5 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ EVMನಲ್ಲಿ ಭದ್ರ; ನ.6ಕ್ಕೆ ಫಲಿತಾಂಶ
Team Udayavani, Nov 3, 2018, 7:13 PM IST
ಬೆಂಗಳೂರು: ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾ ಹಾಗೂ ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತದಾನ ಶನಿವಾರ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಐದು ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದಂತಾಗಿದೆ. ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಒಟ್ಟಾರೆ ಶೇ.70ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
3 ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತದಾನ ಅಂತ್ಯವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ. 54ರಷ್ಟು, ಶಿವಮೊಗ್ಗ ಶೇ.61.05ರಷ್ಟು, ಬಳ್ಳಾರಿ ಶೇ.63.85ರಷ್ಟು, ರಾಮನಗರದಲ್ಲಿ ಶೇ.75ರಷ್ಟು, ಜಮಖಂಡಿ ಶೇ.81.58ರಷ್ಟು ಮತದಾನವಾಗಿದೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಎಸ್ ಉಗ್ರಪ್ಪ, ಬಿಜೆಪಿಯಿಂದ ಜೆ.ಶಾಂತಾ, ಪಕ್ಷೇತರರಾಗಿ ಡಾ.ಟಿಆರ್ ಶ್ರೀನಿವಾಸ್, ಪಂಪಾವತಿ ಕಣದಲ್ಲಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿಯಿಂದ ಬಿವೈ ರಾಘವೇಂದ್ರ, ಜೆಡಿಎಸ್ ನಿಂದ ಮಧು ಬಂಗಾರಪ್ಪ, ಜೆಡಿಯು ನಿಂದ ಮಹಿಮಾ ಪಾಟೀಲ್ ಸ್ಪರ್ಧಿಸುತ್ತಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಶಿವರಾಮೇಗೌಡ, ಬಿಜೆಪಿಯಿಂದ ಡಾ.ಸಿದ್ದರಾಮಯ್ಯ ಹಾಗೂ ಏಳು ಪಕ್ಷೇತರರು ಅಖಾಡದಲ್ಲಿದ್ದಾರೆ.
ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಶ್ರೀಕಾಂತ ಕುಲಕರ್ಣಿ, ಕಾಂಗ್ರೆಸ್-ಜೆಡಿಎಸ್ ನಿಂದ ಆನಂದ ಸಿದ್ದು ನ್ಯಾಮಗೌಡ, ಪ್ರಜಾ ಪರಿವರ್ತನ ಪಾರ್ಟಿಯ ಪರಶುರಾಮ ಮಹಾರಾಜನವರ, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದಿಂದ ಯಮನಪ್ಪ ಗುಣದಾಳ ಹಾಗೂ ನಾಲ್ಕು ಮಂದಿ ಪಕ್ಷೇತರರು ಸ್ಪರ್ಧಿಸುತ್ತಿದ್ದಾರೆ.
ರಾಮನಗರ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ(ಜೆಡಿಎಸ್), ಚಂದ್ರಶೇಖರ್ (ಬಿಜೆಪಿ) ಹಾಗೂ ಐವರು ಪಕ್ಷೇತರರು ಅಭ್ಯರ್ಥಿಗಳಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ