ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ 500 ಕೋಟಿ, ಜಾತಿವಾರು ನಿಗಮ, ಮಠಗಳಿಗೆ ವಿಶೇಷ ಅನುದಾನ
ಸಚಿವ ಸಂಪುಟದಲ್ಲಿ ಬಜೆಟ್ ಅನುಮೋದನೆಗೆ ಅಂಗೀಕಾರ ಪಡೆದು ವಿಧಾನಸೌಧಕ್ಕೆ ಆಗಮಿಸಿದ್ದರು.
Team Udayavani, Mar 8, 2021, 1:29 PM IST
ಬೆಂಗಳೂರು: ಕೋವಿಡ್ 19 ಸೋಂಕಿನ ಆರ್ಥಿಕ ಸಂಕಷ್ಟದ ನಡುವೆಯೂ 2021-22ನೇ ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ(ಮಾರ್ಚ್ 08) ಮಂಡಿಸಿದ್ದು, ಈ ವರ್ಷವೂ ಮಠಗಳು, ಜಾತಿವಾರು ನಿಗಮಗಳಿಗೆ ಅನುದಾನ ಘೋಷಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಬಜೆಟ್ 2021: ಪೆಟ್ರೋಲ್, ಡೀಸೆಲ್ ಹಾಗೂ ಅಬಕಾರಿ ತೆರಿಗೆ ಹೆಚ್ಚಳ ಇಲ್ಲ
ವೀರಶೈವ ಲಿಂಗಾಯತ ಅಭಿವೃದ್ಧಿಗೆ 500 ಕೋಟಿ ರೂಪಾಯಿ, ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂಪಾಯಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 500 ಕೋಟಿ ರೂಪಾಯಿ, ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 50 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ.
ಆದಿಚುಂಚನಗಿರಿ ನಾಥ ಪರಂಪರೆ ಮಠಕ್ಕೆ 10 ಕೋಟಿ ರೂಪಾಯಿ ಅನುದಾನ, ಅಯೋಧ್ಯೆಯ ಶ್ರೀರಾಮಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಅನುದಾನವನ್ನು ಬಿಎಸ್ ವೈ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಅಲ್ಪಸಂಖ್ಯಾತರಿಗೆ ಅನುದಾನ:
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂಪಾಯಿ, ಅಲ್ಪಸಂಖ್ಯಾತ ಸಮುದಾಯಗಳ ವಿವಿಧ ಕಲ್ಯಾಣ ಅಭಿವೃದ್ಧಿಗಾಗಿ 1,500 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿರುವುದಾಗಿ ಬಿಎಸ್ ವೈ ತಿಳಿಸಿದ್ದಾರೆ.
2021ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ಬಿಎಸ್ ಯಡಿಯೂರಪ್ಪನವರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಸಚಿವ ಸಂಪುಟದಲ್ಲಿ ಬಜೆಟ್ ಅನುಮೋದನೆಗೆ ಅಂಗೀಕಾರ ಪಡೆದು ವಿಧಾನಸೌಧಕ್ಕೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
ರಾಜ್ಯದ ವಿವಿಧೆಡೆ ಉತ್ತಮ ಮಳೆ : ಮಂಗಳೂರು ರಸ್ತೆ ಬದಿ ಕುಸಿತ, ಎರಡು ದಿನ ಎಲ್ಲೋ ಅಲರ್ಟ್
ಮುಷ್ಕರ ನಿರತರಿಂದ 60 ಬಸ್ಸುಗಳಿಗೆ ಹಾನಿ,152 ಕೋಟಿ ರೂ.ಆದಾಯ ನಷ್ಟ : ಸಚಿವ ಲಕ್ಷ್ಮಣ ಸವದಿ
ಶಾಸಕ ರಾಜುಗೌಡಗೂ ಕೋವಿಡ್ ಪಾಸಿಟಿವ್ ;ಬೆಂಗಳೂರು ಆಸ್ಪತ್ರೆಗೆ ದಾಖಲು
ಕರ್ನಾಟಕದಲ್ಲಿಂದು 11,265 ಕೋವಿಡ್ ಹೊಸ ಪ್ರಕರಣಗಳು ಪತ್ತೆ
MUST WATCH
ಹೊಸ ಸೇರ್ಪಡೆ
ಮಾಜಿ ಶಾಸಕ, ಅಪ್ಪಟ ಗಾಂಧಿವಾದಿ ಸದಾಶಿವರಾವ್ ಭೋಸಲೆ ಇನ್ನಿಲ್ಲ
ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ
ಬುಕಿಯಿಂದ ಬಿಟ್ ಕಾಯಿನ್, ಪತ್ನಿಗಾಗಿ ಐಫೋನ್ ಪಡೆದಿದ್ದ ಹೀತ್ ಸ್ಟ್ರೀಕ್ ಗೆ 8 ವರ್ಷ ನಿಷೇಧ!
ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್