Cauvery issue ಕನ್ನಡ ಸಂಘಟನೆ ಒಕ್ಕೂಟದಿಂದ ಸೆ.29ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್
Team Udayavani, Sep 25, 2023, 1:16 PM IST
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಸೆ.29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾಳಿನ ಬೆಂಗಳೂರು ಬಂದ್ ಗೆ ನಮ್ಮ ಬೆಂಬಲ ಇಲ್ಲ. ಅವರು ನಮ್ಮ ಸಲಹೆಗಳನ್ನು ಪಡೆದಿಲ್ಲ. ಅದೊಂದು ರಾಜಕೀಯ ಪ್ರೇರಿತ ಬಂದ್ ಆಗಿದೆ ಎಂದು ದೂರಿದರು.
ಬಂದನ್ನು ಕೇವಲ ಬೆಂಗಳೂರಿಗೆ ಸೀಮಿತ ಮಾಡಲಾಗಿದೆ. ಬೆಳಗಾವಿ, ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ, ದಕ್ಷಿಣ ಕರ್ನಾಟಕ, ಮಂಗಳೂರು ಪ್ರದೇಶಗಳನ್ನು ಕಾವೇರಿ ಬಂದ್ ನಿಂದ ದೂರಿ ಇರಿಸಿರುವುದು ಸರಿಯಲ್ಲ. ಆ ಹಿನ್ನೆಲೆಯಲ್ಲಿ ಅಖಂಡ ಕರ್ನಾಟಕ್ಕೆ ಕರೆ ನೀಡಲಾಗಿದೆ ಎಂದರು.
ಇದನ್ನೂ ಓದಿ:Diamond Search: ರಸ್ತೆಯಲ್ಲಿ ವಜ್ರದ ಹರಳು ಹುಡುಕಲು ಮುಗಿಬಿದ್ದ ಜನರು…ವಿಡಿಯೋ ವೈರಲ್
ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿ ಕನ್ನಡಪರ ಸಂಘಟನೆಗಳು ಬಂದ್ ಬೆಂಬಲ ನೀಡಿವೆ. ದೆಹಲಿವರೆಗೂ ನಮ್ಮ ಹೋರಾಟದ ಬಿಸಿ ಮುಟ್ಟಲಿದೆ ಎಂದು ತಿಳಿಸಿದರು.
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಯುವುದನ್ನು ವಿರೋಧಿಸಿ ನಾಳೆ ರಾಜಭವನ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ