ವಿಸ್ತರಣೆ ಅಲ್ಲ , ಪುನಾರಚನೆ

ಇಂದು ಅಪರಾಹ್ನ 7-8 ಮಂದಿಗೆ ಸಚಿವ ಭಾಗ್ಯ ಎಸ್‌. ಅಂಗಾರ, ಸುನಿಲ್‌ ಕುಮಾರ್‌ಗೆ ಅವಕಾಶ?

Team Udayavani, Jan 13, 2021, 7:00 AM IST

ವಿಸ್ತರಣೆ ಅಲ್ಲ , ಪುನಾರಚನೆ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಅಧಿಕೃತ ಸಮಯ ನಿಗದಿಯಾಗಿದೆ. ಬುಧವಾರ ಅಪರಾಹ್ನ 3.50ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಸಂಪುಟ ಸೇರುವವರ ಪಟ್ಟಿ ಬುಧವಾರವೇ ಬಿಡುಗಡೆ ಯಾಗಲಿದೆ. 7ರಿಂದ 8 ಮಂದಿಯನ್ನು ಸಂಪುಟಕ್ಕೆ ಸೇರಿಸಿ ಕೊಳ್ಳುವುದಾಗಿ ಸಿಎಂ ಹೇಳಿದ್ದಾರೆ. ಎಚ್‌. ನಾಗೇಶ್‌, ಶಶಿಕಲಾ ಜೊಲ್ಲೆ ಮತ್ತಿತರ ಕೆಲವರು ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ನಾಗೇಶ್‌ಗೆ ಸೂಚನೆ :

ಸಂಪುಟದಿಂದ ಕೈ ಬಿಡುವ ಸುದ್ದಿಯ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಎಚ್‌. ನಾಗೇಶ್‌ ಮಂಗಳವಾರ ಬೆಳಗ್ಗೆ ಸಿಎಂ ಅವರನ್ನು ಭೇಟಿ ಮಾಡಿದ್ದರು. ಈ ಸಂದರ್ಭ ಸಂಪುಟ ವಿಸ್ತರಣೆಗೆ ಮುನ್ನ  ರಾಜೀನಾಮೆ ನೀಡು ವಂತೆ ಸಿಎಂ ಸೂಚಿಸಿದ್ದರು. ನಿಮ್ಮೊಬ್ಬರನ್ನೇ ಅಲ್ಲ, ಇನ್ನೂ ಇಬ್ಬರು ಮೂವರನ್ನು ಕೈ ಬಿಡಬಹುದು ಎಂದಿದ್ದರು ಎನ್ನಲಾಗಿದೆ.

ಇದರಿಂದ ನಾಗೇಶ್‌ ಬೇಸರಗೊಂಡಿದ್ದು, ಅವರ ಬೆಂಬಲಿಗರು ಮಂಗಳವಾರ ಸಂಜೆ ಸಿಎಂ ನಿವಾಸ ಕಾವೇರಿ ಎದುರು ಪ್ರತಿಭಟನೆ ನಡೆಸಿದರು.

ಸಿಎಂ ಕಸರತ್ತು ;

ಶಾಸಕ ಮುನಿರತ್ನ ಬದಲು ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಅವರನ್ನು ಸಂಪುಟಕ್ಕೆ ಸೇರಿಸಿ ಕೊಳ್ಳಲು ವರಿಷ್ಠರು ಸೂಚನೆ ನೀಡಿದ್ದಾರೆ. ಆದರೆ ಸಿಎಂ ಬಿಎಸ್‌ವೈ ತಾನು ಈಗಾಗಲೇ ಮುನಿರತ್ನ ಅವರಿಗೆ ಭರವಸೆ ನೀಡಿರುವುದನ್ನು ವರಿಷ್ಠರಿಗೆ ಮನವರಿಕೆ ಮಾಡುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಮುನಿರತ್ನ ಬದಲು ಎಚ್‌. ನಾಗೇಶರನ್ನು ಕೈ ಬಿಟ್ಟು ಅರವಿಂದ ಲಿಂಬಾವಳಿಯವರನ್ನು ಸೇರಿಸಿಕೊಳ್ಳು ವಂತೆ ವರಿಷ್ಠರು ಸೂಚಿಸಿದ್ದಾರೆ. ಸಿಎಂಗೆ ನಾಗೇಶರನ್ನು ಕೈ ಬಿಡುವುದಕ್ಕೂ ಮನಸ್ಸಿಲ್ಲದೆ ಪುನಾರಚನೆ ಸಂದರ್ಭದಲ್ಲಿ ಲಿಂಬಾವಳಿಯವರನ್ನು ಸೇರಿಸಿಕೊಳ್ಳಬಹುದು ಎಂದು ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ಅಂತಿಮ ಪಟ್ಟಿ ವಿಳಂಬವಾಗಿದೆ ಎನ್ನಲಾಗುತ್ತಿದೆ.

ಶೆಟ್ಟರ್‌ ಹೆಸರು? :

ಕೈ ಬಿಡುವವರ ಪಟ್ಟಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೆಸರೂ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

ಯಾರ್ಯಾರಿಗೆ ಸಚಿವ ಸ್ಥಾನ? :

ಮುಂಚೂಣಿಯಲ್ಲಿ  :

ಸುಳ್ಯದ ಶಾಸಕ ಎಸ್‌. ಅಂಗಾರ, ಉಮೇಶ್‌ ಕತ್ತಿ, ಮುರುಗೇಶ್‌ ನಿರಾಣಿ, ಎಂ.ಟಿ.ಬಿ. ನಾಗರಾಜ್‌,

ಆರ್‌. ಶಂಕರ್‌.

ಸಾಧ್ಯತೆ ಇರುವವರು :

ಕಾರ್ಕಳ ಶಾಸಕ ಸುನಿಲ್‌ ಕುಮಾರ್‌, ಶಾಸಕ ಮುನಿರತ್ನ, ಅರವಿಂದ ಲಿಂಬಾವಳಿ, ಸಿ.ಪಿ. ಯೋಗೇಶ್ವರ್‌, ಬಿಎಸ್‌ಪಿ ಶಾಸಕ

ಎನ್‌. ಮಹೇಶ್‌.

ಸಿಎಂ ಹೇಳಿಕೆಗಳು :

 

  • ನಾಳೆ 4 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಸಂಪುಟ ವಿಸ್ತರಣೆಯೋ ಪುನಾರಚನೆಯೋ ನಾಳೆಯೇ ಗೊತ್ತಾಗಲಿದೆ. ನಾಳೆಯೇ ಅಧಿ ಕೃತ ಪಟ್ಟಿ ಬಿಡುಗಡೆ ಮಾಡುತ್ತೇನೆ. ಸಂಪುಟ ಸೇರು ವವರಿಗೆ ದೂರವಾಣಿ ಮೂಲಕ ತಿಳಿಸುತ್ತೇನೆ.
  • ನಾಳೆ50ಕ್ಕೆ ಏಳರಿಂದ ಎಂಟು ಜನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಳೆ 3.30ಕ್ಕೆ ಸಂಭಾವ್ಯ ರಿಗೆ ರಾಜಭವನಕ್ಕೆ ಬರಲು ಸೂಚನೆ ಕೊಟ್ಟಿದ್ದೇನೆ. ಸಂಜೆ ಅಥವಾ ನಾಳೆ ಬೆಳಗ್ಗೆ ಪಟ್ಟಿ  ಬಿಡುಗಡೆ ಮಾಡುತ್ತೇನೆ.
  • ರಾತ್ರಿಯೊಳಗೆ ಸಂಪುಟ ಸೇರುವವರ ಪಟ್ಟಿ ಬಿಡುಗಡೆ ಮಾಡುತ್ತೇನೆ. ಈಗಾಗಲೇ ಖಚಿತ ಆಗಿರುವವರಿಗೆ ಮಾಹಿತಿ ನೀಡಿದ್ದೇನೆ. ಇನ್ನು ಕೆಲವರದು ಖಚಿತ ಆಗಬೇಕು. ಒಬ್ಬರನ್ನು ಕೈ ಬಿಡಬೇಕು. ಅವರು ಯಾರು ಅಂತ ಸಂಜೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.