ರಾಜ್ಯ ಬಜೆಟ್; ರೈತರ ಸಾಲಮನ್ನಾ ಯೋಜನೆ ಘೋಷಣೆಗೆ ಸಿಕ್ಕಿದ್ದೆಷ್ಟು?
Team Udayavani, Feb 8, 2019, 9:29 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಬಜೆಟ್ ಮಂಡನೆ ಆರಂಭಿಸಿದ್ದರು. ಬಳಿಕ ಬಜೆಟ್ ಪ್ರತಿಯನ್ನು ಕೊಡದಿರುವುದನ್ನು ವಿರೋಧಿಸಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ್ದು, ಏತನ್ಮಧ್ಯೆ 2019-20ನೇ ಸಾಲಿನ ಮುಂಗಡಪತ್ರದಲ್ಲಿ ರೈತರ ಸಾಲಮನ್ನಾದ ಬಗ್ಗೆ ದಿಟ್ಟ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ರೈತರ ಸಾಲಮನ್ನಾ ಯೋಜನೆಗಾಗಿ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ 12,650 ಕೋಟಿ ರೂಪಾಯಿ ಮೀಸಲಿರಿಸಲಾಗಿದ್ದು, ಸಾಲಮನ್ನಾ ಯೋಜನೆಗಾಗಿ ಈವರೆಗೆ 18,650 ಕೋಟಿ ರೂಪಾಯಿ ಬಿಡುಗಡೆ ಮಾಡಿದಂತಾಗಿದೆ.
2019ರ ಜೂನ್ ನೊಳಗೆ ಸಹಕಾರಿ ಬ್ಯಾಂಕ್ ಗಳ ಸಾಲಮನ್ನಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ವಾಣಿಜ್ಯ ಬ್ಯಾಂಕ್ ಗಳ ಸಾಲಮನ್ನ ಪ್ರಕ್ರಿಯೆ ಪೂರ್ಣಕ್ಕೆ 2020ರ ಮಾರ್ಚ್ ವರೆಗೆ ಅವಕಾಶವಿದೆ. ವಾಣಿಜ್ಯ ಬ್ಯಾಂಕ್ ಗಳಿಗೆ 6,500 ಕೋಟಿ ರೂ. ಮೀಸಲಿರಿಸಲಾಗಿದೆ. ಒಟ್ಟು 34 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಆಗಬೇಕಾಗಿದೆ.
2019-20ನೇ ಸಾಲಿನ ಅಯವ್ಯಯದಲ್ಲಿ ಕೃಷಿ ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಒಟ್ಟು 46,853 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್