ಗೌರ್ನರ್‌ ನಡೆ, ಬಿಎಸ್‌ವೈ ಪ್ರಮಾಣವಚನ, ಕಾನೂನು ಜಿಜ್ಞಾಸೆ


Team Udayavani, Jul 27, 2019, 5:00 AM IST

BSBNP-(24)

ಬೆಂಗಳೂರು: ರಾಜ್ಯ ರಾಜಕಾರಣದ ಸದ್ಯದ ಬೆಳವಣಿಗೆ ಗಳು ಸಾಕಷ್ಟು ಕಾನೂನು ‘ಜಿಜ್ಞಾಸೆ’ ಮೂಡಿಸಿದ್ದು, ಮುಂದೆ ಇದು ನ್ಯಾಯಾಂಗದ ‘ಅಂಗಳ’ ತಲುಪುವ ಲಕ್ಷಣಗಳು ನಿಚ್ಚಳವಾಗಿವೆ. ತಕ್ಷಣಕ್ಕೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಬಹುಮತವನ್ನೂ ಸಾಬೀತುಪಡಿಸ ಬಹುದು. ಆದರೆ, ಮುಂದಿನ ದಿನಗಳಲ್ಲಿ ಕಾನೂನು ಅಡೆ ತಡೆಗಳು ಎದುರಾಗಲೂಬಹುದು.

ಈ ಮಧ್ಯೆ, ಮೂವರು ಶಾಸಕರ ಅನರ್ಹತೆ, 13 ಮಂದಿ ಶಾಸಕರ ರಾಜೀನಾಮೆ ಪ್ರಕರಣ ಇತ್ಯರ್ಥಕ್ಕೆ ಬಾಕಿ ಇರುವಾಗ ಸದನದ ಒಟ್ಟು ಸಂಖ್ಯಾಬಲದ ಪ್ರಕಾರ ಬಹುಮತಕ್ಕೆ ಬೇಕಾದ ಸಂಖ್ಯೆಯ ಬಗ್ಗೆ ಸ್ಪಷ್ಟತೆ ಇಲ್ಲದಿರುವಾಗ ಹೊಸ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟ ರಾಜ್ಯಪಾಲರ ನಡೆಯ ಬಗ್ಗೆಯೂ ವಿಭಿನ್ನ ಕಾನೂನು ವಿಶ್ಲೇಷಣೆಗಳು ಮೂಡಿ ಬರುತ್ತಿವೆ.

ಸದನದ ಸದ್ಯದ ಸಂಖ್ಯಾಬಲದ ಆಧಾರದಲ್ಲಿ ಸರ್ಕಾರ ರಚನೆಗೆ ಯಡಿಯೂರಪ್ಪನವರಿಗೆ ಪ್ರಮಾಣ ವಚನ ಸ್ವೀಕಾರಕ್ಕೆ ರಾಜ್ಯಪಾಲರು ಒಪ್ಪಿಗೆ ಕೊಟ್ಟಿರುವುದು ಕಾನೂನು ರೀತಿ ಸಮ್ಮತವಾಗಿದೆ ಎಂದು ಕೆಲವು ಕಾನೂನು ತಜ್ಞರು ಹೇಳಿದರೆ, ರಾಜ್ಯಪಾಲರ ಈ ನಡೆ ಸಂವಿಧಾನ ಮತ್ತು ಕಾನೂನು ಬಾಹಿರ. ಇದು ನ್ಯಾಯಾ ಲಯದಲ್ಲಿ ಪ್ರಶ್ನಿಸಲೇಬೇಕಾದ ಮತ್ತು ನ್ಯಾಯಾಂಗ ಮಧ್ಯಪ್ರವೇಶಿಸಲು ಅರ್ಹ ಪ್ರಕರಣವಾಗಿದೆ ಎಂದು ಕೆಲ ಕಾನೂನು ತಜ್ಞರು ಅಭಿಪ್ರಾಯಪಡುತ್ತಾರೆ.

ಈ ಹಿನ್ನೆಲೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರೂ ಬಹುಮತ ಸಾಬೀತುಪಡಿಸುವುದು ಯಡಿ ಯೂರಪ್ಪನವರಿಗೆ ಸದ್ಯದ ಮಟ್ಟಿಗೆ ಒಂದು ಸವಾಲು ಆಗುವುದರಲ್ಲಿ ಸಂದೇಹವಿಲ್ಲ. ಏಕೆಂದರೆ ಮೂವರು ಶಾಸಕರು ಅನರ್ಹಗೊಂಡಿದ್ದಾರೆ. 13 ಮಂದಿ ಶಾಸಕರ ಭವಿಷ್ಯ ಸದ್ಯ ಸ್ಪೀಕರ್‌ ಕೈಯಲ್ಲಿದೆ. ಒಂದೊಮ್ಮೆ ಈ ಎಲ್ಲ 13 ಶಾಸಕರನ್ನು ಸ್ಪೀಕರ್‌ ಅನರ್ಹಗೊಳಿಸಿದರೆ ಎಲ್ಲರೂ ಕಾನೂನು ಹೋರಾಟಕ್ಕೆ ಮುಂದಾಗುವುದು ಖಚಿತ. ಅತೃಪ್ತ ಶಾಸಕರು ಸಲ್ಲಿಸಿದ ಅರ್ಜಿಯು ವಿಸ್ತೃತ ವಿಚಾರಣೆಗೆ ಸುಪ್ರೀಂಕೋರ್ಟ್‌ ಮುಂದಿದೆ. ಹೀಗಾಗಿ, ಒಂದಿಷ್ಟು ಕಾನೂನು ತೊಡಕುಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆಯನ್ನು ಅಲ್ಲಗಳೆಯುಂತಿಲ್ಲ.

ರಾಜ್ಯಪಾಲರ ಕ್ರಮ ಸರಿ: ರಾಜೀನಾಮೆ ಕೊಟ್ಟಿರುವ 13 ಮಂದಿ ಶಾಸಕರು ವಾಪಸ್‌ ಬರುವ ಅಥವಾ ರಾಜೀನಾಮೆ ಹಿಂದಕ್ಕೆ ಪಡೆಯುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಹೀಗಿರುವಾಗ ಅವರು ಸದನಕ್ಕೆ ಬರುವ ಸಾಧ್ಯತೆಗಳೂ ಇಲ್ಲ. ಅದರಂತೆ ಎಚ್.ಡಿ. ಕುಮಾರ ಸ್ವಾಮಿಯವರು ವಿಶ್ವಾಸಮತ ಯಾಚನೆ ವೇಳೆ ಇದ್ದ ಸಂಖ್ಯಾಬಲ ಈಗಲೂ ಅನ್ವಯವಾಗುತ್ತದೆ. ಹಾಗಾಗಿ, ಯಡಿಯೂರಪ್ಪನವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಿದ ಹಾಗೂ ಆ ಮೂಲಕ ಹೊಸ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿರುವ ರಾಜ್ಯಪಾಲರ ಕ್ರಮ ಕಾನೂನು ರೀತಿಯಲ್ಲಿ ಸರಿಯಾಗಿಯೇ ಇದೆ ಎಂದು ಹೈಕೋರ್ಟ್‌ ವಕೀಲ ಅರುಣ್‌ ಶ್ಯಾಮ್‌ ಹೇಳುತ್ತಾರೆ.

ಸಂವಿಧಾನಬಾಹಿರ ನಡೆ: 13 ಶಾಸಕರ ರಾಜೀನಾಮೆ ಪ್ರಕರಣ ಇನ್ನೂ ಇತ್ಯರ್ಥಕ್ಕೆ ಬಾಕಿ ಇದೆ. ಹೀಗಾಗಿ, ಮೂವರು ಶಾಸಕರ ಅನರ್ಹತೆ ಬಳಿಕ ಸದನದ ಈಗಿನ ಸಂಖ್ಯಾಬಲ 222 ಆಗುತ್ತದೆ. ಅದರಂತೆ ಬಹುಮತಕ್ಕೆ 112 ಸಂಖ್ಯೆ ಬೇಕಾಗುತ್ತದೆ. ಈಗ ಬಿಜೆಪಿ ಬಳಿ ಇರುವುದು ಪಕ್ಷೇತರ ಶಾಸಕ ಸೇರಿ 106 ಸಂಖ್ಯಾಬಲ. ಇನ್ನೂ 6 ಸಂಖ್ಯೆಯ ಕೊರತೆ ಇದೆ. ಹೀಗಿರುವಾಗ ರಾಜ್ಯಪಾಲರು ಪ್ರಮಾಣವಚನ ಸ್ವೀಕಾರಕ್ಕೆ ಅನುಮತಿ ಕೊಟ್ಟಿರುವುದು ಸಂವಿಧಾನಬಾಹಿರ ಮತ್ತು ಕಾನೂನುಬಾಹಿರ. ರಾಜ್ಯಪಾಲರ ಈ ಕ್ರಮವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದು ಸುಪ್ರೀಂಕೋರ್ಟ್‌ ವಕೀಲ ಕೆ.ವಿ. ಧನಂಜಯ್‌ ಅಭಿಪ್ರಾಯಪಡುತ್ತಾರೆ.

ಅಂಗೀಕಾರವೋ, ಅನರ್ಹತೆಯೋ?

ಸ್ಪೀಕರ್‌ ಅವರು ಮೂವರು ಶಾಸಕರನ್ನು ಅನರ್ಹಗೊಳಿಸಿ ಆಗಿದೆ. ಈಗ 13 ಮಂದಿ ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣ ಸದ್ಯ ಸ್ಪೀಕರ್‌ ಅಂಗಳದಲ್ಲಿದೆ. ಒಂದೆರಡು ದಿನಗಳಲ್ಲಿ ತೀರ್ಮಾನ ಮಾಡುವುದಾಗಿ ಸ್ಪೀಕರ್‌ ಹೇಳಿದ್ದಾರೆ. ಅತೃಪ್ತ ಶಾಸಕರ ಬಗ್ಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಪ್ರತ್ಯೇಕವಾಗಿ ಸ್ಪೀಕರ್‌ ಅವರಿಗೆ ದೂರು ಕೊಟ್ಟಿವೆ. ಶಾಸಕರು ಅನರ್ಹಗೊಂಡರೆ ಸದ್ಯದ ಮಟ್ಟಿಗೆ ಬಿಜೆಪಿಗೆ ಹೆಚ್ಚು ಅನುಕೂಲ. ರಾಜೀನಾಮೆ ಅಂಗೀಕಾರವಾದರೆ, ರಾಜಕೀಯವಾಗಿ ಅವರನ್ನು ನಿಭಾಯಿಸುವ ಅನಿರ್ವಾಯತೆ ಇರುತ್ತದೆ. ರಾಜೀನಾಮೆ ತಿರಸ್ಕಾರಗೊಂಡರೆ ಸಂಖ್ಯಾಬಲ ಏರಿಳಿತವಾಗಿ, ರಾಜಕೀಯ ಲೆಕ್ಕಾಚಾರಗಳು ತಲೆಕೆಳಗಾಗುತ್ತವೆ. ಆದರೆ, ಅಂತಹ ಸಾಧ್ಯತೆ ತೀರಾ ಕಡಿಮೆ. ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರವಾಗುತ್ತೂ ಅಥವಾ ಅವರು ಅನರ್ಹಗೊಳ್ಳುತ್ತಾರೆಯೋ ಅನ್ನುವುದನ್ನು ಕಾದು ನೋಡಬೇಕಿದೆ.
ಕಾನೂನು ಹೋರಾಟ ಸುಲಭವಲ್ಲ

ಅನರ್ಹಗೊಂಡಿರುವ ಮೂವರು ಶಾಸಕರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಸ್ಪೀಕರ್‌ ತೀರ್ಮಾನ ಆಧರಿಸಿ 13 ಮಂದಿಯೂ ಕಾನೂನು ಹೋರಾಟಕ್ಕೆ ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಅನರ್ಹಗೊಂಡರೆ ಕಾನೂನು ಹೋರಾಟಕ್ಕೆ ನೆರವು ನೀಡುವುದಲ್ಲದೆ ಪ್ರಕರಣ ತ್ವರಿತ ಇತ್ಯರ್ಥವಾಗುವಂತೆ ನೋಡಿಕೊಳ್ಳಲಾಗುವುದು ಎಂದು ಅತೃಪ್ತ ಶಾಸಕರಿಗೆ ಬಿಜೆಪಿ ಭರವಸೆ ಕೊಟ್ಟಿದೆ ಎಂದು ಹೇಳಲಾಗಿದೆ. ಆದರೆ, ಕಾನೂನು ಹೋರಾಟ ಕಾಲಮಿತಿಯೊಳಗೆ ಅಂತ್ಯ ಕಾಣುವುದು ಅಷ್ಟು ಸುಲಭವಲ್ಲ. ಈಗಾಗಲೇ ಅತೃಪ್ತ ಶಾಸಕರ ಅರ್ಜಿ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಅವರು ನೇರವಾಗಿ ಸುಪ್ರೀಂ ಮೆಟ್ಟಿಲೇರಬಹುದು ಅಥವಾ ಹೈಕೋರ್ಟ್‌ಗೆ ಮೊರೆ ಹೋಗಬಹುದು. ಮೊದಲು ಹೈಕೋರ್ಟ್‌ಗೆ ಹೋಗಿ ಎಂದು ಸುಪ್ರೀಂಕೋರ್ಟ್‌ ಹೇಳಲೂಬಹುದು. 2010ರಲ್ಲಿ ಅನರ್ಹಗೊಂಡಿದ್ದ 11 ಮಂದಿ ಬಿಜೆಪಿ ಶಾಸಕರು ಹಾಗೂ ಐವರು ಪಕ್ಷೇತರರು ತಮ್ಮ ‘ಅರ್ಹತೆ’ ಸಾಬೀತುಪಡಿಸಲು ಸುದೀರ್ಘ‌ 9 ತಿಂಗಳ ಕಾಲ ಕಾನೂನು ಹೋರಾಟ ನಡೆಸ ಬೇಕಾಯಿತು.

ಬಿಜೆಪಿಯವರು ರಾಜ್ಯಪಾಲರಿಗೆ ಸರ್ಕಾರ ರಚನೆಯ ಪ್ರಸ್ತಾವನೆ ಮಂಡಿಸಿದ್ದಾರೆ. ಅದಕ್ಕೆ ಅವರು ಅನುಮತಿ ಕೊಟ್ಟಿದ್ದಾರೆ. ಒಂದು ವಾರದಲ್ಲಿ ಬಹುಮತ ಸಾಬೀತು ಪಡಿಸಬೇಕಷ್ಟೇ. ಇದರಲ್ಲಿ ನನ್ನ ಪ್ರಕಾರ ಕಾನೂನು ಸಮಸ್ಯೆ ಪ್ರಶ್ನೆ ಬರುವುದಿಲ್ಲ. ಬಹುಮತ ಸಾಬೀತುಪಡಿಸುವಾಗ ಅನರ್ಹಗೊಳ್ಳದೇ ಇರುವ ಶಾಸಕರಿಂದ ಸಮಸ್ಯೆ ಉಂಟಾಗಬಹುದು.
– ಅಶೋಕ ಹಾರನಹಳ್ಳಿ, ಮಾಜಿ ಅಡ್ವೋಕೇಟ್‌ ಜನರಲ್‌

13 ಶಾಸಕರ ರಾಜೀನಾಮೆ ವಿಚಾರ ಇತ್ಯರ್ಥ ಬಾಕಿ ಇರುವಾಗ, ಅವರು ಸದನದಲ್ಲಿ ಈಗಲೂ ಆಯಾ ಪಕ್ಷದ ಸದಸ್ಯರಾಗಿ ಮುಂದುವರಿಯುತ್ತಾರೆ. ಹೀಗಾಗಿ ರಾಜ್ಯಪಾಲರು ಅನುಮತಿ ಕೊಟ್ಟಿರುವುದು ನೇರವಾಗಿ ಸಂವಿಧಾನದ ಉಲ್ಲಂಘನೆಯಾಗಿದೆ. ಮೇಲಾಗಿ ಇದೊಂದು ರಾಜಕೀಯ ಪ್ರಶ್ನೆಯಾಗಿರುವುದರಿಂದ ಸದನದಲ್ಲಿ ಸಾಬೀತಾಗುವ ಬಹುಮತವೇ ಅಂತಿಮವಾಗಲಿದೆ.
– ಪ್ರೊ. ರವಿವರ್ಮ ಕುಮಾರ್‌, ಮಾಜಿ ಅಡ್ವೋಕೇಟ್‌

ಜನರಲ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರು ಆಹ್ವಾನ ನೀಡಿರುವುದರಲ್ಲಿ ಯಾವ ಕಾನೂನು ತಪ್ಪೂ ಇಲ್ಲ. ಅಷ್ಟಕ್ಕೂ ಬಹುಮತ ಇದೆಯೋ, ಇಲ್ಲವೋ ಎಂದು ತಲೆ ಎಣಿಕೆ ಮಾಡುವ ಕೆಲಸ ರಾಜ್ಯಪಾಲರದ್ದಲ್ಲ. ಅದನ್ನು ಸದನದಲ್ಲಿ ಸಾಬೀತುಪಡಿಸುವಂತೆ ಅವರು ನಿರ್ದೇಶನ ನೀಡುತ್ತಾರೆ. ಸದನ ನಡೆದು ವಿಶ್ವಾಸಮತ ಯಾಚನೆಯ ವೇಳೆ ಯಾವ ಪಕ್ಷದ ಬಳಿ ಹೆಚ್ಚು ಸಂಖ್ಯೆ ಇರುತ್ತದೊ ಆ ಪಕ್ಷ ಸದನದ ವಿಶ್ವಾಸಪಡೆದುಕೊಳ್ಳುತ್ತದೆ.
– ಬಿ.ವಿ. ಆಚಾರ್ಯ, ಮಾಜಿ ಅಡ್ವೋಕೇಟ್‌ ಜನರಲ್‌

-ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.