ರಾಜ್ಯದಲ್ಲೂ ಕಲ್ಲಿದ್ದಲು ಹಗರಣ,ಸಿಎಂರಿಂದ 418 ಕೋಟಿ ಲೂಟಿ; BSY
Team Udayavani, Oct 21, 2017, 1:04 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ ಕೆಪಿಸಿಎಲ್(ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್)ನ ಬೃಹತ್ ಕಲ್ಲಿದ್ದಲು ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಶನಿವಾರ ದಾಖಲೆಯನ್ನು ಬಿಡುಗಡೆ ಮಾಡಿದ್ದು, ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ 418 ಕೋಟಿ ರೂಪಾಯಿ ಲೂಟಿ ಮಾಡಿರುವುದಾಗಿ ಗಂಭೀರವಾಗಿ ಆರೋಪಿಸಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಮತ್ತು ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘಿಸಿ ರಾಜ್ಯ ಸರ್ಕಾರದ ಹಣವನ್ನು ಸಿಎಂ ಲೂಟಿ ಮಾಡಿರುವುದಾಗಿ ದೂರಿದರು. ಕಲ್ಲಿದ್ದಲು ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಬಿಎಸ್ ವೈ ಆಗ್ರಹಿಸಿದ್ದಾರೆ.
ಕಲ್ಲಿದ್ದಲು ಪೂರೈಕೆ ಹಗರಣದಲ್ಲಿ 418 ಕೋಟಿ ರೂಪಾಯಿ ಲೂಟಿ ಹೊಡೆಯಲಾಗಿದೆ. ಇದರಲ್ಲಿ ಕೆಪಿಸಿಎಲ್ ಅಧ್ಯಕ್ಷರು, ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಶಾಮೀಲಾಗಿದ್ದಾರೆ.ಸಿಎಂ ಕೆಇಸಿಎಲ್ಎಂನ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಬಿಎಸ್ ವೈ ಆರೋಪಿಸಿದರು.
ಕಳೆದ 30ವರ್ಷಗಳಲ್ಲಿ ಕಂಡು ಕೇಳರಿಯದ ಹಗರಣ ಇದಾಗಿದೆ.ಕೋರ್ಟ್ ಆದೇಶ ಉಲ್ಲಂಘಿಸಿ 24ಗಂಟೆಯೊಳಗೆ ಶೇ.26ರಷ್ಟು ದಂಡವನ್ನು ಕೆಪಿಸಿಎಲ್ ಬದಲು ರಾಜ್ಯ ಸರ್ಕಾರವೇ ಭರಿಸಿದೆ. ಕೆಪಿಸಿಎಲ್ ಜವಾಬ್ದಾರಿ ಶೇ.24ರಷ್ಟು ಮಾತ್ರ ಇದೆ. ಕೋರ್ಟ್ ಆದೇಶ ಉಲ್ಲಂಘಿಸಿ ದಂಡ ಕಟ್ಟಿದ್ದೇಕೆ? ಹಾಗಾದರೆ 24ಗಂಟೆಯೊಳಗೆ ನಡೆದ ಒಳಒಪ್ಪಂದ ಏನು? ಸಿಎಂ ಇದರಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ಸಿಎಂ ಹಗಲು ದರೋಡೆಯನ್ನು ಕೇಂದ್ರದ ಗಮನಕ್ಕೆ ತರುವುದಾಗಿ ಬಿಎಸ್ ವೈ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು