ICSE: ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 99 ಮೀರಿದ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ
30 ಸಾವಿರ ವಿದ್ಯಾರ್ಥಿಗಳಲ್ಲಿ 59 ಮಂದಿಯಷ್ಟೇ ಅನುತ್ತೀರ್ಣ
Team Udayavani, May 7, 2024, 12:01 AM IST
ಬೆಂಗಳೂರು: ದಿಲ್ಲಿಯ ದಿ ಕೌನ್ಸಿಲ್ ಆಫ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್(ಐಎಸ್ಸಿಇ) ಐಸಿಎಸ್ಇ 10ನೇ ತರಗತಿ ಮತ್ತು ಐಎಸ್ಸಿ 12ನೇ ತರಗತಿಯ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ.
ಹತ್ತನೇ ತರಗತಿಯ ಪರೀಕ್ಷೆಯಲ್ಲಿ ರಾಜ್ಯದ ವಿದ್ಯಾರ್ಥಿಗಳು ಶೇ. 99.83 ಮತ್ತು ಹನ್ನೆರಡನೇ ತರಗತಿ ಪರೀಕ್ಷೆಯಲ್ಲಿ ಶೇ. 99.49 ಫಲಿತಾಂಶ ಪಡೆದಿದ್ದಾರೆ.
ರಾಜ್ಯದಲ್ಲಿ ಐಸಿಎಸ್ಇ 405 ಮತ್ತು ಐಎಸ್ಸಿಯ 51 ಶಾಲೆಗಳಿಂದ ವಿದ್ಯಾರ್ಥಿ ಗಳು ಪರೀಕ್ಷೆಗೆ ಹಾಜರಾಗಿದ್ದರು. ಐಸಿಎಸ್ಇ ಪರೀಕ್ಷೆಗೆ 14,001 ಬಾಲಕರು ಮತ್ತು 13,778 ಬಾಲಕಿಯರು ಸಹಿತ ಒಟ್ಟು 27,826 ವಿದ್ಯಾರ್ಥಿಗಳು ಹಾಗೂ ಐಎಸ್ಸಿ ಪರೀಕ್ಷೆಗೆ 1,089 ಹುಡುಗರು ಮತ್ತು 1,263 ಹುಡುಗಿಯರು ಸೇರಿ 2,364 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ವಿದ್ಯಾರ್ಥಿನಿಯರೇ ಮೇಲುಗೈ
ಎರಡೂ ಪರೀಕ್ಷೆಯಲ್ಲೂ ವಿದ್ಯಾರ್ಥಿನಿ ಯರೇ ಮೇಲುಗೈ ಸಾಧಿಸಿದ್ದಾರೆ. ಐಸಿಎಸ್ಇಯಲ್ಲಿ ಶೇ.99.93 ಬಾಲಕಿಯರು ಹಾಗೂ ಶೇ.99.73 ಬಾಲಕರು ತೇರ್ಗಡೆ ಆಗಿದ್ದಾರೆ. ಐಎಸ್ಸಿಯಲ್ಲಿ ಬಾಲಕಿಯರು ಶೇ.99.76 ಮತ್ತು ಬಾಲಕರು ಶೇ.99.18 ಉತ್ತೀರ್ಣರಾಗಿದ್ದಾರೆ.
ಬೆಂಗಳೂರಿನ ಮೂವರು ಐಸಿಎಸ್ಇ ಪರೀಕ್ಷೆಯಲ್ಲಿ ಶೇ.99.80 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಗ್ರೀನ್ವುಡ್ ಹೈನದ ಅದ್ರಿತಾ ತ್ರಿಪಾಠಿ, ಸರ್ಜಾಪುರ ಶಾಖೆಯ ಬೆಥನಿ ಹೈನ ಮೆಹೆರ್ ಎಫ್.ಅನ್ಸಿಲ್ ಮತ್ತು ಬಿಷಪ್ ಕಾಟನ್ ಬಾಲಕರ ಶಾಲೆಯ ವರುಣ್ ಶೇ.99.80 ಅಂಕಗಳನ್ನು ಪಡೆದು ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಐಎಸ್ಸಿಯಲ್ಲಿ ಗ್ರೀನ್ವುಡ್ ಹೈ ಶಾಲೆಯ ಮೈಥಿಲಿ ಅಯ್ಯರ್ ಶೇ.98.75 ಅಂಕಗಳನ್ನು ಪಡೆದಿದ್ದಾರೆ.
ಐಸಿಎಸ್ಇ ಪರೀಕ್ಷೆಯನ್ನು 20 ಭಾರತೀಯ ಭಾಷೆಗಳು ಸಹಿತ ಒಟ್ಟು 60 ವಿಷಯಗಳಲ್ಲಿ ನಡೆಸಲಾಗಿತ್ತು. ಇದರಲ್ಲಿ 13 ವಿದೇಶಿ ಮತ್ತು 1 ಕ್ಲಾಸಿಕಲ್ ಭಾಷೆ ಕೂಡ ಸೇರಿದೆ. ಅದೇ ರೀತಿ ಐಎಸ್ಸಿ ಪರೀಕ್ಷೆಯನ್ನು 47 ವಿಷಯಗಳಲ್ಲಿ ನಡೆಸಿದ್ದು, ಇದರಲ್ಲಿ 12 ಭಾರತೀಯ, 4 ವಿದೇಶಿ ಮತ್ತು 2 ಕ್ಲಾಸಿಕಲ್ ಭಾಷೆ ಸೇರಿದೆ. 10ನೇ ತರಗತಿಗೆ ನೋಂದಾಯಿಸಿದ್ದ ವಿದ್ಯಾರ್ಥಿಗಳಲ್ಲಿ 47 ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ.
10ನೇ ತರಗತಿಯಲ್ಲಿ ಪರಿಶಿಷ್ಟ ಜಾತಿ 1,734 ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಪಂಗಡದ 395 ವಿದ್ಯಾರ್ಥಿಗಳು, ಹಿಂದುಳಿದ ವರ್ಗಕ್ಕೆ ಸೇರಿದ 11,693 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅದೇ ರೀತಿ 12ನೇ ತರಗತಿಯಲ್ಲಿ 79 ಪರಿಶಿಷ್ಟ ಜಾತಿ ಮತ್ತು 26 ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ 326 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ
MUST WATCH
ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಹೊಸ ಸೇರ್ಪಡೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ