ಕೇಂದ್ರ ಸರಕಾರದ ನಿರ್ಧಾರ ರಾಜ್ಯಕ್ಕೆ ಬಿಸಿ ತುಪ್ಪ?
Team Udayavani, Aug 30, 2021, 7:10 AM IST
ಬೆಂಗಳೂರು: ಕೇಂದ್ರ ಸರಕಾರ ಇತ್ತೀಚೆಗೆ ಹಿಂದುಳಿದ ವರ್ಗಗಳ ಪಟ್ಟಿಗೆ ಹೊಸ ಸೇರ್ಪಡೆ ಅಧಿಕಾರವನ್ನು ರಾಜ್ಯಗಳಿಗೆ ನೀಡಿರುವುದು ಸ್ವಾಗತಾರ್ಹವಾಗಿದ್ದರೂ, ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚಿಸದಿರುವುದು ರಾಜ್ಯಕ್ಕೆ ತಲೆನೋವಾಗಲಿದೆ.
ಈಗಿರುವ ಮೀಸಲಾತಿ ಪ್ರಮಾಣದ ಪ್ರಕಾರ ರಾಜ್ಯದ ಹಿಂದುಳಿದ ವರ್ಗದ ಪಟ್ಟಿಯಲ್ಲಿ 100ಕ್ಕೂ ಹೆಚ್ಚು ಸಮುದಾಯಗಳಿದ್ದು, ಈ ಪ್ರವರ್ಗದಲ್ಲಿರುವ ಸಮುದಾಯಗಳಿಗೆ ಶೇ.15 ಮೀಸಲಾತಿ ದೊರೆಯುತ್ತಿದೆ. ಇತ್ತೀಚೆಗೆ ನಡೆದ ಸಂಸತ್ ಅಧಿವೇಶನದಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದ್ದು, ರಾಜ್ಯಗಳಿಗೆ ಒಬಿಸಿ ಸಮು ದಾಯಗಳನ್ನು ಗುರುತಿಸಿ ಪಟ್ಟಿಯಲ್ಲಿ ಸೇರಿಸುವ ಅಧಿಕಾರ ನೀಡಿದೆ.
ಪರಿಣಾಮ ರಾಜ್ಯ ಸರಕಾರ ಯಾವುದೇ ಸಮುದಾಯದ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿ ದಿರುವಿಕೆಯನ್ನು ಪರಿಗಣಿಸಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸಮೀಕ್ಷೆ ನಡೆಸಿ ಆಯೋಗದ ಶಿಫಾರಸಿನಂತೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬಹುದು. ರಾಜ್ಯ ಸರಕಾರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಿರುವ ಸಮುದಾಯ ನೇರವಾಗಿ ಕೇಂದ್ರದ ಹಿಂದುಳಿದ ಜಾತಿಗಳ ಪಟ್ಟಿಯಲ್ಲಿ ಸೇರ್ಪಡೆಯಾಗಲಿದೆ. ಇದರಿಂದ ಸಾಮಾಜಿಕ/ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳು ರಾಜ್ಯದ ಪಟ್ಟಿಯಲ್ಲಿ ಸೇರುವ ಮೂಲಕ ಹಿಂದುಳಿದ ವರ್ಗಗಳಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಮಟ್ಟದಲ್ಲಿ ದೊರೆಯುವ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ.
ಮಿತಿ ಹೆಚ್ಚಿಸದಿರುವುದು ಸಮಸ್ಯೆ:
ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್ ಆದೇಶದಂತೆ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಷ್ಟು ಮೀರಬಾರದು ಎಂದಿ ದೆ. ಇದರಂತೆ ರಾಜ್ಯ ಸರಕಾರ ಯಾವುದೇ ಜಾತಿ ಯನ್ನು ಒಬಿಸಿ ಪಟ್ಟಿಗೆ ಸೇರಿಸಲು ಮುಂದಾದರೆ, ಉಳಿದವರ ವಿರೋಧ ಎದುರಿಸಬೇಕಾಗುತ್ತದೆ.
ಒಂದು ವೇಳೆ, ಯಾವುದೇ ಪ್ರವರ್ಗ ದಿಂದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಮುಂದಾದರೆ, ಆ ಪ್ರವರ್ಗದ ಮೀಸಲಾತಿ ಪ್ರಮಾಣ ವನ್ನು ಸಮುದಾಯದ ಜನಸಂಖ್ಯೆ ಆಧಾರದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಗೆ ವರ್ಗಾಯಿಸಬೇಕೆಂಬ ಬೇಡಿಕೆ ಮುಂದಿಟ್ಟರೆ ರಾಜ್ಯ ಸರಕಾರ ನಿರ್ದಿಷ್ಟ ಪ್ರವರ್ಗದಲ್ಲಿರುವ ಸಮುದಾಯಗಳ ಆಕ್ರೋಶಕ್ಕೆ ತುತ್ತಾಗಬೇಕಾದೀತು.
ಒಳ ಮೀಸಲಾತಿಗೆ ಬೇಡಿಕೆ : ಹಿಂದುಳಿದ ವರ್ಗಗಳಲ್ಲಿ ನೂರಕ್ಕೂ ಹೆಚ್ಚು ಸಮುದಾಯಗಳು ಇರುವುದರಿಂದ ಶೇ.15ರಷ್ಟು ಇರುವ ಮೀಸಲಾತಿಯಲ್ಲಿ ಸಮುದಾಯಗಳಿಗೂ ಸಮಾನವಾಗಿ ದೊರೆಯುತ್ತಿಲ್ಲ ಎಂಬ ದೂರಿದೆ. ರಾಜಕೀಯ ಹಾಗೂ ಸಾಮಾಜಿಕವಾಗಿ ಪ್ರಬಲವಾಗಿರುವ ಸಮುದಾಯಗಳು ಹಿಂದುಳಿದ ವರ್ಗಗಳಿಗೆ ಮೀಸಲಿರುವ ಬಹುತೇಕ ಮೀಸಲಾತಿಯ ಲಾಭ ಪಡೆದುಕೊಳ್ಳುತ್ತಿವೆ ಎನ್ನಲಾಗುತ್ತಿದ್ದು, ಅದಕ್ಕಾಗಿ ಹಿಂದುಳಿದ ವರ್ಗಗಳಲ್ಲಿ ಅತಿ ಹಿಂದುಳಿದ ವರ್ಗಗಳ ಪಟ್ಟಿಯನ್ನು ಪ್ರತ್ಯೇಕ ಮಾಡಿ ಅವುಗಳಿಗೆ ಒಳ ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ.
ಒಳ ಮೀಸಲಾತಿ ಹಂಚಿಕೆ ಗೊಂದಲ : ಆದರೆ, ಒಳ ಮೀಸಲಾತಿ ಪ್ರಮಾಣವನ್ನು ನಿಗದಿಪಡಿಸುವುದು ಕಷ್ಟವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. 100ಕ್ಕೂ ಹೆಚ್ಚು ಸಮುದಾಯಗಳಲ್ಲಿ ಅತಿ ಹಿಂದುಳಿದಿರುವಿಕೆ ತಿಳಿಯಲು ಜಾತಿ ಸಮೀಕ್ಷೆ ಪಟ್ಟಿ ಪ್ರಕಟಿಸಬೇಕು. ಅಲ್ಲದೇ, ಶೇ.15ರಷ್ಟು ಪ್ರಮಾಣವನ್ನು ಹಂಚಿಕೆ ಮಾಡುವುದು ಕಷ್ಟ ಸಾಧ್ಯ. ಹೀಗಾಗಿ ಅತಿ ಹಿಂದುಳಿದ ಸಮುದಾಯಗಳ ಪಟ್ಟಿಯನ್ನು ಪ್ರತ್ಯೇಕ ಮಾಡಿ ಅವರಿಗೆ ಮೀಸಲಾತಿ ನೀಡುವ ವ್ಯವಸ್ಥೆ ಜಾರಿಗೆ ತರಬೇಕೆಂಬ ಅಭಿಪ್ರಾಯ ಕೇಳಿ ಬರುತ್ತಿದೆ.
ಕೇಂದ್ರ ಸರಕಾರ ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯಗಳಿಗೆ ಅಧಿಕಾರ ನೀಡಿರುವುದು ಒಳ್ಳೆಯದೆ. ಆದರೆ, ಹಿಂದುಳಿದ ವರ್ಗದ ಪಟ್ಟಿಯಲ್ಲಿ ಸೇರಲು ಅರ್ಹವಿರುವ ಜಾತಿಗಳನ್ನು ಮಾತ್ರ ಸೇರಿಸಬೇಕು. ಜತೆಗೆ ತಮಿಳುನಾಡಿನ ರೀತಿಯಲ್ಲಿ ಹಿಂದುಳಿದವರು ಹಾಗೂ ಅತಿ ಹಿಂದುಳಿದವರನ್ನು ಪ್ರತ್ಯೇಕಿಸಬೇಕು.–ಎನ್.ಶಂಕರಪ್ಪ, ರಾಜ್ಯ ಹಿಂ. ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ
-ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ