![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ
ರಾಜ್ಯದಲ್ಲಿ ಮೊದಲ ಬಾರಿಗೆ ಹೊರಗುತ್ತಿಗೆ ಮೀಸಲು ಜಾರಿ; ಸಾಮಾಜಿಕ ನ್ಯಾಯಕ್ಕಾಗಿ ನಿಯಮ ಜಾರಿ ಕಡ್ಡಾಯ
Team Udayavani, May 21, 2024, 7:20 AM IST
![Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ](https://www.udayavani.com/wp-content/uploads/2024/05/Vidhana-Soudha-11-620x413.jpg)
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊರಗುತ್ತಿಗೆ ನೇಮಕಾತಿ ಯಲ್ಲೂ ಮೀಸಲಾತಿ ಜಾರಿಗೊಳಿಸಲಾಗಿದೆ. ಪ. ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಜತೆಗೆ ಮಹಿಳೆಯರಿಗೂ ಮೀಸಲಾತಿ ನೀಡಿ ಸರಕಾರ ಸೋಮವಾರ ಸುತ್ತೋಲೆ ಹೊರಡಿಸಿದೆ.
ಕಳೆದ ಡಿಸೆಂಬರ್ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾದಂತೆ ಈ ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯ ಸರಕಾರ ಕಚೇರಿಗಳ ವಾಹನ ಚಾಲಕರು, ಡಾಟಾ ಎಂಟ್ರಿ ಅಪರೇಟರ್, ಸ್ವಚ್ಛತ ಸಿಬಂದಿ, ಗ್ರೂಪ್ ಡಿ ಮುಂತಾದ ಹುದ್ದೆಗಳಿಗೆ ಹೊರಗುತ್ತಿಗೆಯಡಿ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋ ಗಾವಕಾಶವನ್ನು ಕಲ್ಪಿಸುವ ದೃಷ್ಟಿಯಿಂದ ಹೊರ ಗುತ್ತಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸ ಲಾಗುತ್ತಿದೆ ಎಂದು ಸರಕಾರ ಹೇಳಿದೆ.
ಈ ನಿಯಮಗಳು ಸರಕಾರದ ಎಲ್ಲ ಇಲಾಖೆ ಗಳು, ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಮಂಡಳಿ ಗಳು ಮತ್ತು ವಿ.ವಿ.ಗಳಿಗೆ ಅನ್ವಯಿಸುತ್ತದೆ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಏನಿದು ಮೀಸಲಾತಿ?
ಸರಕಾರ ಸಿಬಂದಿಯನ್ನು ತಾನೇ ನೇರವಾಗಿ ನೇಮಕ ಮಾಡಿಕೊಳ್ಳುವಾಗ ಮೀಸಲಾತಿ ನೀಡಲಾಗುತ್ತದೆ. ಆದರೆ ಸರಕಾರ ಇತ್ತೀಚೆಗಿನ ದಿನಗಳಲ್ಲಿ ಡಿ ಗ್ರೂಪ್, ಸ್ವಚ್ಛತ ಸಿಬಂದಿ, ವಾಹನ ಚಾಲಕರು, ಡಾಟಾ ಎಂಟ್ರಿ ಅಪರೇಟರ್ ಹುದ್ದೆಗಳಿಗೆ ಹೊರಗುತ್ತಿಗೆಯ ಮೂಲಕ ನೇಮಕ ಮಾಡಿಕೊಳ್ಳುತ್ತಿದೆ. ಹೊರಗುತ್ತಿಗೆ ನೇಮಕದಲ್ಲಿ ಈವರೆಗೆ ಮೀಸಲಾತಿ ಅನ್ವಯ ಆಗುತ್ತಿರಲಿಲ್ಲ.
ಪರಿಣಾಮವೇನು?
ಹೊರಗುತ್ತಿಗೆ ಮೀಸಲಾತಿ ಜಾರಿಗೊಳಿಸುವುದರಿಂದ ತಮಗೆ ತೋಚಿದಂತೆ ನೇಮಕಾತಿ ಮಾಡಿಕೊಳ್ಳುವ ವ್ಯವಸ್ಥೆಗೆ ಕಡಿವಾಣ ಬೀಳುತ್ತದೆ. ಸಮಾಜದ ವಿವಿಧ ವರ್ಗದ ಜನರಿಗೆ ಹೊರಗುತ್ತಿಗೆಯ ಮೂಲಕ ಉದ್ಯೋಗ ಪಡೆಯುವ ಅವಕಾಶ ಹೆಚ್ಚಾಗಲಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವ ಕಾಶದ ಆಶಯ ಇದರ ಉದ್ದೇಶ.
ಷರತ್ತುಗಳೇನು?
-45 ದಿನಗಳಿಗಿಂತ ಕಡಿಮೆ ಅವಧಿಯ ಹೊರ ಗುತ್ತಿಗೆಯಡಿ ನೇಮಕಾತಿಗೆ ಮೀಸಲಾತಿ ಅನ್ವಯಿಸುವುದಿಲ್ಲ.
-ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಈ ಮೀಸಲಾತಿ ನಿಯಮ ಜಾರಿ ಸಾಧ್ಯ.
-ಹೊರ ಸಂಪನ್ಮೂಲ ಏಜೆನ್ಸಿಗಳು ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬಂದಿಯನ್ನು ಪಡೆಯುವ ಷರತ್ತು ನಮೂದಿಸಬೇಕು.
-ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣ ದಲ್ಲಿ ಕನಿಷ್ಠ ಶೇ. 33 ಮಹಿಳೆಯರನ್ನು ನೇಮಕ ಮಾಡಬೇಕು. ನೇಮಕಗೊಂಡ ಅಭ್ಯರ್ಥಿ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಅದೇ ಪ್ರವರ್ಗಕ್ಕೆ ಸೇರಿದ ಅಭ್ಯರ್ಥಿಯನ್ನು ನೇಮಿಸಿಕೊಳ್ಳಬೇಕು.
-ನೇಮಕಗೊಳ್ಳುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 60 ವರ್ಷ ಆಗಿರಬೇಕು. ಈ ನೌಕರರನ್ನು ಯಾವುದೇ ಕಾರಣಕ್ಕೂ ಖಾಯಂ ಮಾಡಲು ಅವಕಾಶವಿಲ್ಲ.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
![mudhola](https://www.udayavani.com/wp-content/uploads/2024/07/mudhola-1-150x87.jpg)
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
![ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ](https://www.udayavani.com/wp-content/uploads/2024/07/KRISHNA-NADI-150x84.jpg)
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.