ಕರಡಿ ಗೆಲ್ಲಿಸಿದ ಕಾರ್ಯಕರ್ತರಿಗೆ ಇಂದು ಹೋಳಿಗೆ ಊಟ
Team Udayavani, Jun 16, 2019, 3:00 AM IST
ಕೊಪ್ಪಳ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಿದ್ದಕ್ಕಾಗಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಕೆ.ಎಸ್.ಈಶ್ವರಪ್ಪ ಭಾನುವಾರ ಹೋಳಿಗೆ ಊಟ ಹಾಕಿಸುತ್ತಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಈಶ್ವರಪ್ಪ, ಲೋಕಸಭೆ ಚುನಾವಣೆಯಲ್ಲಿ ಸಂಗಣ್ಣ ಕರಡಿ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಿದರೆ ನಾನೇ ನಿಮ್ಮೂರಿಗೆ ಬಂದು ಹೋಳಿಗೆ ಊಟ ಮಾಡಿಸುವೆ ಎಂದು ಮಾತು ಕೊಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಭಾನುವಾರ ಭಾಗ್ಯನಗರದ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಇದೇ ವೇಳೆ, ಕಾರ್ಯಕರ್ತರಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ.