ರಾಜ್ಯಾದ್ಯಂತ ಕಂಬಳದ ಪರ ಹೋರಾಟ ತೀವ್ರ; ಪ್ರತಿಭಟನೆಗೆ ತಮಿಳರ ಸಾಥ್
Team Udayavani, Jan 27, 2017, 12:19 PM IST
ಬೆಂಗಳೂರು/ಮಂಗಳೂರು:ಕರಾವಳಿಯ ಸಾಂಸ್ಕೃತಿಕ ಕ್ರೀಡೆಯಾದ ಕಂಬಳದ ಪರ ಹೋರಾಟ ರಾಜ್ಯಾದ್ಯಂತ ತೀವ್ರಗೊಂಡಿದೆ. ಬೆಂಗಳೂರು, ಮಂಗಳೂರು ಸೇರಿದಂತೆ ವಿವಿಧೆಡೆ ಕಂಬಳದ ಪರ ಹಕ್ಕೊತ್ತಾಯ ಹೆಚ್ಚತೊಡಗಿದೆ. ಏತನ್ಮಧ್ಯೆ ಕಂಬಳಕ್ಕಾಗಿ ಬೆಂಗಳೂರಲ್ಲಿ ತಮಿಳರು ಕೂಡಾ ಹೋರಾಟಕ್ಕಿಳಿದಿರುವುದು ವಿಶೇಷವಾಗಿದೆ.
ಶನಿವಾರ ಮೂಡಬಿದ್ರೆಯಲ್ಲಿ ಕಂಬಳದ ಪರವಾಗಿ ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಭೆಯ ಪೂರ್ವಭಾವಿಯಾಗಿ ಶುಕ್ರವಾರ ಬೆಂಗಳೂರಿನಲ್ಲಿ ಪ್ರವೀಣ್ ಶೆಟ್ಟಿ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹೆಬ್ಬಾಳದಿಂದ ವಿಧಾನಸೌಧದವರೆಗೆ ಮಾನವ ಸರಪಳಿ ನಿರ್ಮಿಸಿದರು.
ನಗರದ ಮೌರ್ಯ ಸರ್ಕಲ್ ನಲ್ಲಿ ಎಐಎಡಿಎಂಕೆ ಕಾರ್ಯಕರ್ತರು ಕಂಬಳಕ್ಕಾಗಿ ಪ್ರತಿಭಟನೆ ನಡೆಸಿ, ತಮಿಳುನಾಡಿನಲ್ಲಿ ಜಲ್ಲಿಕಟ್ಟುಗೆ ಅವಕಾಶ ಮಾಡಿಕೊಟ್ಟಂತೆ, ಕರಾವಳಿ ಭಾಗದ ಕಂಬಳಕ್ಕೂ ಅದೇ ರೀತಿ ಅವಕಾಶ ನೀಡಬೇಕೆಂದು ಆಗ್ರಹಿಸಿದೆ.
ಮಂಗಳೂರಿನಲ್ಲಿ ವಿದ್ಯಾರ್ಥಿಗಳು, ಸಾಹಿತಿಗಳು, ರಾಜಕಾರಣಿಗಳು ಸೇರಿದಂತೆ ಸಾವಿರಾರು ಮಂದಿ ಪ್ರತಿಭಟನೆ ನಡೆಸಿ, ಕಂಬಳದ ಮೇಲಿನ ನಿಷೇಧ ತೆರವುಗೊಳಿಸುವಂತೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ