13ಕ್ಕೆ ಕರ್ನಾಟಕ ಬಂದ್ಗೆ ಕರೆ?
Team Udayavani, Feb 9, 2020, 1:39 PM IST
ಸಾಂಧರ್ಬಿಕ ಚಿತ್ರ
ಬೆಂಗಳೂರು: “ಕನ್ನಡಿಗರಿಗಾಗಿ ಉದ್ಯೋಗ’ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಫೆ.13ರಂದು ಕರ್ನಾಟಕ ಸಂಘಟನೆಗಳ ಒಕ್ಕೂಟ ರಾಜ್ಯಾದ್ಯಂತ ಬಂದ್ಗೆ ಕರೆಕೊಟ್ಟಿದೆ. ಈ ಕುರಿತು ಮಾಹಿತಿ ನೀಡಿದ ಕರ್ನಾಟಕ ಸಂಘಟನೆಗಳ
ಒಕ್ಕೂಟದ ಮುಖಂಡ ನಾಗೇಶ್, ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕಳೆದ 97 ದಿನಗಳಿಂದ ನಗರದ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಶಾಸಕರು, ಸಚಿವರು ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ವರದಿ ಜಾರಿಗೆ ಯಾವುದೇ ಪ್ರಯತ್ನವನ್ನು ಮಾಡುತ್ತಿಲ್ಲ. ಹೀಗಾಗಿ, ಫೆ.13ರಂದು ರಾಜ್ಯಾದ್ಯಂತ ಬಂದ್ಗೆ ಕರೆ ನೀಡಲಾಗಿದೆ. ಈಗಾಗಲೇ ಬಂದ್ಗೆ ಜಯ ಕರ್ನಾಟಕ. ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ), ದಲಿತ ಸಂಘಟನೆಗಳ ಒಕ್ಕೂಟ (ರಂಗಸ್ವಾಮಿ ಬಣ), ಅಂಬೇಡ್ಕರ್ಸೇನೆ, ಚಾಲಕರ ಸಂಘಟನೆ ಒಕ್ಕೂಟ, ಆಟೋ ಯೂನಿಯನ್ ಸಂಘಟನೆಗಳು, ಲಾರಿ ಮಾಲೀಕರ ಸಂಘ, ಸಿಐಟಿಯು ಕಾರ್ಮಿಕ ಸಂಘಟನೆಗಳು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಚಲನಚಿತ್ರ ವಾಣಿಜ್ಯ ಮಂಡಳಿ, ದಲಿತ ನಾಯಕ ಮಾವಳ್ಳಿ ಶಂಕರ್, ಎಸ್ಡಿಪಿಐ,ಅಂಬೇಡ್ಕರ್ ದಲಿತ ಸೇನೆ ಸೇರಿ 400ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿದ್ದು, ಮೂವತ್ತಕ್ಕೂ ಹೆಚ್ಚು ಮಠಗಳ ಸ್ವಾಮೀಜಿಗಳು ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಫೆ.13ರಂದು ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಹೇಳಿದರು. ಈ ಮಧ್ಯೆ, ಅನಗತ್ಯ ನಷ್ಟ, ಸಾರ್ವಜನಿಕರಿಗೆ ತೊಂದರೆ ಎಂದು ಈ ಬಂದ್ಗೆ ಕೆಲ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ