ಇಡಿ ಕಚೇರಿಗೆ ಡಿಕೆ ಶಿವಕುಮಾರ್ ಹಾಜರು: ಕಿಡಿ ಕಾರಿದ ಸಹೋದರ
ಬಿಜೆಪಿ ಕಚೇರಿಯಲ್ಲಿ ಸ್ಕ್ರಿಪ್ಟ್ ಬರೆಯಲಾಗುತ್ತದೆ ...
Team Udayavani, Sep 19, 2022, 2:22 PM IST
Photo, News and Video Source: ANI
ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರ ದೆಹಲಿಯ ಇಡಿ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ.
ಅಕ್ರಮ ಹಣ ಸಾಗಣೆ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ಅವರಿಗೆ ಗುರುವಾರ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿತ್ತು. ಈ ಬಗ್ಗೆ ಸ್ವತಃ ಡಿ.ಕೆ. ಶಿವಕುಮಾರ್ ಅವರೇ ಟ್ವಿಟರ್ ಮೂಲಕ ಮಾಹಿತಿ ನೀಡಿ”ಕರ್ನಾಟಕದಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತಿರುವಾಗಲೂ ದೆಹಲಿಯಲ್ಲಿ ಇಡಿಯಿಂದ ತಮಗೆ ಸಮನ್ಸ್ ಬಂದಿದೆ” ಎಂದು ಸೆ. 15 ರಂದು ಟ್ವೀಟ್ ಮಾಡಿದ್ದರು.
ನಾನು ತನಿಖಾ ಸಂಸ್ಥೆಗೆ ಎಲ್ಲ ರೀತಿ ಸಹಕರಿಸಲು ಸಿದ್ಧ. ಆದರೆ, ಅವರು ಸಮನ್ಸ್ ಕೊಟ್ಟಿರುವ ಸಮಯ ಮಾತ್ರ ಅನುಮಾನಾಸ್ಪದವಾಗಿದೆ ಎಂದಿದ್ದರು.
ಡಿಕೆ ಸುರೇಶ್ ಕಿಡಿ
”ಅವರು ಯಾವ ಪ್ರಕರಣದಲ್ಲಿ ಕರೆದಿದ್ದಾರೆ ಎಂಬುದು ತಿಳಿದಿಲ್ಲ. ಏಜೆನ್ಸಿಗಳನ್ನು ಕೇಂದ್ರ ಸರಕಾರ ದುರ್ಬಳಕೆ ಮಾಡಿಕೊಂಡಿವೆ. ಇದು ರಾಜಕೀಯ ದ್ವೇಷ. ಚುನಾವಣೆಗೆ 6 ತಿಂಗಳಿರುವಾಗ ಎದುರಾಳಿಗಳ ನ್ನು ಗುರಿಯಾಗಿರಿಸಿಕೊಂಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸ್ಕ್ರಿಪ್ಟ್ ಬರೆಯಲಾಗುತ್ತದೆ ಅದನ್ನು ಇಡಿ ಕಚೇರಿಯಲ್ಲಿ ಕಾರ್ಯರೂಪಕ್ಕೆ ತರಲಾಗುತ್ತದೆ” ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಕಿಡಿ ಕಾರಿದ್ದಾರೆ.
#WATCH | Karnataka Congress chief DK Shivakumar reaches ED office in Delhi
He had tweeted on September 15th that he has been summoned by ED in Delhi even as the Assembly session is underway in Karnataka. pic.twitter.com/GaJu2jE4Ao
— ANI (@ANI) September 19, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ