![1-assam](https://www.udayavani.com/wp-content/uploads/2024/07/1-assam-415x233.jpg)
5 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ EVMನಲ್ಲಿ ಭದ್ರ; ನ.6ಕ್ಕೆ ಫಲಿತಾಂಶ
Team Udayavani, Nov 3, 2018, 7:13 PM IST
![result.jpg](https://www.udayavani.com/wp-content/uploads/2018/11/3/result.jpg)
ಬೆಂಗಳೂರು: ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾ ಹಾಗೂ ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತದಾನ ಶನಿವಾರ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಐದು ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದಂತಾಗಿದೆ. ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಒಟ್ಟಾರೆ ಶೇ.70ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
3 ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತದಾನ ಅಂತ್ಯವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ. 54ರಷ್ಟು, ಶಿವಮೊಗ್ಗ ಶೇ.61.05ರಷ್ಟು, ಬಳ್ಳಾರಿ ಶೇ.63.85ರಷ್ಟು, ರಾಮನಗರದಲ್ಲಿ ಶೇ.75ರಷ್ಟು, ಜಮಖಂಡಿ ಶೇ.81.58ರಷ್ಟು ಮತದಾನವಾಗಿದೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಎಸ್ ಉಗ್ರಪ್ಪ, ಬಿಜೆಪಿಯಿಂದ ಜೆ.ಶಾಂತಾ, ಪಕ್ಷೇತರರಾಗಿ ಡಾ.ಟಿಆರ್ ಶ್ರೀನಿವಾಸ್, ಪಂಪಾವತಿ ಕಣದಲ್ಲಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿಯಿಂದ ಬಿವೈ ರಾಘವೇಂದ್ರ, ಜೆಡಿಎಸ್ ನಿಂದ ಮಧು ಬಂಗಾರಪ್ಪ, ಜೆಡಿಯು ನಿಂದ ಮಹಿಮಾ ಪಾಟೀಲ್ ಸ್ಪರ್ಧಿಸುತ್ತಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಶಿವರಾಮೇಗೌಡ, ಬಿಜೆಪಿಯಿಂದ ಡಾ.ಸಿದ್ದರಾಮಯ್ಯ ಹಾಗೂ ಏಳು ಪಕ್ಷೇತರರು ಅಖಾಡದಲ್ಲಿದ್ದಾರೆ.
ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಶ್ರೀಕಾಂತ ಕುಲಕರ್ಣಿ, ಕಾಂಗ್ರೆಸ್-ಜೆಡಿಎಸ್ ನಿಂದ ಆನಂದ ಸಿದ್ದು ನ್ಯಾಮಗೌಡ, ಪ್ರಜಾ ಪರಿವರ್ತನ ಪಾರ್ಟಿಯ ಪರಶುರಾಮ ಮಹಾರಾಜನವರ, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದಿಂದ ಯಮನಪ್ಪ ಗುಣದಾಳ ಹಾಗೂ ನಾಲ್ಕು ಮಂದಿ ಪಕ್ಷೇತರರು ಸ್ಪರ್ಧಿಸುತ್ತಿದ್ದಾರೆ.
ರಾಮನಗರ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ(ಜೆಡಿಎಸ್), ಚಂದ್ರಶೇಖರ್ (ಬಿಜೆಪಿ) ಹಾಗೂ ಐವರು ಪಕ್ಷೇತರರು ಅಭ್ಯರ್ಥಿಗಳಾಗಿದ್ದಾರೆ.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.