ಕೆಎಸ್ಆರ್ಟಿಸಿ ಸಿಬಂದಿ ಕೊರತೆ; ನಿವೃತ್ತ ಚಾಲಕರ ಮೊರೆ
Team Udayavani, May 18, 2022, 7:05 AM IST
ಬೆಂಗಳೂರು: ಕೋವಿಡ್ ಅನಂತರ ಜನಜೀವನ ಸಹಜಸ್ಥಿತಿಗೆ ಮರಳಿದ್ದು, ಬಸ್ ಸೇವೆಗಳು ಕೂಡ ಹೆಚ್ಚಿದೆ. ಜನರದಟ್ಟಣೆಗೆ ಅನುಗುಣವಾಗಿ ಬಸ್ಗಳ ಕಾರ್ಯಾಚರಣೆಗೆ ಈಗ ಕೆಎಸ್ಆರ್ಟಿಸಿಯಲ್ಲಿ ಚಾಲನ ಸಿಬಂದಿ ಕೊರತೆ ಉಂಟಾಗಿದೆ!
ಬೇಡಿಕೆ ಹೆಚ್ಚಿರುವ ನಡುವೆಯೇ ಆರ್ಥಿಕ ಸಂಕಷ್ಟ ಉಂಟಾದ ಹಿನ್ನೆಲೆಯಲ್ಲಿ ಚಾಲ್ತಿಯಲ್ಲಿದ್ದ ಚಾಲನ ಸಿಬಂದಿ ನೇಮಕಾತಿ ಪ್ರಕ್ರಿಯೆ ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಆದ್ದರಿಂದ ನಿವೃತ್ತ ಚಾಲಕರ ಮೊರೆಹೋಗಿರುವ ಕೆಎಸ್ಆರ್ಟಿಸಿ, ಕಳೆದ ಮೂರು ವರ್ಷಗಳಲ್ಲಿ ನಾಲ್ಕೂ ಸಾರಿಗೆ ನಿಗಮಗಳಲ್ಲಿ ನಿವೃತ್ತಿ ಹೊಂದಿದ 63 ವರ್ಷ ಮೀರಿರದ ಚಾಲಕರನ್ನು ಮೂರು ತಿಂಗಳ ಮಟ್ಟಿಗೆ ತಾತ್ಕಾಲಿಕ ಆಧಾರದ ಮೇಲೆ ಚಾಲಕರನ್ನಾಗಿ ನೇಮಿಸಿಕೊಳ್ಳಲು ಉದ್ದೇಶಿಸಿದೆ.
ಮಂಗಳೂರಿನಲ್ಲೂ ವರದಿ ಮಾಡಿಕೊಳ್ಳಬಹುದು
ಈ ಸಂಬಂಧ ಕೆಲವು ಷರತ್ತಿಗೊಳಪಟ್ಟು ನಿಗಮದ ಹಲವು ವಿಭಾಗ ಗಳಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದೆ. ಆಸಕ್ತ ಚಾಲಕರು ಸೂಕ್ತ ದಾಖಲೆಗಳೊಂದಿಗೆ ಪುತ್ತೂರು, ರಾಮನಗರ, ಚಾಮರಾಜನಗರ, ಮಂಗಳೂರು ವಿಭಾಗಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲುವಂತೆ ತಿಳಿಸಿದೆ. ದೈಹಿಕವಾಗಿ ಚಾಲನ ವೃತ್ತಿ ನಿರ್ವಹಣೆಗೆ ಸಮರ್ಥರಿದ್ದು, ವೈದ್ಯಕೀಯ ಪ್ರಮಾಣಪತ್ರ ಹಾಜರುಪಡಿಸಬೇಕು. ಪ್ರತೀ ದಿನದ 8 ಗಂಟೆಗಳ ಚಾಲನ ಅವಧಿಗೆ ಗೌರವಧನ ಪಾವತಿಸಲಾಗುವುದು. ಎಂಟು ಗಂಟೆ ಅನಂತರದಲ್ಲಿನ ಪ್ರತೀ ಗಂಟೆಗೆ ಹೆಚ್ಚುವರಿ ಭತ್ತೆ ನೀಡಲಾಗುವುದು ಎಂದು ಕೆಎಸ್ಆರ್ಟಿಸಿ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ