ಗ್ರಾ.ಪಂ. ಸ್ವಾರಸ್ಯ-ನಾಡ, ಮುಂಡ್ಕೂರು: ಒಂದು ಮತದ ಗೆಲುವು, ತಾಯಿಗೆ ಜಯ, ಮಗನಿಗೆ ಸೋಲು!

ಬಸ್ತಿಹಳ್ಳಿ ಗ್ರಾಮದ ಶಾಂತಕುಮಾರ್ ಅವರು ಕೇವಲ ಒಂದು ಮತದ ಅಂತರದಿಂದ ಗೆಲುವು

Team Udayavani, Dec 30, 2020, 2:18 PM IST

ಗ್ರಾ.ಪಂ. ಸ್ವಾರಸ್ಯ-ನಾಡ, ಮುಂಡ್ಕೂರು: ಒಂದು ಮತದ ಗೆಲುವು, ತಾಯಿಗೆ ಜಯ, ಮಗನಿಗೆ ಸೋಲು

ಮಣಿಪಾಲ: ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿ ಪರಿಗಣಿಸಲ್ಪಟ್ಟಿರುವ ಗ್ರಾಮ ಪಂಚಾಯ್ತಿ ಚುನಾವಣೆಯ ಮತಎಣಿಕೆ ಬಿರುಸುಗೊಂಡಿದ್ದು, ಏತನ್ಮಧ್ಯೆ ಕೆಲವು ಕುತೂಹಲಕಾರಿ ಘಟನೆ ನಡೆದಿದೆ.

ಒಂದು ಮತದ ಅಂತರದಿಂದ ಗೆದ್ದ ಅದೃಷ್ಟಶಾಲಿಗಳು!

ಬೆಳ್ಮಣ್ಣು ಮುಂಡ್ಕೂರು ಗ್ರಾಮ ಪಂಚಾಯ್ತಿಯ 1ನೇ ವಾರ್ಡ್ ನಲ್ಲಿ ಸ್ಪರ್ಧಿಸಿದ್ದ ಸರಳ ಶೆಟ್ಟಿ 339 ಮತ ಪಡೆದಿದ್ದು, ಪ್ರತಿಸ್ಪರ್ಧಿ ಪ್ರೇಮಾ ಶೆಟ್ಟಿ340 ಮತ ಗಳಿಸಿ ಕೇವಲ ಒಂದು ಮತದ ಅಂತರದಿಂದ ಜಯಗಳಿಸಿದ್ದಾರೆ.

ನಾಡ ಗ್ರಾ.ಪಂನಲ್ಲಿ ಗೆಲುವು ತಂದ 1 ಮತ:

ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಚಂದ್ರಶೇಖರ್ ಆಚಾರ್ಯ ಒಂದು ಮತದ ಅಂತರದಿಂದ ಜಯ ಸಾಧಿಸಿದ್ದಾರೆ. ಚಂದ್ರಶೇಖರ್ 170 ಮತ ಪಡೆದಿದ್ದು, ಪ್ರತಿಸ್ಪರ್ಧಿ ರಾಜು ಭಂಡಾರಿ 169 ಮತ ಗಳಿಸಿ ಪರಾಜಯಗೊಂಡಿದ್ದಾರೆ.

ಒಂದು ಮತದ ಗೆಲುವು:

ಚಿತ್ರದುರ್ಗ ತಾಲೂಕಿನ ಯಳಗೋಡು ಗ್ರಾಮ ಪಂಚಾಯ್ತಿಯ ಬಸ್ತಿಹಳ್ಳಿ ಗ್ರಾಮದ ಶಾಂತಕುಮಾರ್ ಅವರು ಕೇವಲ ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಸಮಬಲದ ಫಲಿತಾಂಶ- ಟಾಸ್ ನಲ್ಲಿ ಗೆದ್ದ ಅಭ್ಯರ್ಥಿ:

ಬಾಗಲಕೋಟೆ ಜಿಲ್ಲೆಯ ಗೊರಬಾಳ ಗ್ರಾಮ ಪಂಚಾಯ್ತಿಯ ಫಲಿತಾಂಶ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು. ಇಲ್ಲಿನ ಗೋಪಶಾನಿ ವಾರ್ಡ್ ನ ಇಬ್ಬರು ಅಭ್ಯರ್ಥಿಗಳು ಸಮಾನ ಮತ ಪಡೆದಿದ್ದರು.

ಗೋಪಶಾನಿ ವಾರ್ಡ್ ನ ಮಹಾಂತೇಶ್ ಮತ್ತು ಕಳಕಪ್ಪ ತಲಾ 88 ಮತಗಳನ್ನು ಪಡೆದಿದ್ದು, ಸಮಬಲ ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಗೆಲುವು ನಿರ್ಧರಿಸಲು ಟಾಸ್  ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದರು.

ಚುನಾವಣಾಧಿಕಾರಿ ಇಬ್ಬರು ಅಭ್ಯರ್ಥಿಗಳ ಸಮ್ಮುಖದಲ್ಲಿ ಟಾಸ್ ಹಾಕಿದ್ದು, ಇದರಲ್ಲಿ ಅಭ್ಯರ್ಥಿ ಮಹಾಂತೇಶ್ ಗೆಲುವಿನ ನಗು ಬೀರಿದ್ದಾರೆ.

ಬೂಕನಕೆರೆ ಗ್ರಾ.ಪಂನಲ್ಲಿ ಲಾಟರಿ ಮೂಲಕ ಆಯ್ಕೆ!

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ತವರೂರು ಕೆಆರ್ ಪೇಟೆ ತಾಲೂಕಿನ ಬೂಕನಕೆರೆ ಗ್ರಾಮ ಪಂಚಾಯಿತಿ ಫಲಿತಾಂಶದಲ್ಲಿ ಸಮಬಲದ ಮತ ಪಡೆದಿದ ಪರಿಣಾಮ ಲಾಟರಿ ಡ್ರಾ ಮೂಲಕ ಅಭ್ಯರ್ಥಿ ಆಯ್ಕೆ ನಡೆದಿತ್ತು.

ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಮಂಜುಳ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರುಕ್ಮಿಣಮ್ಮ ತಲಾ 183 ಮತ ಪಡೆದಿದ್ದರು. ನಂತರ ಅಧಿಕಾರಿಗಳ ನಡೆಸಿದ ಲಾಟರಿ ಡ್ರಾ ಪರೀಕ್ಷೆಯಲ್ಲಿ ಜೆಡಿಎಸ್ ನ ಮಂಜುಳಾ ವಿಜೇತರಾಗುವ ಮೂಲಕ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ.

ಸಾಣಿಕೆರೆ ಅಭ್ಯರ್ಥಿಗೆ ಲಾಟರಿ ಮೂಲಕ ಗೆಲುವು:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಸಾಣಿಕೆರೆ ಗ್ರಾಮ ಪಂಚಾಯ್ತಿಯ ಅಭ್ಯರ್ಥಿಗಳಾದ ಅಂಜು ಎಂ ಹಾಗೂ ಬಿ.ಎ.ಕ್ಷಿತಿಜಾ 375 ಮತ ಪಡೆದು ಸಮಬಲ ಸಾಧಿಸಿದ್ದರು. ಅಂತಿಮವಾಗಿ ಅಂಜು ಎ ಲಾಟರಿ ಮೂಲಕ ಗೆಲುವು ಸಾಧಿಸಿದ್ದಾರೆ.

ಸ್ಪರ್ಧೆಯಲ್ಲಿ ತಾಯಿಗೆ ಜಯ, ಮಗನಿಗೆ ಸೋಲು!

ಬೀದರ್ ತಾಲೂಕಿನ ಚಿಮಕೋಡ್ ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ತಾಯಿ ಗೆಲುವು ಸಾಧಿಸಿದ್ದು, ಮಗ ಸೋಲನ್ನನುಭವಿಸಿದ್ದಾರೆ. ಚಿಮಕೋಡ್ ನ ಖಾಜಾಪುರ ಗ್ರಾಮದಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದ ತಾಯಿ ತುಳಜಮ್ಮ 244 ಮತ ಪಡೆದು ಜಯ ಗಳಿಸಿದ್ದಾರೆ. ಪುತ್ರ ಶಿವರಾಜ್ 255 ಮತ ಪಡೆದು ಪರಾಜಯಗೊಂಡಿದ್ದು, ಪ್ರತಿಸ್ಪರ್ಧಿ ಅನಿಲ್ 301 ಮತ ಪಡೆದು ಗೆಲುವು ಪಡೆದಿದ್ದಾರೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.