ಧಾರವಾಡಕ್ಕೆ ಮಾವು ಸಂಸ್ಕರಣಾ ಘಟಕ
Team Udayavani, Feb 9, 2019, 12:30 AM IST
ಹಲವು ವರ್ಷಗಳಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ದ್ರಾಕ್ಷಿ ಮತ್ತು ದಾಳಿಂಬೆ ಬೆಳೆಗಾರರಿಗೆ ಈ ಬಾರಿಯ ಬಜೆಟ್ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.
ದ್ರಾಕ್ಷಿ ಮತ್ತು ದಾಳಿಂಬೆ ಬೆಳೆಗಾರರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿಕ್ಕಾಗಿ ಸರ್ಕಾರ ವಿಶೇಷ ಪ್ಯಾಕೇಜ್ವೊಂದನ್ನು ಘೋಷಿಸಿದ್ದು, ಇದರಡಿ 150 ಕೋಟಿ ರೂ.ಮೀಸಲಿಟ್ಟಿದೆ. ಹಲವು ವರ್ಷಗಳಿಂದ ಮಾರುಕಟ್ಟೆ, ರೋಗಬಾಧೆ ಸೇರಿದಂತೆ ಬೆಳೆಗಾರರು ವಿವಿಧ ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಪ್ಯಾಕೇಜ್ ನೆರವಾಗಲಿದೆ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.
ಅದೇ ರೀತಿ, ರಾಜ್ಯದ ಮಾವು, ಟೊಮೆಟೊ ಮತ್ತು ಇತರ ತೋಟಗಾರಿಕೆ ಬೆಳೆಗಳಿಗೆ ಸುಸ್ಥಿರ ಮಾರುಕಟ್ಟೆ, ಉತ್ತಮ ದರ ಒದಗಿಸುವ ಮೂಲಕ ಆರ್ಥಿಕ ಸ್ಥಿತಿ ಸುಧಾರಣೆಗೆ ಮುಂದಾಗಿರುವ ಸರ್ಕಾರ, ಈ ಸಂಬಂಧ ರಾಮನಗರ ಮತ್ತು ಧಾರವಾಡದಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಮಾವು ಉತ್ಪನ್ನಗಳ ಸಂಸ್ಕರಣಾ ಘಟಕ ಹಾಗೂ ಕೋಲಾರದಲ್ಲಿ ಟೊಮೆಟೊ ಉತ್ಪನ್ನಗಳ ಸಂಸ್ಕರಣಾ ಘಟಕ ಸ್ಥಾಪಿಸಲು ಉದ್ದೇಶಿಸಿದೆ. ಇದಕ್ಕಾಗಿ 2019-20ನೇ ಸಾಲಿನಲ್ಲಿ 20 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.
ಇವೆರಡೂ ಬೇಗ ಕೊಳೆಯುವ ಉತ್ಪನ್ನಗಳಾಗಿವೆ. ಆದ್ದರಿಂದ ಮಾರುಕಟ್ಟೆಯಲ್ಲಿ ರೈತರು ಮಾರಾಟ ಮಾಡಬೇಕಾದ ಅನಿವಾರ್ಯತೆಗೆ ಸಿಲುಕುತ್ತಾರೆ. ಪರಿಣಾಮ ನಷ್ಟ ಅನುಭವಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸಂಸ್ಕರಣಾ ಘಟಕಗಳು ಬಹುಮುಖ್ಯ ಪಾತ್ರ ವಹಿಸಲಿವೆ. ರಾಜ್ಯದ ಬೆಂಗಳೂರು ಗ್ರಾಮಾಂತರ, ಕೋಲಾರ, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಹಿರಿಯೂರು ಸುತ್ತಲಿನ ಪ್ರದೇಶಗಳಲ್ಲಿ ದ್ರಾಕ್ಷಿ ಮತ್ತು ದಾಳಿಂಬೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಅಲ್ಲದೆ, ರಾಜ್ಯದಲ್ಲಿ ಮಿಡಿ ಸೌತೆ ಬೆಳೆಗಾರರಿಗೂ ಒಂದು ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇದರಡಿ 6 ಕೋಟಿ ರೂ. ಮೀಸಲಿಡಲಾಗಿದೆ.
•ಮಿಡಿ ಸೌತೆ ಬೆಳೆಗಾರರಿಗೂ ಒಂದು ವಿಶೇಷ ಪ್ಯಾಕೇಜ್ •ತೋಟಗಾರಿಕೆ ಉತ್ಪನ್ನಗಳ ಕೊಯ್ಲೋತ್ತರ ನಿರ್ವಹಣೆಗೆ ಒತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ