ಮಳೆಗಾಗಿ ಹೋಮದ ಮೊರೆ ಹೋದ ಸಿದ್ದು ಸರ್ಕಾರ, 20 ಲಕ್ಷ ರೂ. ಖರ್ಚು!
Team Udayavani, Jun 1, 2017, 7:47 PM IST
ಬೆಂಗಳೂರು:ಮೂಢನಂಬಿಕೆ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಇದೀಗ ಮಳೆಗಾಗಿ ಲಕ್ಷಾಂತರ ರೂಪಾಯಿ ವ್ಯಯಿಸಿ ಹೋಮ, ಹವನ ನಡೆಸಲು ಮುಂದಾಗಿದೆ.
ರಾಜ್ಯದಲ್ಲಿ ತೀವ್ರ ಬರ ಹಿನ್ನೆಲೆಯಲ್ಲಿ ಮಳೆಗಾಗಿ ಸಿಎಂ ಅವರ ಸೂಚನೆ ಮೇರೆಗೆ ಹೋಮ ನಡೆಸಲು ಎಲ್ಲಾ ಸಿದ್ಧತೆ ಮಾಡಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದರೆ, ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೋಮ, ಹವನಕ್ಕೆ ರಾಜ್ಯ ಸರ್ಕಾರದಿಂದ ಹಣ ನೀಡಿಲ್ಲ. ಹೋಮ, ಹವನದ ಮೇಲೆ ನಂಬಿಕೆ ಇಲ್ಲ ಎಂದಿರುವುದು ವಿವಾದಕ್ಕೆ ಗ್ರಾಸವಾಗಿದೆ.
ಕೊಡಗಿನ ಕಾವೇರಿ ನದಿ ಮೂಲದ ಭಾಗಮಂಡಲದಲ್ಲಿ ಹಾಗೂ ಕೃಷ್ಣಾ ನದಿ ಮೂಲ ಮಹಾಬಲೇಶ್ವರದಲ್ಲಿ ಪರ್ಜನ್ಯ ಹೋಮ ನಡೆಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಎರಡೂ ಹೋಮಗಳಿಗೂ 20 ಲಕ್ಷ ರೂಪಾಯಿ ವ್ಯಯಿಸಲಾಗುತ್ತಿದೆ. ಕೇರಳದ ಪಂಡಿತರನ್ನು ಕರೆಯಿಸಿ ಹೋಮ ಮಾಡಿಸಲು ಜಲಸಂಪನ್ಮೂಲ ಇಲಾಖೆ ನಿರ್ಧರಿಸಿದೆ ಎಂದು ಮೂಲಗಳು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಜೂನ್ 2ರಂದು ಕೃಷ್ಣಾ ನದಿ ಮೂಲದ ಮಹಾಬಲೇಶ್ವರದಲ್ಲಿ ಮತ್ತು ಜೂನ್ 4ರಂದು ಭಾಗಮಂಡಲದಲ್ಲಿ ಪರ್ಜನ್ಯ ಹೋಮ ನಡೆಯಲಿದೆ ಎಂದು ವರದಿ ಹೇಳಿದೆ.
ಪರ್ಜನ್ಯ ಹೋಮ ಅಲ್ಲ, ಸರ್ಕಾರದ ನಡೆಗೆ ಸಚಿವ ಎಂಬಿ ಪಾಟೀಲ್ ಸಮರ್ಥನೆ:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೋಮ, ಹವನದ ಮೇಲೆ ನಂಬಿಕೆ ಇಟ್ಟಿಲ್ಲ. ಆದರೆ ಅವರು ದೇವರನ್ನು ನಂಬುತ್ತಾರೆ. ಹಾಗಾಗಿ ರೈತರ, ಜನರ ಕಷ್ಟ ನಿವಾರಣೆಗಾಗಿ ಪರ್ಜನ್ಯ ಪ್ರಾರ್ಥನೆ ಮಾಡಲಾಗುತ್ತಿದೆ, ಹೋಮ, ಹವನ ನಡೆಸುತ್ತಿಲ್ಲ ಎಂದು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.
ಮಳೆಗಾಗಿ ರಾಜ್ಯ ಸರ್ಕಾರವೇ ಪರ್ಜನ್ಯ ಪ್ರಾರ್ಥನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. ಆದರೆ ಮುಖ್ಯಮಂತ್ರಿಗಳಿಗೆ ಇದರಲ್ಲಿ ನಂಬಿಕೆ ಇಲ್ಲವಲ್ಲಾ ಎಂಬ ಪ್ರಶ್ನೆಗೆ ಅವರಿಗೆ ಹೋಮ, ಹವನದಲ್ಲಿ ನಂಬಿಕೆ ಇಲ್ಲ. ದೇವರ ಮೇಲೆ ನಂಬಿಕೆ ಇದೆ. ಪೂಜೆ ಮಾಡಲು ಅವರಿಂದ ಯಾವುದೇ ಆಕ್ಷೇಪ ಇಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ?
MUST WATCH
ಹೊಸ ಸೇರ್ಪಡೆ
Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ
Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
Kangaroo; ಥ್ರಿಲ್ಲರ್ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು