ಸ್ಥಳೀಯ ಸಂಸ್ಥೆಗಳಿಗೆ ‘ಹೈ’ಶಾಕ್! ಇತ್ತೀಚೆಗೆ ಅಧ್ಯಕ್ಷ- ಉಪಾಧ್ಯಕ್ಷರಾದವರ ಮುಂದಿನ ದಾರಿಯೇನು?
Team Udayavani, Nov 19, 2020, 6:07 PM IST
ಮಣಿಪಾಲ: ರಾಜ್ಯ ಸರ್ಕಾರ ಈ ಹಿಂದೆ ಹೊರಡಿಸಿದ್ದ ರಾಜ್ಯದ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಆದೇಶವನ್ನು ಗುರುವಾರ ಹೈಕೋರ್ಟ್ ರದ್ದುಗೊಳಿಸಿದೆ. ಈ ಆದೇಶದಿಂದ ಇತ್ತೀಚೆಗಷ್ಟೇ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದವರಿಗೆ ಆತಂಕ ಆರಂಭವಾಗಿದೆ.
ಅಕ್ಟೋಬರ್ 8ರಂದು ರಾಜ್ಯದ ಒಟ್ಟು 277 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಬಹಳಷ್ಟು ಕಡೆ ಚುನಾವಣೆ ನಡೆದು ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದೆ. ಈ ಆದೇಶದಿಂದ ಈ ಚುನಾವಣಾ ಫಲಿತಾಂಶಗಳು ಅಮಾನತು ಸ್ಥಿತಿಯಲ್ಲಿರುತ್ತದೆ. ಅಂದರೆ ಅಧ್ಯಕ್ಷ ಉಪಾಧ್ಯಕ್ಷರು ಯಾವುದೇ ಅಧಿಕಾರ ನಡೆಸುವಂತಿಲ್ಲ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 11 ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿದೆ. ಮೂರು ಪುರಸಭೆ, ಮೂರು ಪುರಸಭೆ ಮತ್ತು ನಾಲ್ಕು ಪಟ್ಟಣ ಪಂಚಾಯತ್ ಗಳಿಗೆ ಚುನಾವಣೆ ನಡೆದು, ಫಲಿತಾಂಶ ಪ್ರಕಟವಾಗಿದೆ.
ಇದನ್ನೂ ಓದಿ:ನಗರಸಭೆ, ಪುರಸಭೆ, ಪ.ಪ ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ರದ್ದು ಮಾಡಿದ ಹೈಕೋರ್ಟ್
ಸದ್ಯ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲವಕಾಶ ನೀಡಲಾಗಿದೆ. ಮೇಲ್ಮನವಿ ಸಲ್ಲಿಸಿದಲ್ಲಿ ಹೈಕೋರ್ಟ್ ನ ವಿಭಾಗೀಯ ಪೀಠ ಇದರ ವಿಚಾರಣೆ ನಡೆಸಲಿದ್ದು, ಅದು ನೀಡುವ ತೀರ್ಪು ಅಂತಿಮವಾಗಿರಲಿದೆ.
ಕರಾವಳಿಯಲ್ಲಿ ಚುನಾವಣೆ ನಡೆದ ಸ್ಥಳೀಯ ಸಂಸ್ಥೆಗಳು
ನಗರ ಸಭೆಗಳು
ಉಳ್ಳಾಲ
ಪುತ್ತೂರು
ಉಡುಪಿ
ಪುರಸಭೆಗಳು
ಬಂಟ್ವಾಳ
ಕಾರ್ಕಳ
ಕುಂದಾಪುರ
ಪಟ್ಟಣ ಪಂಚಾಯತಿಗಳು
ಸಾಲಿಗ್ರಾಮ
ಮೂಲ್ಕಿ
ಬೆಳ್ತಂಗಡಿ
ಸುಳ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ