![modi (4)](https://www.udayavani.com/wp-content/uploads/2024/07/modi-4-4-415x256.jpg)
ಅಚ್ಯುತ್ ಶ್ರೇಷ್ಠ ನಟ ಶ್ರುತಿ ಅತ್ಯುತ್ತಮ ನಟಿ
Team Udayavani, Apr 12, 2017, 10:30 AM IST
![Karnataka-State-Film-Awards.jpg](https://www.udayavani.com/wp-content/uploads/2017/04/12/Karnataka-State-Film-Awards-620x389.jpg)
ಬೆಂಗಳೂರು: ಅಮರಾವತಿ ಹಾಗೂ ಬ್ಯೂಟಿಫುಲ್ ಮನಸುಗಳು ಚಿತ್ರದ ಅತ್ಯುತ್ತಮ ಅಭಿನಯಕ್ಕಾಗಿ ಅಚ್ಯುತ್ ಕುಮಾರ್ ಹಾಗೂ ನಟಿ ಶ್ರುತಿ ಹರಿಹರನ್ ಅವರು 2016ನೇ ಸಾಲಿನ ರಾಜ್ಯ ಚಲನಚಿತ್ರ ಅತ್ಯುತ್ತಮ ನಟ ಹಾಗೂ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬಿ.ಎಂ. ಗಿರಿರಾಜ್ ನಿರ್ದೇಶನದ “ಅಮರಾವತಿ’, ಪೃಥ್ವಿ ಕೊಣನೂರ್ ನಿರ್ದೇಶನದ “ರೈಲ್ವೇ ಚಿಲ್ಡ್ರನ್’ ಹಾಗೂ ಹರೀಶ್ ಕುಮಾರ್ ನಿರ್ದೇಶನದ ಅಂತರ್ಜಲ ಚಿತ್ರಗಳು ಕ್ರಮವಾಗಿ ಮೊದಲ, ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿಗಳಿಗೆ ಭಾಜನವಾಗಿವೆ.
2016ನೇ ಸಾಲಿನ ರಾಜ್ಯ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಮಂಗಳವಾರ ಸಂಜೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅಧಿಕೃತವಾಗಿ ಘೋಷಿಸಿದರು. ಇದಕ್ಕೂ ಮುನ್ನ ಕವಿತಾ ಲಂಕೇಶ್ ನೇತೃತ್ವದ ಸಮಿತಿಯು ಕಳೆದ ಹಲವು ದಿನಗಳಿಂದ ಸುಮಾರು 124 ಚಿತ್ರಗಳನ್ನು ವೀಕ್ಷಿಸಿ, ಈ ಪೈಕಿ ಅತ್ಯುತ್ತಮರನ್ನು ಆಯ್ಕೆ ಮಾಡಲಾಗಿದೆ. ಈ ಸಮಿತಿಯಲ್ಲಿ ನಟಿ ರೇಖಾ ರಾವ್, ಛಾಯಾಗ್ರಾಹಕ ಬಸವರಾಜ್, ಗಾಯಕಿ ಚಂದ್ರಿಕಾ ಗುರುರಾಜ್ ಸೇರಿದಂತೆ ಹಲವರು ಇದ್ದರು.
ಇನ್ನು ಶಿವರುದ್ರಯ್ಯ ನಿರ್ದೇಶನದ “ಮೂಡ್ಲ ಸೀಮೆಯಲಿ’ ಚಿತ್ರವು ವಿಶೇಷ ಸಾಮಾಜಿಕ ಕಾಳಜಿಯ ಚಿತ್ರವೆನಿಸಿಕೊಂಡರೆ, “ಜೀರ್ ಜಿಂಬೆ’ ಚಿತ್ರವು ಅತ್ಯುತ್ತಮ ಮಕ್ಕಳ ಚಿತ್ರ ಎಂದನಿಸಿಕೊಂಡಿದೆ. ಇನ್ನು ಅತ್ಯುತ್ತಮ ಪ್ರಾದೇಶಿಕ ಭಾಷಾ ಚಿತ್ರವು ತುಳು ಭಾಷೆಯ “ಮದಿಪು’ ಪಾಲಾಗಿದೆ. ಕಳೆದ ವರ್ಷದ ಅತ್ಯುತ್ತಮ ಜನಪ್ರಿಯ ಮನರಂಜನ ಚಿತ್ರವಾಗಿ ರಕ್ಷಿತ್ ಶೆಟ್ಟಿ ಅಭಿನಯದ “ಕಿರಿಕ್ ಪಾರ್ಟಿ’ ಹೊರಹೊಮ್ಮಿದೆ. ಇನ್ನು ನಿರ್ದೇಶಕರ ಪ್ರಥಮ ನಿರ್ದೇಶನ ಅತ್ಯುತ್ತಮ ಚಿತ್ರವಾಗಿ ಡಿ. ಸತ್ಯ ಪ್ರಕಾಶ್ ನಿರ್ದೇಶನದ “ರಾಮ ರಾಮಾ ರೇ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಈ ಬಾರಿ ಒಟ್ಟಾರೆ ಪ್ರಶಸ್ತಿಗಳಲ್ಲಿ “ಜೀರ್ ಜಿಂಬೆ’ ಚಿತ್ರಗಳು ಒಟ್ಟು ನಾಲ್ಕು ಪ್ರಶಸ್ತಿಗಳನ್ನು ಗೆದ್ದುಕೊಂಡಿವೆ. “ಅಮರಾವತಿ’ ಚಿತ್ರ ಮೂರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡರೆ, ಮಕ್ಕಳ ಚಿತ್ರ “ರೈಲ್ವೆ ಚಿಲ್ಡ್ರನ್’ ಎರಡು ಪ್ರಶಸ್ತಿಗಳನ್ನು ಗೆದ್ದುಕೊಂಡಿವೆ.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.