Kambala : ನೀರಿನ ಮಾದರಿ ಲ್ಯಾಬ್ಗೆ ರವಾನೆ
Team Udayavani, Aug 8, 2023, 6:50 AM IST
ಬೆಂಗಳೂರು: ಕರಾವಳಿಯ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಕಂಬಳ ಕ್ರೀಡಾಕೂಟವನ್ನು ಬೆಂಗಳೂರಿಗೆ ಪರಿಚಯಿಸಲು ಅಗತ್ಯವಿರುವ ಸಿದ್ಧತೆಗಳು ನಡೆಯುತ್ತಿದೆ.
ಈಗಾಗಲೇ ಕಂಬಳದ ಆಯೋಜನೆಗೆ ಸಂಬಂಧಿಸಿ ಎರಡು ಸುತ್ತಿನ ಮಾತುಕತೆ ಪೂರ್ಣಗೊಂಡಿದೆ.
ಕಂಬಳವನ್ನು ನಗರ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಿದ್ದು, ಇದಕ್ಕೆ ಮೈಸೂರು ಮಹಾರಾಣಿ ಹಾಗೂ ಯುವರಾಜರು ಮೌಖಿಕವಾಗಿ ಅನುಮತಿ ನೀಡಿದ್ದಾರೆ. 2 ಲಕ್ಷ ಮಂದಿ ವೀಕ್ಷಣೆಗೆ ಆಗಮಿಸಲಿದ್ದಾರೆ. ಎಲ್ಲ ಮಾತುಕತೆ ಪೂರ್ಣಗೊಂಡ ಬಳಿಕ ಕಂಬಳ ಆಯೋಜನೆ ಹಾಗೂ ವೀಕ್ಷಣೆಗೆ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ.
ಅರಮನೆ ಮೈದಾನದಲ್ಲಿ ನಿರ್ಮಿಸಲಾಗುವ ಕಂಬಳ ಕರೆಗಳನ್ನು ಶಾಶ್ವತವಾಗಿರಿಸಿಕೊಳ್ಳಲು ಪ್ರಯತ್ನಿಸಲಾಗುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಬೆಂಗಳೂರಿನ ಗಡಸು ನೀರು ಕೋಣಗಳಿಗೆ ಕುಡಿಯಲು ಸೂಕ್ತವೇ ಎನ್ನುವ ಕುರಿತು ತಿಳಿಯಲು ನೀರಿನ ಮಾದರಿಯನ್ನು ಬೆಂಗಳೂರು ಹಾಗೂ ಪುಣೆ ಲ್ಯಾಬ್ಗ ರವಾನಿಸಲಾಗಿದೆ. ವರದಿ ಬಂದ ಬಳಿಕವಷ್ಟೇ ಮುಂದಿನ ತೀರ್ಮಾನ ತೆಗೆದುಕೊಳ್ಳಲಿದೆ. ಇದರೆ ಜತೆಗೆ ಕಂಬಳ ಯಜಮಾನರ ವಿಶ್ವಾಸಕ್ಕೆ ತೆಗೆದುಕೊಂಡು ಕೋಣಗಳನ್ನು ಬೆಂಗಳೂರಿಗೆ ತರುವ ಬಗ್ಗೆ ಮಾತುಕತೆ ನಡೆಯುತ್ತಿದೆ.
ಕಂಬಳವು ನವೆಂಬರ್ ತಿಂಗಳಿನಲ್ಲಿ ನಡೆಯುವ ಸಾಧ್ಯಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್