ಅಕ್ರಮ ಗಣಿಗಾರಿಕೆ ಕೇಸ್; IAS ಅಧಿಕಾರಿ ಗಂಗಾರಾಮ್ ಬಡೇರಿಯಾ ಬಂಧನ
Team Udayavani, May 15, 2017, 5:57 PM IST
ಬೆಂಗಳೂರು:ಅಕ್ರಮ ಗಣಿಗಾರಿಕೆಯ ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಐಎಎಸ್ ಅಧಿಕಾರಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಅವರನ್ನು ಲೋಕಾಯುಕ್ತ ಎಸ್ ಐಟಿ ಅಧಿಕಾರಿಗಳು ಬಂಧಿಸಿರುವ ಘಟನೆ ಸೋಮವಾರ ನಡೆದಿದೆ. ಸೇವೆಯಲ್ಲಿರುವಾಗಲೇ ಬಂಧನಕ್ಕೊಳಗಾದ ಮೊದಲ ಐಎಎಸ್ ಅಧಿಕಾರಿಯಾಗಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಐಟಿ ಅಕ್ರಮ ಗಣಿಗಾರಿಕೆ ಪ್ರಕರಣದ ಮರು ತನಿಖೆ ಆರಂಭಿಸಿತ್ತು. ಎಸ್ ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ ಬಳಿಕ ಬಡೇರಿಯಾ ಅವರನ್ನು ಬಂಧಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ನ್ಯಾ. ಸಂತೋಷ್ ಹೆಗ್ಡೆ ಅವರು ಲೋಕಾಯುಕ್ತ ನ್ಯಾಯಮೂರ್ತಿ ಆಗಿದ್ದಾಗ ಅಕ್ರಮ ಗಣಿಗಾರಿಕೆ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. 1989ರ ಬ್ಯಾಚ್ ನ ಅಧಿಕಾರಿಯಾಗಿರುವ ಗಂಗಾರಾಮ್ ಬಡೇರಿಯಾ ಅವರು ಅಕ್ರಮದಲ್ಲಿ ಶಾಮೀಲಾಗಿದ್ದರು ಎಂಬ ಹೆಸರು ವರದಿಯಲ್ಲಿತ್ತು.