Karnataka; ವಿವಿಧೆದೆ ಮಳೆ: ಸಿಂಧನೂರು,ಎನ್.ಆರ್.ಪುರದಲ್ಲಿ ಸಿಡಿಲಿಗೆ ಇಬ್ಬರು ಬಲಿ
ಕನಕಗಿರಿಯಲ್ಲಿ ದೇವಸ್ಥಾನದ ಗೋಪುರಕ್ಕೆ ಹಾನಿ
Team Udayavani, Apr 13, 2024, 8:14 PM IST
ಬೆಂಗಳೂರು: ರಾಜ್ಯದ ವಿವಿಧಜಿಲ್ಲೆಗಳಲ್ಲಿ ಶನಿವಾರ ಬಿರುಗಾಳಿ ಸಹಿತ ಮಳೆಯಾಗಿದ್ದು ಸಿಡಿಲಿನ ಅಬ್ಬರಕ್ಕೆ ಓರ್ವ ಬಲಿಯಾಗಿದ್ದಾನೆ.
ಸಿಡಿಲು ಬಡಿದು ಬಾಲಕ, ಮೇಕೆ ಸಾವು
ಸಿಂಧನೂರು ತಾಲೂಕಿನ ಮಲ್ಕಾಪುರ ಕ್ಯಾಂಪಿನಲ್ಲಿ ಶನಿವಾರ ಸಿಡಿಲು ಬಡಿದು ಕುರಿ ಮೇಯಿಸುತ್ತಿದ್ದ ಬಾಲಕ ಹಾಗೂ ಒಂದು ಮೇಕೆ ಮೃತಪಟ್ಟಿರುವ ಘಟನೆ ನಡೆದಿದೆ. ತಾಲೂಕಿನ ಅಮರಾಪುರ ಗ್ರಾಮದ ಶಾಂತಕುಮಾರ ಬಸವರಾಜ (16) ಮೃತ ದುರ್ದೈವಿ.
ಮಲ್ಕಾಪುರ ಕ್ಯಾಂಪಿನ ಹೊಲದಲ್ಲಿ ಕುರಿ ಮೇಯಿಸುವಾಗ ಏಕಾಏಕಿ ಗುಡುಗು-ಸಿಡಿಲು, ಮಳೆ ಸುರಿಯಲಾರಂಭಿಸಿತು. ಶಾಂತಕುಮಾರ ಮೇಲೆ ಸಿಡಿಲು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವಸ್ಥಾನದ ಗೋಪುರ ಹಾನಿ
ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ನವಲಿತಾಂಡ ಗ್ರಾಮದ ಶ್ರೀ ದುರ್ಗಾದೇವಿ ದೇವಸ್ಥಾನದ ಗೋಪುರಕ್ಕೆ ಹಾನಿಯಾಗಿದೆ. ಬಿರುಗಾಳಿ, ಮಳೆ ಸಿಡಿಲಿಗೆ ಸಿಡಿಲಿಗೆ ಗೋಪುರದಲ್ಲಿ ಬಿರುಕು ಕಾಣಿಸಿಕೊಂಡಿದೆ. 8 ವರ್ಷದ ಹಿಂದೆ ದೇವಸ್ಥಾನದ ಗೋಪುರ ನಿರ್ಮಿಸಲಾಗಿತ್ತು.
ಚಿಕ್ಕಮಗಳೂರು : ಮಳೆ ಅಬ್ಬರ
ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ತೋಟಕ್ಕೆ ಹೋಗಿದ್ದ ರೈತ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಅರಳಿಕೊಪ್ಪದಲ್ಲಿ ನಡೆದಿದೆ. ಶಂಕರ್ (48) ಸಿಡಿಲು ಬಡಿದು ಮೃತ ಪಟ್ಟ ದುರ್ದೈವಿ.
ಮೂಡಿಗೆರೆ, ಕೊಪ್ಪ, ಜಯಪುರ, ಬಾಳೆಹೊನ್ನೂರಲ್ಲಿ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ನಗರ , ಮಲ್ಲೇನಹಳ್ಳಿ ,ಖಾಂಡ್ಯ, ಮುತ್ತೋಡಿ ಭಾಗದಲ್ಲಿ 3 ದಿನಗಳಿಂದ ಸಂಜೆ ವೇಳೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಬಯಲುಸೀಮೆ ತರೀಕೆರೆ, ಕಡೂರಿನಲ್ಲಿ ಸಾಧಾರಣ ಮಳೆಯಾಗಿದೆ.ಬಿಸಿಲ ಝಳಕ್ಕೆ ಕಂಗಲಾಗಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.