ಅರಬರ ನಾಡಲ್ಲಿ  ಕನ್ನಡದ ಕಂಪು; ರಾಜ್ಯದ ಮನವಿಗೆ ಸ್ಪಂದನೆ


Team Udayavani, Nov 1, 2017, 6:00 AM IST

kannada.jpg

ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳಲ್ಲಿಯೂ ಕನ್ನಡವನ್ನು ಒಂದು ಭಾಷೆಯಾಗಿ ಕಡ್ಡಾಯವಾಗಿ ಕಲಿಸಬೇಕೆಂದು ಆದೇಶ ಮಾಡಿರುವ ರಾಜ್ಯ ಸರಕಾರ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಕನ್ನಡ ಭಾಷೆಯನ್ನು ಜೀವಂತವಾಗಿಡಲು 
ಪ್ರಯತ್ನ ನಡೆಸಿದೆ. ಹೊರ ದೇಶಗಳಲ್ಲಿರುವ ಕನ್ನಡಿಗರ ಮಕ್ಕಳಿಗೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವ ಕುರಿತಂತೆ ಸ್ಥಳೀಯ ಸರಕಾರಗಳೊಂದಿಗೆ ಮಾತುಕತೆ ನಡೆಸುವ ಪ್ರಯತ್ನ ನಡೆಸಿದ್ದು, ರಾಜ್ಯ ಸರಕಾರದ ಪ್ರಯತ್ನಕ್ಕೆ ದುಬಾೖ ಸಹಿತ ಯುನೈಟೆಡ್‌ ಅರಬ್‌ ರಾಷ್ಟ್ರಗಳಲ್ಲಿ ಸಕಾರಾತ್ಮಕವಾಗಿ ಸ್ಪಂದನೆ ದೊರೆತಿದೆ.

ಅನಿವಾಸಿ ಭಾರತೀಯರ ಸಮಿತಿ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ ರಾಗಿರುವ ಆರತಿ ಕೃಷ್ಣ ಅವರು, ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರಿಗೆ ಮೇ ತಿಂಗಳಲ್ಲಿಯೇ ಈ ಕುರಿತು ಪತ್ರ ಬರೆದಿದ್ದಾರೆ. ಕೇಂದ್ರ ಸರಕಾರವೂ ರಾಜ್ಯ ಸರಕಾರದ ಪ್ರಯತ್ನಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಯುಎಇ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ, ಕನ್ನಡದ ಮಕ್ಕಳಿಗೆ ಅಧ್ಯಯನ ಮಾಡಲು ಅವಕಾಶ ಕಲ್ಪಿಸುವ ಕುರಿತು ಸ್ಥಳೀಯ ಸರಕಾರಕ್ಕೆ ಮನವಿ ಮಾಡುವಂತೆ ಸುಷ್ಮಾ ಸ್ವರಾಜ್‌ ಅವರಲ್ಲಿ ಮನವಿ ಮಾಡಲಾಗಿದೆ. ಈ ಸಂಬಂಧ ಸುಷ್ಮಾ  ಅವರು, ದುಬಾೖ ಯಲ್ಲಿರುವ ಭಾರತದ ರಾಯಭಾರಿ ನವದೀಪ್‌ ಸೂರಿ ಅವರಿಗೆ ಸೂಚನೆ ನೀಡಿದ್ದು, “ಅಲ್ಲಿನ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸಲು ಸ್ಥಳೀಯ ಸರಕಾರದೊಂದಿಗೆ ಮಾತುಕತೆ ನಡೆಸಿ’ ಎಂದಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಮನವಿ ಮಾಡಿಕೊಂಡಿತ್ತು: ಮೇ ತಿಂಗಳಲ್ಲಿ ದುಬಾೖನಲ್ಲಿ ನಡೆದ ಅನಿವಾಸಿ ಭಾರತೀಯರ ಸಮಾವೇಶದಲ್ಲಿ ದುಬಾೖ ಕನ್ನಡಿಗರು ತಮ್ಮ ಮಕ್ಕಳಿಗೆ ಶಾಲೆಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಹಾಗೂ ಅವಕಾಶ ಕಲ್ಪಿಸಲು ರಾಜ್ಯ ಸರಕಾರ ಯುಎಇ ಸರಕಾರದೊಂದಿಗೆ ಮಾತುಕತೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು. ಅವರ ಮನವಿಯಂತೆ ರಾಜ್ಯ ಸರಕಾರ ಕೇಂದ್ರ ಸರಕಾರಕ್ಕೆ ಪತ್ರ ಬರೆದು ಯುಎಇ ಸರಕಾರದೊಂದಿಗೆ ಮಾತುಕತೆ ನಡೆಸುವಂತೆ ಮನವಿ ಮಾಡಿಕೊಂಡಿದೆ.

ಯುಎಇ ಕನ್ನಡ ಕೂಟದ ಸಂಸ್ಥಾಪಕರಾಗಿದ್ದ ಅರುಣ್‌ ಮುತ್ತುಗದೂರು ಎನ್ನುವವರು, ತಾವಷ್ಟೇ ಕನ್ನಡ ಉಳಿಸಿದರೆ ಸಾಲದು. ತಮ್ಮ ಮುಂದಿನ ಪೀಳಿಗೆಯೂ ಮಾತೃ ಭಾಷೆಯನ್ನು ಕಲಿಯಬೇಕೆಂಬ ಮಹದಾಸೆ ಯಿಂದ ದುಬೈನಲ್ಲಿರುವ ಜೆಎಸ್‌ಎಸ್‌ ಶಾಲೆಯಲ್ಲಿ ಕನ್ನಡಿಗರ ಮಕ್ಕಳಿಗೆ ಕನ್ನಡ ಕಲಿಸಲು ಆರಂಭಿಸಿದರು. ಶಶಿಧರ್‌ ಎನ್ನುವವರು ಅದನ್ನು ಮುಂದುವರಿಸಿಕೊಂಡು ಬಂದಿದ್ದು, ಪ್ರತಿ ಶುಕ್ರವಾರ ಒಂದು ಗಂಟೆ ಕನ್ನಡಿಗರ ಮಕ್ಕಳಿಗೆ ಮಾತೃ ಭಾಷೆ ಕಲಿಸುವ ಪ್ರಯತ್ನ ನಡೆಸಿದ್ದಾರೆ.

ದುಬೈನಲ್ಲಿ ಈಗಾಗಲೇ ತಮಿಳು, ಮಲಯಾಳಿ, ತೆಲಗು ಹಾಗೂ ಹಿಂದಿ ಭಾಷೆಯನ್ನು ಸ್ಥಳೀಯ ಶಾಲೆಗಳಲ್ಲಿ ಒಂದು ಭಾಷೆಯಾಗಿ ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗಿದ್ದು, ಅದೇ ರೀತಿ ಕನ್ನಡವನ್ನೂ ಒಂದು ಭಾಷೆಯಾಗಿ ಅಧ್ಯಯನ ನಡೆಸಲು ರಾಜ್ಯ ಸರಕಾರ ಅವಕಾಶ ಕಲ್ಪಿಸಿ ಕೊಟ್ಟರೆ, ಕನ್ನಡದ ಮಕ್ಕಳೂ ಅರಬರ ನಾಡಿನಲ್ಲೂ ಮಾತೃಭಾಷೆಯನ್ನು ಕಲಿಯಲು ಅನುಕೂಲವಾಗುತ್ತದೆ ಎನ್ನುವುದು ದುಬೈ ಕನ್ನಡಿಗರ ಬಯಕೆಯಾಗಿದೆ.

– ಶಂಕರ ಪಾಗೋಜಿ

ಟಾಪ್ ನ್ಯೂಸ್

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.