ಲಾಕ್ಡೌನ್ ಒಂದೇ ಮದ್ದು ಎಂದು ಸರ್ಕಾರ ನಂಬಿಕೊಂಡಂತಿದೆ: ಕಾಂಗ್ರೆಸ್
Team Udayavani, May 4, 2021, 11:47 AM IST
ಬೆಂಗಳೂರು: ಕೋವಿಡ್ ಸೋಂಕು ತಡೆಗೆ ಲಾಕ್ಡೌನ್ ಒಂದೇ ಮದ್ದು ಎಂದು ಸರ್ಕಾರ ನಂಬಿಕೊಂಡಂತಿದೆ, ಪೂರ್ವ ತಯಾರಿ, ಸ್ಪಷ್ಟ ಕಾರ್ಯತಂತ್ರವಿಲ್ಲದ ಏಕಾಏಕೀಯ ಲಾಕ್ಡೌನ್ನಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಿದ್ದರು. ಸೂಕ್ತ ತಪಾಸಣೆ, ಐಸೋಲೇಶನ್, ಚಿಕಿತ್ಸೆಯ ವ್ಯವಸ್ಥೆ ಮಾಡದ ಪರಿಣಾಮ ಈಗ ಜಿಲ್ಲಾ ಕೇಂದ್ರಗಳಲ್ಲೂ ಸೋಂಕು ಉಲ್ಬಣಗೊಳ್ಳುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.
ನಾವು ಈ ಹಿಂದೆಯೇ ಜಿಲ್ಲಾ ಕೇಂದ್ರಗಳತ್ತ ಗಮನ ಹರಿಸಿ ಎಂದು ಎಚ್ಚರಿಸಿದ್ದೆವು, ಸರ್ಕಾರ ಎಚ್ಚರಗೊಳ್ಳದ ಪರಿಣಾಮ ಈಗ ರಾಜ್ಯಾದ್ಯಾಂತ ಬೆಂಗಳೂರಿನ ಸ್ಥಿತಿಯೇ ನಿರ್ಮಾಣವಾಗಿ ಎಲ್ಲೆಡೆಯಿಂದಲೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ, ಆಕ್ಸಿಜನ್, ಬೆಡ್, ಔಷಧಗಳಿಲ್ಲದ ಸುದ್ದಿಗಳು ಬರತೊಡಗಿದೆ. ಮೂಲಸೌಕರ್ಯಗಳಿಲ್ಲದ ಜಿಲ್ಲೆಗಳ ಸ್ಥಿತಿ ಶೋಚನೀಯವಾಗಿದೆ ಎಂದಿದೆ.
ಇದನ್ನೂ ಓದಿ:ಕೊಪ್ಪಳ : ಆಕ್ಸಿಜನ್ ಕೊರತೆ : ಸೋಂಕಿತರನ್ನು ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆಗಳ ಹಿಂದೇಟು
ಬಿ.ಎಸ್.ಯಡಿಯೂರಪ್ಪನವರೇ, ಉಸ್ತುವಾರಿ ಮಂತ್ರಿಗಳನ್ನು ಆಯಾ ಜಿಲ್ಲೆಗಳಲ್ಲೇ ಠಿಕಾಣಿ ಹೂಡಿಸಿ, ಪ್ರತಿ ಕುಂದು ಕೊರತೆಗಳನ್ನು ನಿಭಾಯಿಸುವಂತೆ ಆದೇಶ ಹೊರಡಿಸಿ. ಆಶಾ ಕಾರ್ಯಕರ್ತೆಯರ ಮೂಲಕ ಹಳ್ಳಿಗಳಿಗೆ ತೆರಳಿದವರನ್ನು ಗುರುತಿಸಿ ಟೆಸ್ಟ್ ಮಾಡಿಸಿ, ಐಸೋಲೇಶನ್ ವ್ಯವಸ್ಥೆ ಮಾಡಿ. ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿನ ಸ್ಥಿತಿಗತಿಯ ವರದಿ ಪಡೆಯಿರಿ ಎಂದು ಕಾಂಗ್ರೆಸ್ ಸಲಹೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ