ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯಕ್ಕೆ ನಿರಂತರ ಸಂಕಷ್ಟವೇ: ಕಾಂಗ್ರೆಸ್ ಟೀಕೆ
Team Udayavani, May 18, 2021, 1:46 PM IST
ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ರಾಜ್ಯಕ್ಕೆ ‘ಕುಂಟು ಕುದುರೆಯ ಮೇಲೆ ಕುರುಡನ ಸವಾರಿ’ಯಂತಾಗಿದೆ. ಎಲ್ಲಿ ಹಾರುತ್ತದೋ, ಎಲ್ಲಿ ಬೀಳುತ್ತದೋ ತಿಳಿಯದೆ ಕಣ್ಮುಚ್ಚಿಕೊಂಡು ‘ದೇವರೇ ಗತಿ’ ಎನ್ನುವ ಸ್ಥಿತಿಗೆ ಬಂದಿದ್ದಾರೆ ಜನ. ಹಪಹಪಿಯಿಂದ ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯಕ್ಕೆ ನಿರಂತರ ಸಂಕಷ್ಟವೇ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಾಗ ನೆರೆ ಹಾವಳಿ, ಆ ಸಂದರ್ಭದಲ್ಲಿ ಸಂಪುಟವೇ ಇರಲಿಲ್ಲ. ಆನಂತರ ನೆರೆ ಪರಿಹಾರ ತರುವಲ್ಲಿಯೂ 25 ಸಂಸದರ ಸಹಿತ ಇಡೀ ಸರ್ಕಾರ ಸೋತಿದ್ದ ಪರಿಣಾಮ ಇಂದಿಗೂ ರಾಜ್ಯದ ಜನತೆ ಚೇತರಿಸಿಕೊಳ್ಳಲಿಲ್ಲ. ಎರಡೆರೆದು ಭಾರಿ ನೆರೆ ಬಂದಾಗಲೂ ಕೇಂದ್ರದ ಅಸಡ್ಡೆ ಧೋರಣೆಯನ್ನು ಪ್ರಶ್ನಿಸದೆ ಹೇಡಿಗಳಾಗಿ ಕುಳಿತರು, ನೆರೆ- ಬರದ ಸಂಕಷ್ಟದ ನಂತರ ರಾಜ್ಯಕ್ಕೆ ಕರೋನಾ ಭೀಕರತೆ ಎದುರಾಯಿತು, ಆಗಲೂ ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿತೆ ವಿನಃ ಜನರ ಕೈ ಹಿಡಿಯಲಿಲ್ಲ. 2ನೇ ಅಲೆಯ ಬಗ್ಗೆ ತಜ್ಞರ ಎಚ್ಚರಿಕೆಯನ್ನು ಕಡೆಗಣಿಸಿ, ಸಂಪುಟ ಕಿತ್ತಾಟ, ಸಿಡಿ ರಂಪಾಟದಲ್ಲಿ ಮುಳುಗಿತ್ತು ಬೇಜವಾಬ್ದಾರಿ ಬಿಜೆಪಿ ಸರ್ಕಾರ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಡಬಲ್ ಇಂಜಿನ್ ಸರ್ಕಾರಗಳಿಂದ ಅಭಿವೃದ್ಧಿಯ ಮಹಾಪರ್ವವೇ ಶುರುವಾಗಲಿದೆ ಎಂದು ಪುಂಗಿ ಊದಿದವರು 15ನೇ ಹಣಕಾಸು ಆಯೋಗದಲ್ಲಿ ಬರಬೇಕಾದ ಹಣವನ್ನೂ ಕೇಳಲಿಲ್ಲ, ಜಿಎಸ್ ಟಿ ಬಾಕಿ ಕೇಳಲಿಲ್ಲ, ನೆರೆ ಪರಿಹಾರ 1500 ಕೋಟಿ ಬಿಟ್ಟು ಮತ್ತೆ ಬರಲೇ ಇಲ್ಲ. ಇಷ್ಟೆಲ್ಲಾ ಅನ್ಯಾಯವಾದರೂ ಮೋದಿ ಭಜನೆ ಬಿಟ್ಟು ಬೇರೇನೂ ಮಾಡಲಿಲ್ಲ ಬಿಜೆಪಿಗರು ಎಂದು ಟೀಕಿಸಿದೆ.
ಇದನ್ನೂ ಓದಿ:ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ
ಈಗ ಕೋವಿಡ್ 2ನೇ ಅಲೆಯಿಂದ ರಾಜ್ಯ ಸ್ಮಶಾನದಂತಾಗುತ್ತಿದೆ. ಮೋದಿಯವರನ್ನು ಚಮತ್ಕಾರಿ ಬಾಬಾ ಎಂಬಂತೆ ಬಹುಪರಾಕ್ ಹಾಕುವ ಬಿಜೆಪಿ ಸಂಸದರು, ಸಚಿವರು ಆಕ್ಸಿಜನ್, ಪಿಎಂ ಕೇರ್ಸ್, ವ್ಯಾಕ್ಸಿನ್ ಎಲ್ಲದರಲ್ಲಿಯೂ ಕೇಂದ್ರ ಸರ್ಕಾರದ ಅನ್ಯಾಯವನ್ನು ಗಟ್ಟಿಯಾಗಿ ಪ್ರಶ್ನಿಸುವ ಧೈರ್ಯ ತೋರದೆ ಸರ್ವಾಧಿಕಾರಿಯ ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದೆ.
ಕರ್ನಾಟಕದ ಬಗೆಗೆ ಕೇಂದ್ರ ಸರ್ಕಾರದ ಈ ಅಸಡ್ಡೆ, ದ್ವೇಷ ಯಡಿಯೂರಪ್ಪನವರ ಕಾರಣಕ್ಕೋ, ಕನ್ನಡಿಗರ ಮೇಲಿನ ಅಸಹನೆಯ ಕಾರಣಕ್ಕೋ ಎನ್ನುವುದನ್ನ ಬಿಜೆಪಿಗರೇ ಉತ್ತರಿಸಬೇಕು. ಬಿಎಸ್ ವೈ ಮುಕ್ತ ಬಿಜೆಪಿ ಮಾಡುವ ಇವರ ಅಜೆಂಡಾದ ಆಂತರಿಕ ಕಿತ್ತಾಟದಲ್ಲಿ ಕನ್ನಡಿಗರು ತಬ್ಬಲಿಗಳಾಗುತ್ತಿದ್ದಾರೆ, ಈ ತುರ್ತು ಪರಿಸ್ಥಿತಿಯ ನಡುವೆಯೂ ಬಿಜೆಪಿ ವರ್ಸಸ್ ಬಿಜೆಪಿ ಬೇಕೇ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ