ಕನ್ನಡ ಅಭಿವೃದ್ಧಿ ಅಧಿಕಾರ ಪರಿಷತ್ತಿಗೆ ನೀಡಲಿ: ಬೈರಪ್ಪ


Team Udayavani, Oct 13, 2022, 12:00 AM IST

ಕನ್ನಡ ಅಭಿವೃದ್ಧಿ ಅಧಿಕಾರ ಪರಿಷತ್ತಿಗೆ ನೀಡಲಿ: ಬೈರಪ್ಪ

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಹಾಗೂ ಅನುಷ್ಠಾನ ಅಧಿಕಾರವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರಿಗೆ ನೀಡಬೇಕು. ರಾಜ್ಯದಲ್ಲಿ ಬಹುತೇಕ ಕನ್ನಡೇತರರೇ ಅಧಿಕಾರಿಗಳಿಗೆ ಇರುವುದರಿಂದ ಕಾನೂನು ನಿರ್ಣಯ ಅಧಿಕಾರವನ್ನು ಅಧಿಕಾರಿಗಳಿಗೆ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹಿರಿಯ ಸಾಹಿತಿ ಡಾ| ಎಸ್‌.ಎಲ್‌. ಭೈರಪ್ಪ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ-2022′ ಕುರಿತು ಹಮ್ಮಿ ಕೊಂಡಿದ್ದ ಚಿಂತನಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಅನುಷ್ಠಾನ ವಿಚಾರವಾಗಿ ಸಾಹಿತ್ಯ ಪರಿಷತ್ತು ಈ ವರೆಗೆ ಹಲವಾರು ಕಾನೂನುಗಳನ್ನು ಜಾರಿಗೊಳಿಸಿದೆ. ಅನುಷ್ಠಾನ ವಿಚಾರವಾಗಿ ಅಧಿಕಾರಿಗಳು ನಿರ್ಣಯ ಕೈಗೊಳ್ಳ ದಿರುವುದರಿಂದ ಪ್ರಯೋಜನ ವಾಗುತ್ತಿಲ್ಲ ಎಂದು ಹೇಳಿದರು.

ಸರಕಾರದಿಂದ ನೇಮಕವಾದವರು ಸರಕಾರದ ಪರ ಕೆಲಸ ಮಾಡು ತ್ತಾರೆಯೇ ವಿನಾ ಕನ್ನಡಪರ ಕೆಲಸ ಮಾಡುವುದಿಲ್ಲ. ಆದ್ದರಿಂದ ಜನರಿಂದ ನೇಮಕವಾದವರಿಗೆ ಕನ್ನಡ ಅನುಷ್ಠಾನ ಅಧಿಕಾರ ನೀಡಿದರೆ ಕಾನೂನುಗಳು ಫ‌ಲಕಾರಿಯಾಗಲಿವೆ ಎಂದರು.

ಪ್ರಸ್ತುತ ಸರಕಾರ ಪ್ರಕಟಿಸಿರುವ ಮಸೂದೆ ಕೂಡ ತುಂಬಾ ಗೋಜಲಿನಿಂದ ಕೂಡಿದೆ. ಸಾಹಿತ್ಯ ಪರಿಷತ್ತಿನಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದು ಒಳ್ಳೆಯದು ಎಂದು ಸಲಹೆ ನೀಡಿದರು.

ಮಾಜಿ ಸಚಿವ ಎಚ್‌. ಕೆ. ಪಾಟೀಲ್‌ ಮಾತನಾಡಿ, ಸರಕಾರದ ಕೊನೇ ಅವಧಿಯಲ್ಲಿ ವಿಧೇಯಕ ಮಂಡನೆ ಮಾಡುವ ಬದಲಾಗಿ ಆರಂಭದಲ್ಲೇ ಇಂತಹ ಮಸೂದೆಗಳನ್ನು ಮಂಡಿಸ ಬೇಕು. ಇದಕ್ಕೆ ಸಂಬಂಧಿಸಿ ಸದನ ಸಮಿತಿ ರಚಿಸಿ ಕಸಾಪ ಕೇಂದ್ರ ಘಟಕ, ಜಿಲ್ಲಾ ಮತ್ತು ತಾಲೂಕು ಘಟಕಗಳು, ಸಾರ್ವಜನಿಕರೊಂದಿಗೆ ಮುಕ್ತವಾಗಿ ಚರ್ಚಿಸಿದ ಬಳಿಕ ಮಸೂದೆ ಮಂಡನೆ ಮಾಡುವುದು ಒಳ್ಳೆಯದು ಎಂದು ಸಲಹೆ ನೀಡಿದರು.

ಕನ್ನಡಪರ ಹೋರಾಟಗಾರ ಸಾ.ರಾ. ಗೋವಿಂದ್‌, ಕಾನೂನು ತಜ್ಞ ಅಶೋಕ್‌ ಹಾರನಹಳ್ಳಿ, ಬೇಲಿಮಠದ ಪೀಠಾಧ್ಯಕ್ಷರಾದ ಶಿವರುದ್ರ ಸ್ವಾಮೀಜಿ, ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಹಿರಿಯ ಸಾಹಿತಿಗಳಾದ ಚಂದ್ರಶೇಖರ ಕಂಬಾರ, ದೊಡ್ಡರಂಗೇಗೌಡ, ಕಸಾಪ ಅಧ್ಯಕ್ಷ ಮಹೇಶ್‌ ಜೋಷಿ, ಭಾಷಾ ತಜ್ಞರಾದ ಡಾ| ಪ್ರಧಾನ್‌ ಗುರುದತ್ತ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌. ನಾಗಾಭರಣ ಸಹಿತ ಹಲವರು ಪಾಲ್ಗೊಂಡಿದ್ದರು.

ಕನ್ನಡವನ್ನು ಸೂಕ್ತವಾಗಿ ಬಳಸುವ ನಿಟ್ಟಿನಲ್ಲಿ ಮಸೂದೆ ತರಲಾಗಿದೆ. ಅದನ್ನು ಯಾವ ರೀತಿಯಲ್ಲಿ ಬದಲಾವಣೆಗಳು ಆಗಬೇಕು ಎನ್ನುವು ದನ್ನು ತಜ್ಞರು ಚರ್ಚಿಸಿದರೆ ಸರಕಾರ ಅದನ್ನು ಸ್ವಾಗತಿಸಲಿದೆ. ಕಾನೂನು ಮಾಡುವ ವೇಳೆ ಎಲ್ಲ ಆಯಾಮಗಳಲ್ಲಿ ಗಮನಿಸಿ ಮುಂದಿನ ಕ್ರಮ ಕೈ ಗೊಳ್ಳಲಿದೆ.
– ಜೆ.ಸಿ. ಮಾಧುಸ್ವಾಮಿ, ಕಾನೂನು ಸಚಿವ

ಟಾಪ್ ನ್ಯೂಸ್

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.