ಕನ್ನಡ ಸಾಹಿತ್ಯ ಪರಿಷತ್: ವಿವಿಧ ಪರೀಕ್ಷೆಗಳಿಗೆ ಅರ್ಜಿ
Team Udayavani, Jul 7, 2019, 3:00 AM IST
ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು 2019-20ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. 2019ರ ಡಿಸೆಂಬರ್ ಕೊನೇ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಆ.31 ಅರ್ಜಿ ಸಲ್ಲಿಕೆಗೆ ಕೊನೇ ದಿನ. ಸೆ.15ರವರೆಗೆ ದಂಡ ಶುಲ್ಕ 50 ರೂ. ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.
25ರೂ. ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ಜು.1ರಿಂದ ಪಡೆಯಬಹುದಾಗಿದೆ. ಪರೀಕ್ಷಾ ಅರ್ಜಿಗಳನ್ನು ವೆಬ್ಸೈಟ್ www.kasapa.in ಮೂಲಕ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು. ದೂ.080-26623584 ಕ್ಕೆ ಸಂಪರ್ಕಿಸಬಹುದು.