ಕರ್ನಾಟಕ ಚುನಾವಣಾ ಫಲಿತಾಂಶ; ಘಟಾನುಘಟಿ ಸಚಿವರಿಗೆ ಸೋಲಿನ ರುಚಿ!


Team Udayavani, May 15, 2018, 6:21 PM IST

lost-ministees.jpg

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಹೊರಬಿದ್ದಿದ್ದು, ಯಾವ ಪಕ್ಷಕ್ಕೂ ಸರಳ ಬಹುಮತ ಸಿಗದೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಘಟಾನುಘಟಿ ಸಚಿವರುಗಳಿಗೆ ಮತದಾರರು ಸೋಲಿನ ರುಚಿ ತೋರಿಸಿದ್ದಾರೆ.

ಸೋತ ಪ್ರಮುಖ ಸಚಿವರು:

ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೊಳಲ್ಕೆರೆ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಚಂದ್ರಪ್ಪ ಪರಾಜಯಗೊಳಿಸಿದ್ದಾರೆ. ಕಾಂಗ್ರೆಸ್ ನ ಆಂಜನೇಯ 69,036 ಮತ ಗಳಿಸಿದ್ದರೆ, ಬಿಜೆಪಿಯ ಚಂದ್ರಪ್ಪ 1,07, 976 ಮತ ಗಳಿಸಿದ್ದಾರೆ.

ಬಂಟ್ವಾಳದಲ್ಲಿ ಸಚಿವ ರಮಾನಾಥ್ ರೈ ಬಿಜೆಪಿಯ ರಾಜೇಶ್ ನಾಯ್ಕ ಉಳೇಪಾಡಿ ಸೋಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರೈ 81,831 ಮತ ಗಳಿಸಿದ್ದು, ಬಿಜೆಪಿಯ ನಾಯ್ಕ್ ಅವರು 97,802 ಮತ ಪಡೆದಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಬಿಜೆಪಿಯ ಕೆ.ರಘುಪತಿ ಭಟ್ ಸೋಲಿಸಿದ್ದಾರೆ. ಕಾಂಗ್ರೆಸ್ ನ ಮಧ್ವರಾಜ್ ಅವರು 72,902 ಮತ ಗಳಿಸಿದ್ದರೆ, ರಘುಪತಿ ಭಟ್ 84,946 ಮತ ಪಡೆದಿದ್ದರು.

ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ ಸಚಿವೆ ಉಮಾಶ್ರೀ ಅವರನ್ನು ಬಿಜೆಪಿಯ ಸಿದ್ದು ಸವದಿ ಸೋಲಿಸಿದ್ದಾರೆ. ಸಿದ್ದು ಸವದಿ ಅವರು 87,213 ಮತ ಗಳಿಸಿದ್ದರೆ, ಉಮಾಶ್ರೀ 66,324 ಮತ ಗಳಿಸಿದ್ದಾರೆ.

ಟಿ ನರಸೀಪುರದಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಜೆಡಿಎಸ್ ನ ಅಶ್ವಿನ್ ಕುಮಾರ್ ಎಂ ಸೋಲಿಸಿದ್ದಾರೆ. ಮಹದೇವಪ್ಪ 55,451 ಮತ ಪಡೆದಿದ್ದು, ಅಶ್ವಿನ್ ಕುಮಾರ್ 83,929 ಮತ ಗಳಿಸಿದ್ದಾರೆ.

ಧಾರವಾಡದಲ್ಲಿ ಸಚಿವ ವಿನಯ್ ಕುಲಕರ್ಣಿಯನ್ನು ಬಿಜೆಪಿಯ ಅಮೃತ್ ಅಯ್ಯಪ್ಪ ದೇಸಾಯಿ ಸೋಲಿಸಿದ್ದಾರೆ. ದೇಸಾಯಿ 85,123 ಮತ ಪಡೆದಿದ್ದರೆ, ಕುಲಕರ್ಣಿ 64,783 ಮತ ಗಳಿಸಿದ್ದಾರೆ.

ಕಲಘಟಗಿಯಲ್ಲಿ ಕಾಂಗ್ರೆಸ್ ನ ಸಂತೋಷ್ ಲಾಡ್ ಪರಾಜಯಗೊಂಡಿದ್ದು,ಬಿಜೆಪಿಯ ಸಿಎಂ ನಿಂಬಣ್ಣನವರ್ ಗೆಲುವು ಸಾಧಿಸಿದ್ದಾರೆ. ಲಾಡ್ 57,270 ಮತ ಪಡೆದಿದ್ದು, ಬಿಜೆಪಿಯ ನಿಂಬಣ್ಣನವರ್ 83,267 ಮತ ಗಳಿಸಿದ್ದಾರೆ.

ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದ ರುದ್ರಪ್ಪ ಲಮಾಣಿ ಅವರನ್ನು ಬಿಜೆಪಿಯ ನೆಹರೂ ಓಲೇಕಾರ್ ಪರಾಭವಗೊಳಿಸಿದ್ದಾರೆ. ಲಮಾಣಿ ಅವರು 75,261 ಮತಗಳಿಸಿದ್ದರೆ, ಓಲೇಕಾರ್ 86,565 ಮತ ಪಡೆದಿದ್ದಾರೆ.

ಯಲಬುರ್ಗಾದಲ್ಲಿ ಸಚಿವ ಬಸವರಾಜ್ ರಾಯರೆಡ್ಡಿ ಸೋತಿದ್ದು, ಬಿಜೆಪಿಯ ಎಎಚ್ ಬಸಪ್ಪ ಗೆಲುವು ಸಾಧಿಸಿದ್ದಾರೆ. ರಾಯರೆಡ್ಡಿ ಅವರು 65,754 ಮತ ಗಳಿಸಿದ್ದರೆ, ಬಿಜೆಪಿಯ ಬಸಪ್ಪ 79,072 ಮತ ಪಡೆದಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.