Karnataka Legislative Council; ಕಾಂಗ್ರೆಸ್‌ ಅಭ್ಯರ್ಥಿ 2 ದಿನದಲ್ಲಿ ಅಂತಿಮ?

ಪಟ್ಟಿ ಅಖೈರುಗೊಳಿಸಲು ನಾಳೆ ಸಿಎಂ, ಡಿಸಿಎಂ ದಿಲ್ಲಿಗೆ

Team Udayavani, May 27, 2024, 6:55 AM IST

Karnataka Legislative Council; ಕಾಂಗ್ರೆಸ್‌ ಅಭ್ಯರ್ಥಿ 2 ದಿನದಲ್ಲಿ ಅಂತಿಮ?

ಬೆಂಗಳೂರು: ವಿಧಾನಸಭಾ ಸದಸ್ಯ ಬಲದ ಆಧಾರದಲ್ಲಿ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆ ಆರಂಭವಾದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಇರುವ ಸ್ಥಾನಗಳಿಗೆ ಆಕಾಂಕ್ಷಿಗಳ ಸಂಖ್ಯೆ 10 ಪಟ್ಟು ಹೆಚ್ಚಿರುವ ಕಾರಣ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಮೇ 28-29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ದಿಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಆಕಾಂಕ್ಷಿಗಳ ಪಟ್ಟಿಯೊಂದಿಗೆ ದಿಲ್ಲಿಗೆ ಹಾರಲಿರುವ ಉಭಯ ನಾಯಕರು ಎರಡು ದಿನಗಳ ಪ್ರವಾಸದಲ್ಲಿ ಹೈಕಮಾಂಡ್‌ ಜತೆ ಚರ್ಚಿಸಿ ಕಣಕ್ಕಿಳಿಸಬೇಕಾದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ. ಸಮುದಾಯ, ಹಿರಿತನ, ಹಿಂದಿನ ವಿಧಾನಸಭಾ ಚುನಾವಣೆ ಯಲ್ಲಿ ಪಕ್ಷದ ಗೆಲುವಿಗೆ ದುಡಿದ ಮುಂಚೂಣಿ ನಾಯಕರ ಸಹಿತ ಹಲವು ಲೆಕ್ಕಾಚಾರಗಳ ಆಧಾರದಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನ ವಿಧಾನಸಭೆಯಲ್ಲಿರುವ ಸಂಖ್ಯಾಬಲದ ಆಧಾರದಲ್ಲಿ 11 ಸ್ಥಾನಗಳ ಪೈಕಿ ಏಳು ಸ್ಥಾನಗಳು ಸಿಗಲಿವೆ. ಅದರ ಹತ್ತು ಪಟ್ಟು ಅಂದರೆ 70 ಜನ ಆಕಾಂಕ್ಷಿಗಳು ಇದ್ದಾರೆ. ಇವರಲ್ಲಿ ಸಿಎಂ-ಡಿಸಿಎಂ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಮೂವರೂ ನಾಯಕರ ಬೆಂಬಲಿಗರು ಹೆಚ್ಚು-ಕಡಿಮೆ ಸಮಾನ ಸಂಖ್ಯೆಯಲ್ಲಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್ತಿನ ಮಾಜಿ ಸದಸ್ಯರು, ರಾಜ್ಯಸಭೆಯ ಮಾಜಿ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಪಟ್ಟಿಯಲ್ಲಿದ್ದು, ತಮ್ಮ ನಾಯಕರ ಮೂಲಕ ಮೇಲ್ಮನೆ ಸ್ಥಾನ ಗಿಟ್ಟಿಸಿಕೊಳ್ಳಲು ಲಾಬಿ ಮಾಡುತ್ತಿದ್ದಾರೆ. ಈ ಕುತೂಹಲಕ್ಕೆ ದಿಲ್ಲಿ ಪ್ರವಾಸದ ಅನಂತರ ತೆರೆಬೀಳಲಿದೆ.

ಶೆಟ್ಟರ್‌ ಸ್ಥಾನಕ್ಕೂ ಅಭ್ಯರ್ಥಿ ಅಂತಿಮ?
ಏಳರಲ್ಲಿ 2:2:3ರಂತೆ ಹಂಚಿಕೆ ಅಂದರೆ, ತಲಾ 2 ಸ್ಥಾನ ಗಳು ಸಿಎಂ-ಡಿಸಿಎಂ ಬೆಂಬಲಿಗರಿಗೆ ಹಾಗೂ ಉಳಿದ ಮೂರು ಸ್ಥಾನ  ಗಳನ್ನು ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಲಿದ್ದಾರೆ. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ರಾಜೀನಾಮೆ ಯಿಂದ ತೆರವಾದ ಸ್ಥಾನಕ್ಕೂ ಅಭ್ಯರ್ಥಿಯನ್ನು ಅಂತಿಮ ಗೊಳಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇಂದಿನಿಂದ ನಾಮಪತ್ರ ಸಲ್ಲಿಕೆ
ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳ ಆಯ್ಕೆಗೆ ಜೂ. 13ರಂದು ನಡೆಯಲಿರುವ ಚುನಾವಣೆಗೆ ಸೋಮವಾರ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಜೂ. 3 ಕೊನೆಯ ದಿನವಾಗಿದ್ದು, 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂ. 6 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂ. 13ರಂದು ಚುನಾವಣೆ ನಡೆದು ಅಂದೇ ಫ‌ಲಿತಾಂಶ ಪ್ರಕಟಗೊಳ್ಳಲಿದೆ. ಆಡಳಿತಾರೂಢ ಕಾಂಗ್ರೆಸ್‌ 7, ಬಿಜೆಪಿ 3 ಮತ್ತು ಜೆಡಿಎಸ್‌ 1 ಸ್ಥಾನ ಗೆಲ್ಲುವ ಅವಕಾಶವಿದ್ದು, ಅಭ್ಯರ್ಥಿಗಳ ಆಯ್ಕೆ ಕಸರತ್ತಿನಲ್ಲಿ ಆಯಾ ಪಕ್ಷಗಳ ನಾಯಕರು ನಿರತರಾಗಿದ್ದಾರೆ.

ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮೈತ್ರಿಪಕ್ಷ?
ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳ ಪೈಕಿ ಮೂರು ಸ್ಥಾನ ಗೆಲ್ಲುವ ಸಾಧ್ಯತೆಗಳಿರುವ ಬಿಜೆಪಿ ಹಾಗೂ 1 ಸ್ಥಾನ ಗೆಲ್ಲಬಲ್ಲ ಅವಕಾಶ ಇರುವ ಜೆಡಿಎಸ್‌ ಕೊನೆಯ ಕ್ಷಣದಲ್ಲಿ ಹೆಚ್ಚುವರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವ ಕುರಿತು ಗಂಭೀರ ಚಿಂತನೆ ನಡೆಸಿವೆ. ಬಿಜೆಪಿಯಲ್ಲಿ ಗೆಲ್ಲಬಲ್ಲ 3 ಸ್ಥಾನಗಳಿಗೆ 40ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಪಟ್ಟಿ ಅಂತಿಮ ಕಸರತ್ತು ನಡೆಸುವ ಸಲುವಾಗಿ ಒಂದು ಸುತ್ತಿನ ಮಾತುಕತೆ ನಡೆದಿದೆ. ಈಗ ರಾಜ್ಯ ಬಿಜೆಪಿ ಸಂಘಟನ ಕಾರ್ಯದರ್ಶಿ ಬದಲಾಗಿರುವುದರಿಂದ ಸದ್ಯದಲ್ಲೇ ರಾಜ್ಯ ನಾಯಕರು ಮತ್ತೂಂದು ಸುತ್ತಿನ ಸಮಾಲೋಚನೆ ನಡೆಸಲಿದ್ದು, ಅನಂತರ ಸಂಭಾವ್ಯರ ಪಟ್ಟಿಯನ್ನು 12ಕ್ಕೆ ಇಳಿಸಿ ಕೇಂದ್ರ ನಾಯಕರಿಗೆ ಕಳುಹಿಸಲಿದ್ದಾರೆ.

ಟಾಪ್ ನ್ಯೂಸ್

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.