ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬೊಮ್ಮಾಯಿ : ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ
Team Udayavani, Jul 27, 2021, 9:00 PM IST
ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡಿರುವ ಬಸವರಾಜ್ ಬೊಮ್ಮಾಯಿ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಇಂದು ಶಾಸಕಾಂಗ ಸಭೆಯ ಬಳಿಕ ನೇರವಾರ ರಾಜಭವನಕ್ಕೆ ತೆರಳಿದ ಬೊಮ್ಮಾಯಿ ಅವರು ರಾಜ್ಯಪಾಲ ಗೆಹ್ಲೊಟ್ ಅವರಲ್ಲಿ ಸರ್ಕಾರ ರಚಿಸಲು ಅನುಮಯಿ ನೀಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಬಿ.ಎಸ್. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಬಿಜೆಪಿ ಗಣ್ಯರು ನಿಯೋಜಿತ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಜೊತೆಯಲ್ಲಿದ್ದರು.
ನಾಳೆ ಪದಗ್ರಹಣ
ಇನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಮುಖ್ಯ ಮಂತ್ರಿಯಾಗಿ ಆಯ್ಕೆಗೊಂಡಿರುವ ಬಸವರಾಜ್ ಬೊಮ್ಮಾಯಿ ಅವರು ನಾಳೆ (ಜು.28) 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಪದಗ್ರಹಣ ಮಾಡುವ ಸಾಧ್ಯತೆ ಇದೆ.