ಇದು ಚುನಾವಣಾ ಬಜೆಟ್, ರೈತರಿಗಿಲ್ಲ ರಿಲೀಫ್
Team Udayavani, Mar 15, 2017, 6:32 PM IST
ನಿರೀಕ್ಷೆಯಂತೆಯೇ ಮುಂದಿನ ವರ್ಷದ ವಿಧಾನಸಭೆ ಚುನಾವಣೆಯನ್ನು ದೃಷ್ಟಿಕೋನದಲ್ಲಿಟ್ಟುಕೊಂಡು ಎಲ್ಲಾ ವರ್ಗಗಳ ಓಲೈಕೆಸುವಿಕೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಮಂಡಲದ ಅಧಿವೇಶನದಲ್ಲಿ 2017-18ನೇ ಸಾಲಿನ 1,86, 561 ಕೋಟಿ ರೂ. ಗಾತ್ರದ “ಜನಪ್ರಿಯ” ಬಜೆಟ್ (ಸಿದ್ದು ಲೆಕ್ಕಾಚಾರ;ಬಜೆಟ್ ಹೈಲೈಟ್ಸ್) ಮಂಡಿಸಿದ್ದಾರೆ. ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಘಟನೆಯ ನಡುವೆಯೂ ಈ ಬಾರಿಯೂ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡದೆ ಶೂನ್ಯ ಬಡ್ಡಿದರದಲ್ಲಿ ಶೇ.3 ಲಕ್ಷದವರೆಗೆ ಸಾಲ ಸೌಲಭ್ಯ ಮುಂದುವರಿಸಲಾಗಿದೆ. ಬೆಂಗಳೂರಿನಲ್ಲಿ ಅಮ್ಮಾ ಕ್ಯಾಂಟೀನ್ ಮಾದರಿಯಲ್ಲೇ ನಮ್ಮ ಕ್ಯಾಂಟೀನ್ ಆರಂಭಿಸುವುದಾಗಿ ಘೋಷಿಸಿದ್ದಾರೆ. ಮೆಟ್ರೋ, ಬಿಬಿಎಂಪಿ ರಸ್ತೆಗಳಿಗೆ ಬಂಪರ್ ಕೊಡುಗೆ. ಬೆಂಗಳೂರಿನ ವಾಹನ ದಟ್ಟಣೆ ನಿಯಂತ್ರಿಸಲು ಕ್ರಮ, ಬೆಂಗಳೂರು ವನ್ ಮಾದರಿಯಲ್ಲಿ ಕರ್ನಾಟಕ ವನ್ ಜಾರಿ, 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನು ಘೋಷಿಸಲಾಗಿದೆ. ಜನಪ್ರತಿನಿಧಿಗಳ ಗೌರವ ಧನ ಹೆಚ್ಚಳ, ಕೃಷಿ, ವಿದ್ಯುತ್, ನೀರಾವರಿ, ಶಿಕ್ಷಣ,ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಲಾಗಿದೆ. ಕನ್ನಡ ಚಿತ್ರರಂಗ, ಮೀನುಗಾರಿಕೆ, ಮಹಿಳೆಯರು, ವೃದ್ಧರಿಗೆ ಬಜೆಟ್ ನಲ್ಲಿ ಆದ್ಯತೆ ಕೊಡಲಾಗಿದೆ. ರಾಯಚೂರಿನಲ್ಲಿ ವಿವಿ ಸ್ಥಾಪನೆ…ಹೀಗೆ ಹತ್ತು ಹಲವು ಯೋಜನೆಗಳ ಕೊಡುಗೆ ನೀಡಿರುವ ಸಿದ್ದರಾಮಯ್ಯ ಇದು ಅಭಿವೃದ್ಧಿ ಪರ ಬಜೆಟ್ ಎಂದು ವ್ಯಾಖ್ಯಾನಿಸಿದ್ದಾರೆ. ಆದರೆ ಬಿಜೆಪಿ ಇದು ರೈತ ವಿರೋಧಿ ಬಜೆಟ್ ಎಂದು ಟೀಕಿಸಿದೆ. ಏತನ್ಮಧ್ಯೆ ರೈತರ ಸಾಲ ಮನ್ನಾ ಕುರಿತಂತೆ ಮೊದಲು ಕೇಂದ್ರ ರೈತರ ಸಾಲ ಮನ್ನಾ ಮಾಡಲಿ, ಈ ಬಗ್ಗೆ ರಾಜ್ಯ ಬಿಜೆಪಿ ಮುಖಂಡರು ದೆಹಲಿಯಲ್ಲಿ ಧರಣಿ ನಡೆಸಿ ಒತ್ತಡ ಹೇರಲಿ ಎಂದು ಸಿಎಂ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್