ಸಂಭ್ರಮದಿಂದ ಶಾಲೆಗೆ ಬಂದ ಚಿಣ್ಣರು
Team Udayavani, Nov 9, 2021, 6:40 AM IST
ಬೆಂಗಳೂರು: ಸೋಮವಾರ ಬಹುತೇಕ ಶಾಲೆಗಳಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು. 19 ತಿಂಗಳ ಬಳಿಕ ಎಲ್ಕೆಜಿ, ಯುಕೆಜಿ ಹಾಗೂ ಅಂಗನವಾಡಿ ಕೇಂದ್ರಗಳು ಆರಂಭಗೊಂಡ ಕಾರಣ, ಪುಟಾಣಿಗಳು ಆಸಕ್ತಿಯಿಂದ ಶಾಲೆಯತ್ತ ಹೆಜ್ಜೆ ಹಾಕಿದರು.
ಶಾಲೆಗಳಲ್ಲಿ ತಳಿರು-ತೋರಣಗಳಿಂದ ಅಲಂಕಾರ ಮಾಡಿ, ಬಣ್ಣದ ಪೇಪರ್ಗಳು, ಆಕರ್ಷಕ ಗೊಂಬೆಗಳನ್ನು ಅಳ ವಡಿಸಿ ಚಿಣ್ಣರನ್ನು ಸೆಳೆಯಲು ಶಿಕ್ಷಕರು ಪ್ರಯತ್ನಿಸಿದ್ದು ಕಂಡುಬಂತು.
ವಿ.ವಿ.: ಕಾಲೇಜು ತರಗತಿ ಆರಂಭ
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಪೂರ್ವ ಪ್ರಾಥಮಿಕ ತರಗತಿಗಳು ಸೋಮವಾರ ಆರಂಭವಾಗಿವೆ. ಜತೆಗೆ ಮಂಗಳೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಯನ್ವಯ ಸೋಮವಾರದಿಂದ 2021-22ನೇ ಸಾಲಿನ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ.
ಇದನ್ನೂ ಓದಿ:12ರ ವರೆಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಶೇ. 40ರಷ್ಟು ವಿದ್ಯಾರ್ಥಿಗಳ ಹಾಜರ್
ರಾಜ್ಯಾದ್ಯಂತ ಎಲ್ಲ ಹಂತದ ಭೌತಿಕ ತರಗತಿಗಳು ಆರಂಭಗೊಂಡಿದ್ದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.
ಸೋಮವಾರ 1ನೇ ತರಗತಿಗೆ ಶೇ. 29.21ರಷ್ಟು, 2ನೇ ತರಗತಿಗೆ ಶೇ.26.31, 3ನೇ ತರಗತಿಗೆ ಶೇ.24.82, 4ನೇ ತರಗತಿಗೆ ಶೇ.25.31, 5ನೇ ತರಗತಿಗೆ ಶೇ.25.82, 6ನೇ ತರಗತಿಗೆ ಶೇ. 30.64, 7ನೇ ತರಗತಿಗೆ ಶೇ.30.27, 8ನೇ ತರಗತಿಗೆ ಶೇ.38.09, 9ನೇ ತರಗತಿಗೆ ಶೇ.40.51 ಮತ್ತು 10ನೇ ತರಗತಿಗೆ ಶೇ.40.66ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ