ಸಚಿವಾಕಾಂಕ್ಷಿಗಳ ಪಟ್ಟು ; ಸಂಪುಟ ಪುನಾರಚನೆಗೆ ಹೆಚ್ಚಿದ ಒತ್ತಡ

ಬಿಎಸ್‌ವೈ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

Team Udayavani, Jan 20, 2022, 7:10 AM IST

ಸಚಿವಾಕಾಂಕ್ಷಿಗಳ ಪಟ್ಟು ; ಸಂಪುಟ ಪುನಾರಚನೆಗೆ ಹೆಚ್ಚಿದ ಒತ್ತಡ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸಚಿವಾಕಾಂಕ್ಷಿಗಳಿಂದ ಮತ್ತೆ ಒತ್ತಡ ಹೆಚ್ಚಿದೆ. ಬಿಜೆಪಿಯ ದಿಲ್ಲಿ ನಾಯಕರು ಪಂಚರಾಜ್ಯ ಚುನಾವಣೆಯತ್ತ ಗಮನ ಹರಿಸಿ ರುವುದರಿಂದ ಸಂಪುಟ ಪುನಾರಚನೆ ಸದ್ಯಕ್ಕಾಗದು ಎಂಬ ಊಹೆ ಇದ್ದರೂ ಆಕಾಂಕ್ಷಿಗಳು ಪ್ರಯತ್ನ ಮುಂದುವರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ವರಿಷ್ಠರು ಸಮಯ ನೀಡಿದರೆ ದಿಲ್ಲಿಗೆ ತೆರಳಿ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಲು ಚಿಂತನೆ ನಡೆಸಿದ್ದಾರೆ.

ಆದರೆ ದಿಲ್ಲಿ ನಾಯಕರು ಪಂಚರಾಜ್ಯಗಳ ಚುನಾವಣೆಯಲ್ಲಿ ವ್ಯಸ್ತರಿರುವುದರಿಂದ ಸಮಯ ಸಿಗುವುದು ಅನುಮಾನ. ಹೀಗಾಗಿ ಸಂಪುಟ ಪುನಾರಚನೆ ಚುನಾವಣೆಯ ಅನಂತರವೇ ಎನ್ನಲಾಗಿದೆ.

ಖಾಲಿ ಇರುವ ನಾಲ್ಕು ಸ್ಥಾನಗಳ ಜತೆಗೆ ಹಾಲಿ 8ರಿಂದ 10 ಸಚಿವರನ್ನು ಕೈ ಬಿಟ್ಟು ಹೊಸ ಸಂಪುಟ ರಚಿಸಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ. ಬಜೆಟ್‌ ಅಧಿವೇಶನಕ್ಕೆ ಮುನ್ನ ಪುನಾರಚನೆಗೆ ಆಗ್ರಹ ಬಜೆಟ್‌ ಅಧಿವೇಶನಕ್ಕೆ ಮುನ್ನವೇ ಸಂಪುಟ ಪುನಾರಚನೆ ಮಾಡಬೇಕು ಎಂದು ಸಚಿವಾ ಕಾಂಕ್ಷಿಗಳು ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.

ದಿಲ್ಲಿ ಭೇಟಿಗೆ ಸಮಯ?
ಸಿಎಂ ಬೊಮ್ಮಾಯಿ ಸಂಪುಟ ಪುನಾರಚನೆ ಕುರಿತು ಪಕ್ಷದ ವರಿಷ್ಠರ ಜತೆ ಚರ್ಚಿಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮಯ ಕೇಳಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಬಿಜೆಪಿಯ ಒಂದು ಮೂಲದ ಪ್ರಕಾರ ಪಂಚ ರಾಜ್ಯಗಳ ಚುನಾ ವಣೆ ಹಿನ್ನೆಲೆಯಲ್ಲಿ ವರಿಷ್ಠರು ಈ ವಿಚಾರದಲ್ಲಿ ಹೆಚ್ಚು ತಲೆ ಕೆಡಿಸಿಕೊಳ್ಳುವ ಸಾಧ್ಯತೆ ಕಡಿಮೆ.

ನಿಗಮ: ಅಧ್ಯಕ್ಷರು ಬದಲು?
ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾಯಿಸಿ, ಪಕ್ಷದ ಇತರ ಕಾರ್ಯ ಕರ್ತರಿಗೆ ಅವಕಾಶ ಮಾಡಿಕೊಡಲು ಬುಧವಾರ ತಡರಾತ್ರಿ ನಡೆದ ಸಿಎಂ ಮತ್ತು ನಳಿನ್‌ ನಡುವಿನ ಸಭೆಯಲ್ಲಿ ನಿರ್ಧರಿಸಲಾಗಿದೆ. 32 ಜನರನ್ನು ಬದಲಾಯಿಸುವ ಸಾಧ್ಯತೆಯಿದೆ. ಶಾಸಕರು ನಿಗಮ ಅಧ್ಯಕ್ಷರಾಗಿರುವಲ್ಲಿ ಬದಲಾವಣೆ ಇಲ್ಲ ಎಂದು ತಿಳಿದುಬಂದಿದೆ.

ಸಚಿವ ಸಂಪುಟ ಪುನಾರಚನೆ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ.
-ಬಸವರಾಜ ಬೊಮ್ಮಾಯಿ,
ಮುಖ್ಯಮಂತ್ರಿ

ಟಾಪ್ ನ್ಯೂಸ್

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

utದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

vidhana soudha

Karnataka: ಗ್ರಾಮ ಆಡಳಿತ ಸೌಧ ನಿರ್ಮಾಣಕ್ಕೆ ಚಿಂತನೆ

JAMEER AHMED

HDK ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದದ್ದು?- ಸಚಿವ ಜಮೀರ್‌

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.