವ (ಕರ್ನಾಟಕ 2ನೇ ತಿದ್ದುಪಡಿ)’ ಮಸೂದೆಯನ್ನು ಪಶು ಸಂಗೋಪನಾ ಸಚಿವ ಎ. ಮಂಜು ವಿಧಾನ ಸಭೆಯಲ್ಲಿ ಮಂಡಿಸಿದರು. ಆದರೆ ಈ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಸದಸ್ಯರು ಕೋರಿರುವ ಕಾರಣ ಈ ಮಸೂದೆ ಮೇಲೆ ಸಮಗ್ರ ಚರ್ಚೆಯಾದ ಬಳಿಕ ಇದಕ್ಕೆ ಒಪ್ಪಿಗೆ ಸಿಗಬೇಕಾಗಿದೆ.
ಮಸೂದೆ ಜಾರಿಯಾದರೆ ಕಂಬಳ ನಿಷೇಧ ಭೀತಿ ದೂರಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್ ಆರೋಪ
Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ
Govt ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಕಡ್ಡಾಯಕ್ಕೆ ಆದೇಶ
MUST WATCH
ಹೊಸ ಸೇರ್ಪಡೆ
IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?
Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ
Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ
IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್