ದೇಗುಲಕ್ಕೆ ತೆರಳುವಾಗ ಕಂಪ್ಲಿ ಶಾಸಕ ಗಣೇಶ್‌ ಸೆರೆ


Team Udayavani, Feb 21, 2019, 12:30 AM IST

kampli-ganesh.jpg

ರಾಮನಗರ/ಬೆಂಗಳೂರು: ರಾಜ್ಯ ರಾಜಕೀಯ ದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಕಾಂಗ್ರೆಸ್‌ ಶಾಸಕರಿಬ್ಬರ ರೆಸಾರ್ಟ್‌ ಗಲಾಟೆಗೆ ತಾರ್ಕಿಕ ಅಂತ್ಯ ಸಿಕ್ಕಿದ್ದು, ಕಂಪ್ಲಿ ಶಾಸಕ ಗಣೇಶ್‌ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಗುಜರಾತ್‌ನ ಸೋಮನಾಥದಲ್ಲಿ ಬುಧವಾರ ಗಣೇಶ್‌ ಅವರನ್ನು ಬಂಧಿಸಲಾಗಿದ್ದು, ಗುರುವಾರ ಬೆಳಗ್ಗೆ ರಾಮನಗರಕ್ಕೆ ಕರೆತರುವ ಸಾಧ್ಯತೆ ಇದೆ ಎಂದು ರಾಮನಗರ ಜಿಲ್ಲಾ ಎಸ್ಪಿ ಬಿ.ರಮೇಶ್‌ ತಿಳಿಸಿದ್ದಾರೆ.
ರಾಮನಗರ ತಾಲೂಕಿನ ಬಿಡದಿ ಬಳಿಯ ಈಗಲ್ಟನ್‌ ರೆಸಾರ್ಟ್‌ನಲ್ಲಿ ಜ.19ರ ರಾತ್ರಿ ವಿಜಯನಗರ ಶಾಸಕ ಆನಂದ್‌ ಸಿಂಗ್‌ ಮೇಲೆ ಗಣೇಶ್‌ ಹಲ್ಲೆ ನಡೆಸಿದ್ದರು. ಇದಾದ ಬಳಿಕ ಅವರು ತಪ್ಪಿಸಿಕೊಂಡು ಓಡಾಡುತ್ತಿದ್ದರು. 

ಮೂರು ದಿನಗಳ ಹಿಂದೆ ಆರೋಪಿ ಶಾಸಕ ಗಣೇಶ್‌ ಗುಜರಾತ್‌ನ ಸೋಮನಾಥದಲ್ಲಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿ ದ್ದರಿಂದ 2 ಸಿಪಿಐಗಳು, 2 ಎಸ್‌ಐ ಮತ್ತು 12 ಮಂದಿ ಸಿಬಂದಿ ಗುಜರಾತ್‌ಗೆ ತೆರಳಿದ್ದರು. ಬುಧವಾರ ಅಪರಾಹ್ನ 2 ಗಂಟೆಗೆ ಸೋಮನಾಥ ದೇವಾಲಯಕ್ಕೆ ಕಾರಿನಲ್ಲಿ ಹೋಗುವ ವೇಳೆ ಅಲ್ಲಿದ್ದ ಸುಖಸಾಗರ ಹೋಟೆಲ್‌ನಲ್ಲಿ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ.

ಗಣೇಶ್‌ ಜತೆ ಮೂವರು ಇದ್ದರು
ಶಾಸಕ ಗಣೇಶ್‌ ಜತೆಯಲ್ಲಿ ಅವರ ಸ್ನೇಹಿತರು ಎನ್ನ ಲಾದ ಕರ್ನಾಟಕದ ಇಬ್ಬರು ಮತ್ತು ಸೋಮನಾಥದ ಸ್ಥಳೀಯರೊಬ್ಬರು ಚಾಲಕನ ಜತೆಯಲ್ಲಿದ್ದರು. ಅವರನ್ನೂ ರಾಮನಗರಕ್ಕೆ ಕರೆತರಲಾಗುತ್ತಿದೆ.

ಕಾಂಗ್ರೆಸ್‌ನವರಿಂದಲೇ ರಕ್ಷಣೆ?
ಕಂಪ್ಲಿ ಶಾಸಕ ಗಣೇಶ್‌ ಬಂಧನದ ಹಿಂದೆ ಕಾಂಗ್ರೆಸ್‌ ನಾಯಕರ ರಾಜಕೀಯ ಲೆಕ್ಕಾಚಾರ ಅಡಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಅವರನ್ನು ಬಂಧಿಸದೆ ಹಾಗೇ ಬಿಟ್ಟರೆ ಬಿಜೆಪಿಯವರಿಗೆ ಅದೇ ರಾಜಕೀಯ ಅಸ್ತ್ರವಾಗುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ಗಣೇಶ್‌ರನ್ನು ಬಂಧಿಸಿ ಅನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಲು ಸಹಾಯ ಮಾಡುವ ಕುರಿತಂತೆ ಯೋಜನೆ ರೂಪಿಸಲಾಗಿದೆ ಎನ್ನಲಾಗಿದೆ. 

ಸಂಧಾನಕ್ಕೆ ಒಪ್ಪದ ಆನಂದ್‌ಸಿಂಗ್‌ ಪತ್ನಿ?
ಶಾಸಕ ಆನಂದ್‌ಸಿಂಗ್‌ ರಾಜಕೀಯ ಲೆಕ್ಕಾಚಾರ ದಲ್ಲಿ ಗಣೇಶ್‌ ಜೊತೆಗೆ ಸಂಧಾನ ಮಾಡಿಕೊಳ್ಳಲು ಸಹಮತ ವ್ಯಕ್ತಪಡಿಸಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ. ಆದರೆ, ಅವರ ಪತ್ನಿ ಸಂಧಾನಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದ್ದು, ಈ ಕಾರಣಕ್ಕಾಗಿ ಅವರ ಮನ ವೊಲಿಸುವ ಪ್ರಯತ್ನವನ್ನು ನಾಗೇಂದ್ರ ಮುಂದುವರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.