ಲಿಂಗಪೂಜೆ ವೇಳೆ ಶತಾಯುಷಿ ಕನ್ನೋಳ್ಳಿ ಶ್ರೀ ಲಿಂಗೈಕ್ಯ
Team Udayavani, Feb 18, 2020, 3:02 AM IST
ಅಫಜಲಪುರ: ನಡೆದಾಡುವ ದೇವರು, ವಾಕ್ ಸಿದ್ದಿ ಪುರುಷರೆಂದು ಖ್ಯಾತರಾಗಿದ್ದ ಸಮೀಪದ ಸಿಂದಗಿ ತಾಲೂಕಿನ ಕನ್ನೋಳ್ಳಿಯ ಹಿರೇಮಠದ ಮರುಳಾರಾಧ್ಯ ಶಿವಾಚಾರ್ಯರು (105) ಲಿಂಗಪೂಜೆ ಮಾಡುತ್ತ ಸೋಮವಾರ ಬೆಳಗ್ಗೆ 8:25ಕ್ಕೆ ಲಿಂಗೈಕ್ಯರಾಗಿದ್ದಾರೆ.
1915ರಲ್ಲಿ ಜನಿಸಿದ ಶ್ರೀಗಳು ಕನ್ನೋಳ್ಳಿ ಹಿರೇಮಠಕ್ಕೆ 1933ರಲ್ಲಿ ಪಟ್ಟಾಧಿಕಾರ ಸ್ವೀಕರಿಸಿದ್ದರು. ಶ್ರೀಗಳು ಭಕ್ತರ ಬವಣೆಗಳನ್ನು ನೀಗಿಸುವ ಮೂಲಕ ವಿಜಯಪುರ, ಬಾಗಲಕೋಟೆ, ಕಲಬುರಗಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಮನೆ ಮಾತಾಗಿದ್ದರು. ಕಳೆದ ಕೆಲ ದಿನಗಳಿಂದ ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದರು.
ಶ್ರೀಗಳ ಶಿವಸಂಸ್ಕಾರವು ಶ್ರೀಮಠದಲ್ಲಿ ಫೆ.18ರಂದು ಮಧ್ಯಾಹ್ನ 3ಗಂಟೆಗೆ ಧಾರ್ಮಿಕ ವಿಧಿ-ವಿಧಾನಗಳ ಪ್ರಕಾರ ಪ್ರಭುಸಾರಂಗದೇವ ಶಿವಾಚಾರ್ಯರ ನೇತೃತ್ವದಲ್ಲಿ ನಡೆಯಲಿದೆ. ಭಕ್ತರ ದರ್ಶನಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶ್ರೀಗಳ ಅಗಲಿಕೆಗೆ ಸಿಂದಗಿಯ ಶಾಂತೇಶ್ವರ ಮಠದ ಶ್ರೀಗಳು, ಅಫಜಲಪುರದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು, ಬಡದಾಳದ ಡಾ. ಚನ್ನಮಲ್ಲ ಶಿವಾಚಾರ್ಯರು, ಚಿನ್ಮಯ ಗಿರಿಯ ಸಿದ್ದರಾಮ ಶಿವಾಚಾರ್ಯರು ಹಾಗೂ ವೀರ ಮಹಾಂತ ಶಿವಾಚಾರ್ಯರು,
ಅತನೂರಿನ ಗುರುಬಸವ ಶಿವಾಚಾರ್ಯರು, ಚಿಂಚೋಳಿಯ ಗದ್ದುಗೇಶ್ವರ ಮಲ್ಲಿಕಾರ್ಜುನ ಶಿವಾಚಾರ್ಯರು, ನಿಲೂರಿನ ಮಲ್ಲಿಕಾರ್ಜುನ ಶಿವಾಚಾರ್ಯರು, ಹಿರೇ ಜೇವರ್ಗಿಯ ಗುರುಶಾಂತಲಿಂಗಾರಾಧ್ಯ ಶಿವಾಚಾರ್ಯರು, ಶಾಸಕರಾದ ಎಂ.ಸಿ. ಮನಗೂಳಿ, ಎಂ.ವೈ. ಪಾಟೀಲ್, ಮಾಜಿ ಶಾಸಕರಾದ ರಮೇಶ ಭೂಸನೂರ, ಮಾಲೀಕಯ್ಯ ಗುತ್ತೇದಾರ ಇತರರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು