ಸಂತ್ರಸ್ತೆಯನ್ನು ಪಾಟೀ ಸವಾಲಿಗೊಳಪಡಿಸಬಹುದು

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ

Team Udayavani, Mar 26, 2022, 7:50 AM IST

ಸಂತ್ರಸ್ತೆಯನ್ನು ಪಾಟೀ ಸವಾಲಿಗೊಳಪಡಿಸಬಹುದು

ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಸಂತ್ರಸ್ತರು ಪ್ರತಿಕೂಲ ಸಾಕ್ಷ್ಯ ನುಡಿದರೆ ಅವರನ್ನೂ ಪಾಟೀ ಸವಾಲಿಗೆ ಒಳಪಡಿಸಬಹುದು ಎಂದು ಹೈಕೋರ್ಟ್‌ ಹೇಳಿದೆ.

ಪೋಕ್ಸೊ ಪ್ರಕರಣವೊಂದರಲ್ಲಿ ವ್ಯತಿರಿಕ್ತ ಹೇಳಿಕೆ ನೀಡಿದ್ದ ಸಂತ್ರಸ್ತೆಯನ್ನು ಪಾಟೀ ಸವಾಲಿಗೆ ಒಳಪಡಿಸಲು ಅನುಮತಿ ನಿರಾಕರಿಸಿದ್ದ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ಪೋಕ್ಸೊ ಕಾಯ್ದೆ-2012ರ ಸೆಕ್ಷನ್‌ 33 (2)ರ ಪ್ರಕಾರ ಅಪ್ರಾಪ್ತ ವಯಸ್ಕ ಸಂತ್ರಸ್ತರು ಪ್ರತಿಕೂಲ ಸಾಕ್ಷ್ಯ ನುಡಿದ ಸಂದರ್ಭ ಅವರನ್ನು ಪಾಟೀ ಸವಾಲಿಗೆ ಒಳಪಡಿಸಲು ಅವಕಾಶವಿದೆ. ಆದರೆ, ಪಾಟೀ ಸವಾಲಿನ ವೇಳೆ ಕೇಳುವ ಪ್ರಶ್ನೆಗಳನ್ನು ಸರಕಾರಿ ಅಭಿಯೋಜಕರು ಅಥವಾ ಇತರ ಆರೋಪಿಗಳ ಪರ ವಕೀಲರು ವಿಶೇಷ ನ್ಯಾಯಾಲಯದ ಮುಂದಿಡಬೇಕು. ಅದೇ ಪ್ರಶ್ನೆಗಳನ್ನು ನ್ಯಾಯಾಲಯ ಸಂತ್ರಸ್ತರ ಮುಂದಿಟ್ಟು, ಅವರಿಂದ ವಿವರಣೆ ಪಡೆಯಬೇಕು. ಸೆಕ್ಷನ್‌ 33 (2) ಪ್ರಕಾರ ಇದು ಕಡ್ಡಾಯ ಪ್ರಕ್ರಿಯೆಯೂ ಆಗಿದೆ. ಆದ್ದರಿಂದ, ಪೋಕ್ಸೊ ಕಾಯ್ದೆಯ ನಿಯಮಗಳ ಅನುಸಾರವೇ ಸಂತ್ರಸ್ತರ ಪಾಟೀ ಸವಾಲು ನಡೆಸಬೇಕು. ಈ ವೇಳೆ ವಿಚಾರಣಾ ನ್ಯಾಯಾಲಯದ ನ್ಯಾಯಾ ಧೀಶರೂ ಸಾಕಷ್ಟು ಎಚ್ಚರ ವಹಿಸಬೇಕು ಎಂದು ಹೈಕೋರ್ಟ್‌ ಹೇಳಿದೆ.

ಪಾಟೀ ಸವಾಲು ನಡೆಸಲು ಸರಕಾರಕ್ಕೆ ಅನುಮತಿ ನಿರಾಕರಿಸಿ ವಿಚಾರಣಾ ಕೋರ್ಟ್‌ ಹೊರಡಿಸಿದ್ದ ಆದೇಶ ರದ್ದುಪಡಿಸಿರುವ ಹೈಕೋರ್ಟ್‌, ಪ್ರಕರಣವನ್ನು ಮತ್ತೆ ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಿದೆ. ಜತೆಗೆ, ಪೋಕ್ಸೊ ಕಾಯ್ದೆ ಸೆಕ್ಷನ್‌ 33 (2) ಪ್ರಕಾರ ಸಂತ್ರಸ್ತೆಯನ್ನು ಪಾಟೀ ಸವಾಲಿಗೆ ಒಳಪಡಿಸಲು ಸರಕಾರಿ ಅಭಿಯೋಜಕರಿಗೆ ಅನುಮತಿ ನೀಡುವಂತೆ ಸೆಷನ್ಸ್‌ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಪ್ರಕರಣವೇನು?
2018ರ ಡಿ. 2ರಂದು ಬಾಲಕಿಯೊಬ್ಬಳಿಗೆ ಮದುವೆ ಮಾಡಲಾಗಿತ್ತು. ವಯಸ್ಕಳಲ್ಲ ಎಂದು ತಿಳಿದಿದ್ದರೂ ಆಕೆಯೊಂದಿಗೆ ಪತಿ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎನ್ನುವ ಆರೋಪದಲ್ಲಿ 2019ರ ಎ. 29ರಂದು ಚಾಮರಾಜನಗರ ಪೂರ್ವ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪೊಲೀಸರು ಐಪಿಸಿ 376(ಎನ್‌), ಪೋಕ್ಸೊ ಕಾಯ್ದೆ ಹಾಗೂ ಬಾಲ್ಯ ವಿವಾಹ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಬಾಲಕಿಯ ಪತಿ ಮತ್ತು ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯ ದಲ್ಲಿ 2019ರ ಸೆ. 16ರಂದು ಸಾಕ್ಷ್ಯಗಳ ಹೇಳಿಕೆ ದಾಖಲಿಸಿಕೊಳ್ಳುವಾಗ, ಸಂತ್ರಸ್ತೆ ಪ್ರತಿಕೂಲ ಸಾಕ್ಷ್ಯ ನುಡಿದಿದ್ದಳು. ಇದರಿಂದ, ಸರಕಾರ ಸಂತ್ರಸ್ತೆಯನ್ನು ಪಾಟೀ ಸವಾಲಿಗೆ ಒಳಪಡಿಸಲು ವಿಚಾರಣಾ ನ್ಯಾಯಾಲಯದ ಅನುಮತಿ ಕೇಳಿತ್ತು. ಆದರೆ, ವಿಚಾರಣಾ ಕೋರ್ಟ್‌ ಸರಕಾರಕ್ಕೆ ಅನುಮತಿ ನಿರಾಕರಿಸಿತ್ತು.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.