ಕನ್ನಡ ಅಭಿವೃದ್ಧಿ ಅಧಿಕಾರ ಪರಿಷತ್ತಿಗೆ ನೀಡಲಿ: ಬೈರಪ್ಪ
Team Udayavani, Oct 13, 2022, 12:00 AM IST
ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಹಾಗೂ ಅನುಷ್ಠಾನ ಅಧಿಕಾರವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರಿಗೆ ನೀಡಬೇಕು. ರಾಜ್ಯದಲ್ಲಿ ಬಹುತೇಕ ಕನ್ನಡೇತರರೇ ಅಧಿಕಾರಿಗಳಿಗೆ ಇರುವುದರಿಂದ ಕಾನೂನು ನಿರ್ಣಯ ಅಧಿಕಾರವನ್ನು ಅಧಿಕಾರಿಗಳಿಗೆ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹಿರಿಯ ಸಾಹಿತಿ ಡಾ| ಎಸ್.ಎಲ್. ಭೈರಪ್ಪ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ-2022′ ಕುರಿತು ಹಮ್ಮಿ ಕೊಂಡಿದ್ದ ಚಿಂತನಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಅನುಷ್ಠಾನ ವಿಚಾರವಾಗಿ ಸಾಹಿತ್ಯ ಪರಿಷತ್ತು ಈ ವರೆಗೆ ಹಲವಾರು ಕಾನೂನುಗಳನ್ನು ಜಾರಿಗೊಳಿಸಿದೆ. ಅನುಷ್ಠಾನ ವಿಚಾರವಾಗಿ ಅಧಿಕಾರಿಗಳು ನಿರ್ಣಯ ಕೈಗೊಳ್ಳ ದಿರುವುದರಿಂದ ಪ್ರಯೋಜನ ವಾಗುತ್ತಿಲ್ಲ ಎಂದು ಹೇಳಿದರು.
ಸರಕಾರದಿಂದ ನೇಮಕವಾದವರು ಸರಕಾರದ ಪರ ಕೆಲಸ ಮಾಡು ತ್ತಾರೆಯೇ ವಿನಾ ಕನ್ನಡಪರ ಕೆಲಸ ಮಾಡುವುದಿಲ್ಲ. ಆದ್ದರಿಂದ ಜನರಿಂದ ನೇಮಕವಾದವರಿಗೆ ಕನ್ನಡ ಅನುಷ್ಠಾನ ಅಧಿಕಾರ ನೀಡಿದರೆ ಕಾನೂನುಗಳು ಫಲಕಾರಿಯಾಗಲಿವೆ ಎಂದರು.
ಪ್ರಸ್ತುತ ಸರಕಾರ ಪ್ರಕಟಿಸಿರುವ ಮಸೂದೆ ಕೂಡ ತುಂಬಾ ಗೋಜಲಿನಿಂದ ಕೂಡಿದೆ. ಸಾಹಿತ್ಯ ಪರಿಷತ್ತಿನಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದು ಒಳ್ಳೆಯದು ಎಂದು ಸಲಹೆ ನೀಡಿದರು.
ಮಾಜಿ ಸಚಿವ ಎಚ್. ಕೆ. ಪಾಟೀಲ್ ಮಾತನಾಡಿ, ಸರಕಾರದ ಕೊನೇ ಅವಧಿಯಲ್ಲಿ ವಿಧೇಯಕ ಮಂಡನೆ ಮಾಡುವ ಬದಲಾಗಿ ಆರಂಭದಲ್ಲೇ ಇಂತಹ ಮಸೂದೆಗಳನ್ನು ಮಂಡಿಸ ಬೇಕು. ಇದಕ್ಕೆ ಸಂಬಂಧಿಸಿ ಸದನ ಸಮಿತಿ ರಚಿಸಿ ಕಸಾಪ ಕೇಂದ್ರ ಘಟಕ, ಜಿಲ್ಲಾ ಮತ್ತು ತಾಲೂಕು ಘಟಕಗಳು, ಸಾರ್ವಜನಿಕರೊಂದಿಗೆ ಮುಕ್ತವಾಗಿ ಚರ್ಚಿಸಿದ ಬಳಿಕ ಮಸೂದೆ ಮಂಡನೆ ಮಾಡುವುದು ಒಳ್ಳೆಯದು ಎಂದು ಸಲಹೆ ನೀಡಿದರು.
ಕನ್ನಡಪರ ಹೋರಾಟಗಾರ ಸಾ.ರಾ. ಗೋವಿಂದ್, ಕಾನೂನು ತಜ್ಞ ಅಶೋಕ್ ಹಾರನಹಳ್ಳಿ, ಬೇಲಿಮಠದ ಪೀಠಾಧ್ಯಕ್ಷರಾದ ಶಿವರುದ್ರ ಸ್ವಾಮೀಜಿ, ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಹಿರಿಯ ಸಾಹಿತಿಗಳಾದ ಚಂದ್ರಶೇಖರ ಕಂಬಾರ, ದೊಡ್ಡರಂಗೇಗೌಡ, ಕಸಾಪ ಅಧ್ಯಕ್ಷ ಮಹೇಶ್ ಜೋಷಿ, ಭಾಷಾ ತಜ್ಞರಾದ ಡಾ| ಪ್ರಧಾನ್ ಗುರುದತ್ತ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಸಹಿತ ಹಲವರು ಪಾಲ್ಗೊಂಡಿದ್ದರು.
ಕನ್ನಡವನ್ನು ಸೂಕ್ತವಾಗಿ ಬಳಸುವ ನಿಟ್ಟಿನಲ್ಲಿ ಮಸೂದೆ ತರಲಾಗಿದೆ. ಅದನ್ನು ಯಾವ ರೀತಿಯಲ್ಲಿ ಬದಲಾವಣೆಗಳು ಆಗಬೇಕು ಎನ್ನುವು ದನ್ನು ತಜ್ಞರು ಚರ್ಚಿಸಿದರೆ ಸರಕಾರ ಅದನ್ನು ಸ್ವಾಗತಿಸಲಿದೆ. ಕಾನೂನು ಮಾಡುವ ವೇಳೆ ಎಲ್ಲ ಆಯಾಮಗಳಲ್ಲಿ ಗಮನಿಸಿ ಮುಂದಿನ ಕ್ರಮ ಕೈ ಗೊಳ್ಳಲಿದೆ.
– ಜೆ.ಸಿ. ಮಾಧುಸ್ವಾಮಿ, ಕಾನೂನು ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ
ಅಪಹೃತ ಮಹಿಳೆ ಸಿಆರ್ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್ಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ
Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು
ಡ್ರಗ್ಸ್ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ