3 ಮಹಾನಗರ ಪಾಲಿಕೆ; ಒಂದು BJP ತೆಕ್ಕೆಗೆ, 2 ಜೆಡಿಎಸ್, ಕೈ ಮೈತ್ರಿಗೆ


Team Udayavani, Sep 3, 2018, 4:15 PM IST

mysore.jpg

ಮೈಸೂರು/ಶಿವಮೊಗ್ಗ: ಮೈಸೂರು, ತುಮಕೂರು, ಶಿವಮೊಗ್ಗ ಮಹಾನಗರ ಪಾಲಿಕೆಗಳ ಒಟ್ಟು 135 ವಾರ್ಡ್ ಗಳಿಗೆ ಹಾಗೂ 29 ನಗರಸಭೆ, 53 ಪುರಸಭೆ ಮತ್ತು 20 ಪಟ್ಟಣ ಪಂಚಾಯತ್ ಗಳ ಸಹಿತ ಒಟ್ಟು 102 ನಗರ ಸ್ಥಳೀಯ ಸಂಸ್ಥೆಗಳ 2,497 ವಾರ್ಡ್ ಗಳಿಗೆ ಅ.31ರಂದು ನಡೆದಿದ್ದ ಮತದಾನದ ಫಲಿತಾಂಶ ಸೋಮವಾರ ಹೊರಬಿದ್ದಿದೆ.

ಮೈಸೂರು, ತುಮಕೂರು, ಶಿವಮೊಗ್ಗ ಮಹಾನಗರ ಪಾಲಿಕೆಗಳ ಫಲಿತಾಂಶದಲ್ಲಿ ತುಮಕೂರು, ಮೈಸೂರು ಅತಂತ್ರ ಫಲಿತಾಂಶ ಬಂದಿದ್ದರೆ, ಶಿವಮೊಗ್ಗ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ ಬಿದ್ದಿದೆ.

ಮೈಸೂರು ಮಹಾನಗರ ಪಾಲಿಕೆ ಅತಂತ್ರ; ಕೈ, ಜೆಡಿಎಸ್ ಮೈತ್ರಿ

ಒಟ್ಟು 65 ಮಂದಿ ಸದಸ್ಯ ಬಲ ಹೊಂದಿರುವ ಮೈಸೂರು ನಗರಪಾಲಿಕೆಯಲ್ಲಿ ಬಿಜೆಪಿ 22, ಕಾಂಗ್ರೆಸ್ 19, ಜೆಡಿಎಸ್ 18 ಹಾಗೂ ಪಕ್ಷೇತರರು 6 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಅಧಿಕಾರದ ಚುಕ್ಕಾಣಿ ಹಿಡಿಯಲು 33 ಸದಸ್ಯ ಬಲದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೇರಲಿದೆ.

ತುಮಕೂರು ಮಹಾನಗರ ಪಾಲಿಕೆ ಅತಂತ್ರ; ಜೆಡಿಎಸ್, ಕಾಂಗ್ರೆಸ್ ಮೈತ್ರಿ

ತುಮಕೂರು ಮಹಾನಗರ ಪಾಲಿಕೆಯ 35 ವಾರ್ಡ್ ಗಳಲ್ಲಿ ಜೆಡಿಎಸ್ 10, ಬಿಜೆಪಿ 12, ಕಾಂಗ್ರೆಸ್ 10 ಹಾಗೂ ಪಕ್ಷೇತರರು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಅಧಿಕಾರದ ಗದ್ದುಗೆ ಏರಲು 18 ಮ್ಯಾಜಿಕ್ ಸಂಖ್ಯೆ ಬೇಕಾಗಿದ್ದು, ಜೆಡಿಎಸ್, ಕಾಂಗ್ರೆಸ್ ಮೈತ್ರಿ ಅಧಿಕಾರದ ಗದ್ದುಗೆ ಏರಬಹುದಾಗಿದೆ.

ಶಿವಮೊಗ್ಗ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ:

ಶಿವಮೊಗ್ಗ ಮಹಾನಗರ ಪಾಲಿಕೆ ಒಟ್ಟು 35 ವಾರ್ಡ್ ಗಳಲ್ಲಿ ಬಿಜೆಪಿ 20, ಕಾಂಗ್ರೆಸ್ 7, ಜೆಡಿಎಸ್ 1, ಎಸ್ ಡಿಪಿಐ 1 ಹಾಗೂ ಪಕ್ಷೇತರರು 5 ಸ್ಥಾನಗಳಲ್ಲಿ ಜಯ ಸಾಧಿಸಿದ್ದಾರೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಮ್ಯಾಜಿಕ್ ಸಂಖ್ಯೆ 18. ಈ ನಿಟ್ಟಿನಲ್ಲಿ ಬಿಜೆಪಿ ಬಹುಮತ ಪಡೆದಿದ್ದು, ಅಧಿಕಾರದ ಗದ್ದುಗೆ ಏರಲಿದೆ.

ಮೈಸೂರು ಜಿಲ್ಲೆ ಫಲಿತಾಂಶ:

ಪಿರಿಯಾಪಟ್ಟಣ ಪುರಸಭೆ:

ಪಿರಿಯಾಪಟ್ಟಣ ಪುರಸಭೆಯ 23 ವಾರ್ಡ್ ಗಳಲ್ಲಿ ಕಾಂಗ್ರೆಸ್ 8, ಜೆಡಿಎಸ್ 14, ಪಕ್ಷೇತರರು ಒಂದು ಸ್ಥಾನದಲ್ಲಿ ಜಯಭೇರಿ ಬಾರಿಸಿದ್ದಾರೆ.

ಎಚ್ ಡಿ ಕೋಟೆ ಪುರಸಭೆ:

23 ಸದಸ್ಯ ಬಲದ ಎಚ್ ಡಿ ಕೋಟೆ ಪುರಸಭೆಯಲ್ಲಿ ಕಾಂಗ್ರೆಸ್ 11, ಜೆಡಿಎಸ್ 08, ಪಕ್ಷೇತರರು 03 ಹಾಗೂ ಬಿಜೆಪಿ 1 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದೆ.

ಟಿ ನರಸೀಪುರ ಪುರಸಭೆ:

23 ಸದಸ್ಯ ಬಲದ ಪುರಸಭೆಯಲ್ಲಿ ಕಾಂಗ್ರೆಸ್ 10, ಜೆಡಿಎಸ್ 3, ಪಕ್ಷೇತರರು 6 ಹಾಗೂ ಬಿಜೆಪಿ 4 ವಾರ್ಡ್ ಗಳಲ್ಲಿ ಗೆಲುವಿನ ನಗು ಬೀರಿದೆ.

ಒಟ್ಟು ಮೈಸೂರು ಜಿಲ್ಲೆಯ 134 ವಾರ್ಡ್ ಗಳಲ್ಲಿ 27 ಬಿಜೆಪಿ, ಕಾಂಗ್ರೆಸ್ 48, ಜೆಡಿಎಸ್ 43 ಹಾಗೂ ಪಕ್ಷೇತರರು 16 ಮಂದಿ ಜಯಗಳಿಸಿದ್ದಾರೆ.

ತುಮಕೂರು ಜಿಲ್ಲೆ ಫಲಿತಾಂಶ:

ಮಧುಗಿರಿ ಪುರಸಭೆ:

ಮಧುಗಿರಿ ಪುರಸಭೆಯ 23 ವಾರ್ಡ್ ಗಳಲ್ಲಿ  ಕಾಂಗ್ರೆಸ್ 13, ಜೆಡಿಎಸ್ 9 ಹಾಗೂ ಪಕ್ಷೇತರ 1 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಚಿಕ್ಕನಾಯಕನಹಳ್ಳಿ ಪುರಸಭೆ:

23 ಸದಸ್ಯ ಬಲದ ಚಿಕ್ಕನಾಯಕನಹಳ್ಳಿ ಪುರಸಭೆಯಲ್ಲಿ 5 ಬಿಜೆಪಿ, ಕಾಂಗ್ರೆಸ್ 2, ಜೆಡಿಎಸ್ 14, ಪಕ್ಷೇತರರು 2 ವಾರ್ಡ್ ಗಳಲ್ಲಿ ಜಯಗಳಿಸಿದ್ದಾರೆ.

ಗುಬ್ಬಿ ಪಟ್ಟಣ ಪಂಚಾಯತ್:

19 ಮಂದಿ ಸದಸ್ಯ ಬಲದ ಗುಬ್ಬಿ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ 6, ಕಾಂಗ್ರೆಸ್ 2, ಜೆಡಿಎಸ್ 10, ಪಕ್ಷೇತರರು ಒಂದು ವಾರ್ಡ್ ನಲ್ಲಿ ಜಯ ಸಾಧಿಸಿದ್ದಾರೆ.

ಕೊರಟಗೆರೆ ಪಟ್ಟಣ ಪಂಚಾಯತ್:

ಹಾಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿಕೂಟದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಕ್ಷೇತ್ರವಾದ ಕೊರಟಗೆರೆ ಪಟ್ಟಣ ಪಂಚಾಯತ್ ನಲ್ಲಿ ಕಾಂಗ್ರೆಸ್ ಈ ಬಾರಿ ಅಧಿಕಾರ ಕಳೆದುಕೊಂಡಿದೆ. 15 ಸದಸ್ಯ ಬಲದ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ 1, ಕಾಂಗ್ರೆಸ್ 5, ಜೆಡಿಎಸ್ 8 ಹಾಗೂ ಪಕ್ಷೇತರರು 1 ವಾರ್ಡ್ ನಲ್ಲಿ ಗೆಲುವು ಸಾಧಿಸಿದ್ದಾರೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.