ಸಚಿವರ ಗೈರು: ಕಾಂಗ್ರೆಸ್ ಸದಸ್ಯರಿಂದ ತರಾಟೆ
Team Udayavani, Sep 15, 2022, 8:50 PM IST
ಬೆಂಗಳೂರು: ಪ್ರಶ್ನೋತ್ತರ ವೇಳೆಯಲ್ಲಿ ಸಚಿವರ ಗೈರು ಕುರಿತು ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.
ಗುರುವಾರ ಬೆಳಗ್ಗೆ 11 ಗಂಟೆಗೆ ಆರಂಭವಾಗಬೇಕಾಗಿದ್ದ ಕಲಾಪ, ಸದಸ್ಯರು ಬಾರದ ಕಾರಣ 11.20ಕ್ಕೆ ಪ್ರಾರಂಭವಾಯಿತು. ಸ್ಪೀಕರ್ ಪ್ರಶ್ನೋತ್ತರ ಕಲಾಪ ಆರಂಭಿಸಲು ಮುಂದಾದಾಗ ವಿಪಕ್ಷ ಉಪನಾಯಕ ಯು. ಟಿ. ಖಾದರ್, ಇಲ್ಲಿ ಯಾವ ಮಂತ್ರಿಗಳೂ ಇಲ್ಲ. ಸೀಟುಗಳೆಲ್ಲ ಖಾಲಿಯಾಗಿವೆ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್, ಪ್ರಶ್ನೋತ್ತರಕ್ಕೆ ಯಾರು ಬೇಕೋ ಅವರಿದ್ದಾರೆ ಎಂದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ನ ಕೃಷ್ಣಬೈರೇಗೌಡ, ಸಚಿವರು ಮೊದಲೇ ಅಧಿವೇಶನಕ್ಕೆ ಸರಿಯಾಗಿ ಬರುತ್ತಿಲ್ಲ. ಪೀಠದಿಂದ ಇಂತಹ ಅಭಿಪ್ರಾಯ ವ್ಯಕ್ತವಾದರೆ ಗೈರಾಗಲು ಅನುಮತಿ ಸಿಕ್ಕಂತೆ ಎಂದು ಭಾವಿಸುತ್ತಾರೆ ಎಂದರು.
ಆಗ ಸ್ಪೀಕರ್ ಪ್ರತಿಕ್ರಿಯಿಸಿ, ಸಚಿವರ ಗೈರು ವಿಚಾರದಲ್ಲಿ ನಾನು ಎಷ್ಟು ಗಂಭೀರವಾಗಿದ್ದೇನೆ ಎಂಬುದು ನಿಮಗೂ ಗೊತ್ತಿದೆ. ಅಂತಹ ಸಮಯ ಬಂದಾಗ ನೋಡೋಣ ಎಂದರು. ಅನಂತರ ಪ್ರಶ್ನೋತ್ತರ ಕಲಾಪ ಮುಂದುವರಿಯಿತು.
ನಿರ್ಲಕ್ಷ್ಯ ಸರಿಯಲ್ಲ:
ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಪ್ರಶ್ನೆ ಬಂದಾಗ ಉತ್ತರಿಸಲು ಸಚಿವ ಡಾ| ಸಿ. ಎನ್.ಅಶ್ವತ್ಥನಾರಾಯಣ ಸದನದಲ್ಲಿರಲಿಲ್ಲ. ಇದಕ್ಕೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್, ಸಚಿವರು ಇಂಥ ನಿರ್ಲಕ್ಷ್ಯ ತೋರಿಸುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ