Karnataka Polls 2023: ಕಣ ಸಿದ್ಧ ; ಬಂಡಾಯವೇ ಸವಾಲು: 38ಕ್ಕೂ ಅಧಿಕ ಕಡೆ ಪ್ರತಿರೋಧದ ಬಿಸಿ

ಹಿಂದೆ ಸರಿಯದೆ ಹಲವರ ಸಡ್ಡು

Team Udayavani, Apr 25, 2023, 7:10 AM IST

Karnataka Polls 2023: ಕಣ ಸಿದ್ಧ ; ಬಂಡಾಯವೇ ಸವಾಲು: 38ಕ್ಕೂ ಅಧಿಕ ಕಡೆ ಪ್ರತಿರೋಧದ ಬಿಸಿ

ಬೆಂಗಳೂರು: ನಾಮಪತ್ರ ವಾಪಸ್‌ ಪಡೆಯುವುದಕ್ಕೆ ಸೋಮವಾರ ಕೊನೆಯ ದಿನವಾದರೂ ಅಧಿಕೃತ ಅಭ್ಯರ್ಥಿಗಳ ವಿರುದ್ಧ ನಾಮಪತ್ರ ಸಲ್ಲಿಸಿದವರು ಸ್ಪರ್ಧೆಯಿಂದ ಹಿಂದೆ ಸರಿಯದೆ ಇರುವುದರಿಂದ ರಾಜ್ಯದ 38ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಈಗ ಮೂರು ಪಕ್ಷಗಳಿಗೂ ಬಂಡಾಯದ ಬಿಸಿ ಎದುರಾಗಿದೆ.

ಚುನಾವಣೆಗೆ 5,067 ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಿದ್ದರು. ಈ ಪೈಕಿ 4,027 ನಾಮ ಪತ್ರ ಅಂಗೀಕಾರವಾಗಿದ್ದು, 531 ತಿರಸ್ಕೃತ ಗೊಂಡಿವೆ. ನಾಮಪತ್ರ ವಾಪಸ್‌ ಪಡೆಯುವ ಕೊನೆಯ ದಿನವಾದ ಸೋಮವಾರ 517 ಮಂದಿ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಅಂತಿಮ ವಾಗಿ 2,613 ಮಂದಿ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಗಳಿಂದ ನಿರೀಕ್ಷಿತ ಟಿಕೆಟ್‌ ಲಭಿಸದೆ ಅಧಿಕೃತ ಅಭ್ಯರ್ಥಿಗಳ ಎದುರು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿದ ಹಲವರು ನಾಮಪತ್ರ ಹಿಂದೆಗೆಯದ್ದರಿಂದ ಪಕ್ಷಗಳಿಗೆ ಬಂಡಾಯದ ಬಿಸಿ ತಟ್ಟಿದೆ.

ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿಗೆ 16, ಕಾಂಗ್ರೆಸ್‌ಗೆ 18 ಹಾಗೂ ಜೆಡಿಎಸ್‌ಗೆ 4 ಕಡೆ ಅಧಿಕೃತವಾಗಿ ಬಂಡಾಯ ಎದುರಾಗಿದೆ. ಇದು ಮತ ವಿಭಜನೆಗೆ ಕಾರಣ ವಾಗಲಿದೆ ಎನ್ನುವುದು ಪಕ್ಷಗಳ ಆತಂಕ.
ಆಡಳಿತಾರೂಢ ಬಿಜೆಪಿಗೆ ತುಮಕೂರು, ಪುತ್ತೂರು, ಚನ್ನಗಿರಿ, ಬೈಲಹೊಂಗಲ, ಹೊಸ ದುರ್ಗ, ಬಾಗಲಕೋಟೆ ಸೇರಿ 16 ಕಡೆ ಬಂಡಾಯದ ಬಿಸಿ ತಟ್ಟಿದೆ.

ಹಿಂದುತ್ವದ ಭದ್ರನೆಲೆಯಾದ ಪುತ್ತೂರಿನಲ್ಲಿ ಸಂಘ ಪರಿವಾರದ ಹಿನ್ನೆಲೆಯ ಅರುಣ್‌ ಕುಮಾರ್‌ ಪುತ್ತಿಲ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. ಪಕ್ಷದ ಹಿರಿಯರು ಈ ಬಗ್ಗೆ ಮಾತುಕತೆ ನಡೆಸಿದರೂ ಪುತ್ತಿಲ ಕಣದಿಂದ ಹಿಂದೆ ಸರಿದಿಲ್ಲ. ತುಮಕೂರಿನಲ್ಲಿ ಸೊಗಡು ಶಿವಣ್ಣ ಮನವೊಲಿಸಲು ಕೆಲವು ಆರೆಸ್ಸೆಸ್‌ ಮುಖಂಡರು ಯತ್ನಿಸಿದರೂ ಫ‌ಲಿಸಿಲ್ಲ. ಚನ್ನಗಿರಿಯಲ್ಲಿ ಮಾಡಾಳು ವಿರೂಪಾಕ್ಷಪ್ಪ ಪುತ್ರ ಮಾಡಾಳು ಮಲ್ಲಿಕಾರ್ಜುನ ಕೂಡ ನಾಮಪತ್ರ ವಾಪಸ್‌ ತೆಗೆದುಕೊಳ್ಳಲು ಒಪ್ಪಿಲ್ಲ. ಕುಂದಗೋಳದಲ್ಲಿ ಮಾಜಿ ಶಾಸಕ ಚಿಕ್ಕನಗೌಡ ಕೂಡ ಕಣದಲ್ಲಿ ಉಳಿದುಕೊಂಡಿದ್ದಾರೆ.

ಕಾಂಗ್ರೆಸ್‌ಗೆ ಒಟ್ಟು 18 ಕಡೆ ಬಂಡಾಯ ಎದುರಾಗಿದೆ. ಶಿಕಾರಿಪುರದಲ್ಲಿ ನಾಗರಾಜ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಸಲ್ಲಿಸಿದ ನಾಮಪತ್ರ ವಾಪಸ್‌ ಪಡೆದಿಲ್ಲ. ತೇರದಾಳದಲ್ಲಿ ಡಾ| ಪದ್ಮರಾಜ ನಾಡಗೌಡ ಪಾಟೀಲ, ಜಮಖಂಡಿ ಯಲ್ಲಿ ಸುಶೀಲಕುಮಾರ್‌ ಬೆಳಗಲಿ, ಹರಪನ ಹಳ್ಳಿಯಲ್ಲಿ ಎಂ.ಪಿ. ಲತಾ, ಶಿರಹಟ್ಟಿಯಲ್ಲಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಚಿತ್ರದುರ್ಗದಲ್ಲಿ ಸೌಭಾಗ್ಯ ಬಸವರಾಜನ್‌ ಸ್ಪರ್ಧೆಯಿಂದ ಹಿಂದೆ ಸರಿಯಲು ಒಪ್ಪಿಲ್ಲ.

ಕಾಂಗ್ರೆಸ್‌ನಿಂದ ಟಿಕೆಟ್‌ ವಂಚಿತರಾದ ಅಖಂಡ ಶ್ರೀನಿವಾಸಮೂರ್ತಿ ಬಿಎಸ್‌ಪಿ ಸೇರ್ಪಡೆಯಾಗಿದ್ದು, ಪುಲಕೇಶಿನಗರದಿಂದ ಕಣಕ್ಕೆ ಇಳಿದಿದ್ದಾರೆ. ಅದೇ ರೀತಿ ರಾಣೆಬೆನ್ನೂರಿನಿಂದ ಬಿಜೆಪಿ ವಿರುದ್ಧ ಬಂಡಾಯವೆದ್ದಿದ್ದ ಮಾಜಿ ಸಚಿವ ಆರ್‌. ಶಂಕರ್‌ ಈಗ ಎನ್‌ಸಿಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಇವರಿಬ್ಬರೂ ಪ್ರಮುಖ ಪಕ್ಷಗಳ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದಾರೆ.

ಜೆಡಿಎಸ್‌ಗೆ ನಾಲ್ಕು ಕಡೆಗಳಲ್ಲಿ ಬಂಡಾಯ ಎದುರಾಗಿದೆ. ಯಾದಗಿರಿಯಲ್ಲಿ ಹನುಮೇಗೌಡ ಬೀರನಕಲ್‌, ತುಮ ಕೂರಿನಲ್ಲಿ ನರಸೇಗೌಡ, ಶ್ರೀರಂಗಪಟ್ಟಣದಲ್ಲಿ ಪಾಲಹಳ್ಳಿ ಚಂದ್ರಶೇಖರ್‌, ಮಂಡ್ಯದಲ್ಲಿ ಕೆ.ಎಸ್‌. ವಿಜಯ್‌ ಆನಂದ ಬಂಡಾಯದ ಬಾವುಟ ಹಾರಿಸಿದ್ದಾರೆ. ಮೂರು ಪಕ್ಷಗಳಲ್ಲೂ ಕೆಲವರನ್ನು ತೆರೆಮರೆಯಲ್ಲಿ ಶಾಂತಗೊಳಿಸುವ ಪ್ರಯತ್ನ ಮುಂದುವರಿದಿದೆ.

ಬಳ್ಳಾರಿಯಲ್ಲಿ ಹೆಚ್ಚು
ಕುತೂಹಲಕಾರಿ ಅಂಶವೆಂದರೆ ಬಳ್ಳಾರಿ ನಗರ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚು ಅಂದರೆ 24 ಮಂದಿ ಈ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಬೆಳಗಾವಿ ಜಿಲ್ಲೆಯ ಯಮಕನ ಮರಡಿ ಕ್ಷೇತ್ರ ಸೇರಿ ಏಳು ಕ್ಷೇತ್ರಗಳಲ್ಲಿ ತಲಾ 5ರಂತೆ ಅತೀ ಕಡಿಮೆ ಅಭ್ಯರ್ಥಿಗಳು ಇದ್ದಾರೆ. ಒಟ್ಟು 14 ಕ್ಷೇತ್ರಗಳಲ್ಲಿ ಹೆಚ್ಚು ಮಹಿಳಾ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ 6 ಮಂದಿ ಇದ್ದಾರೆ. ಉಳಿದಂತೆ 4 ಕ್ಷೇತ್ರಗಳಲ್ಲಿ ತಲಾ 5 ಮಹಿಳಾ ಅಭ್ಯರ್ಥಿಗಳು, 7 ಕ್ಷೇತ್ರಗಳಲ್ಲಿ ತಲಾ 4 ಮಹಿಳಾ ಅಭ್ಯರ್ಥಿ ಗಳಿದ್ದಾರೆ. ಅತಿಹೆಚ್ಚು ಪಕ್ಷೇತರರು 15 ಅಭ್ಯರ್ಥಿಗಳು ಹೊಸ ಕೋಟೆ ಕ್ಷೇತ್ರದಲ್ಲಿ ಇದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ಯಿಂದ ಪ್ರಮುಖ ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ಪಕ್ಷೇತರ ಮಹಿಳೆಯರೇ ಸವಾಲು ಹಾಕಿದ್ದಾರೆ.

 

ಟಾಪ್ ನ್ಯೂಸ್

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.