6 ಲಕ್ಷ ರಾಜ್ಯ ಸರಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಏರಿಕೆ
Team Udayavani, Jun 18, 2018, 7:22 PM IST
ಬೆಂಗಳೂರು : ರಾಜ್ಯ ಸರಕಾರದ ಸುಮಾರು ಆರು ಲಕ್ಷ ನೌಕರರಿಗೆ ಲಾಭವಾಗುವ ರೀತಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ನೌಕರರ ಮೂಲ ವೇತನವನ್ನು ಶೇ.1.75ರಷ್ಟು ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ.
ಆದರೆ ರಾಜ್ಯ ಸರಕಾರಿ ನೌಕರರ ಸಂಘ, ಶೇ.4.25ರ ಮೂಲ ವೇತನ ಹೆಚ್ಚಳಕ್ಕೆ ಮನವಿ ಮಾಡಿಕೊಂಡಿತ್ತು. ಹಾಗೆ ಮಾಡಿದಲ್ಲಿ ರಾಜ್ಯ ಸರಕಾರದ ಬೊಕ್ಕಸಕ್ಕೆ ಭಾರಿ ಹೊರೆ ಬರುವ ಸಾಧ್ಯತೆಯನ್ನು ಮನಗಂಡ ಸಮ್ಮಿಶ್ರ ಸರಕಾರ ಶೇ.1.75ರ ಹೆಚ್ಚಳಕ್ಕೆ ಮನಸ್ಸು ಮಾಡಿತು ಎಂದು ಮೂಲಗಳು ತಿಳಿಸಿವೆ.
ಹಾಗಿದ್ದರೂ ಶೇ.1.75ರ ತುಟ್ಟಿ ಭತ್ಯೆ ಹೆಚ್ಚಳದಿಂದ ರಾಜ್ಯ ಸರಕಾರದ ಬೊಕ್ಕಸಕ್ಕೆ ಸುಮಾರು 560 ಕೋಟಿ ರೂ. ಹೆಚ್ಚಿನ ಹೊರೆ ಬರಲಿದೆ ಎನ್ನಲಾಗಿದೆ.
ಈ ಹಿಂದೆ ವೇತನ ಆಯೋಗದ ಶಿಫಾರಸಿನ ಪ್ರಕಾರ ರಾಜ್ಯ ಸರಕಾರಿ ನೌಕರರ ವೇತನವನ್ನು ಪರಿಷ್ಕರಿಸಲಾಗಿತ್ತು. ಆಗ ಶೇ.45.25 ರಷ್ಟಿದ್ದ ತುಟ್ಟಿ ಭತ್ಯೆಯನ್ನು ಮೂಲ ವೇತನದಲ್ಲಿ ವಿಲಯನಗೊಳಿಸಲಾಗಿತ್ತು. ಪರಿಣಾಮವಾಗಿ ತುಟ್ಟಿ ಭತ್ಯೆ ಶೂನ್ಯವಾಗಿತ್ತು.
ಈಗ ನೀಡಲಾಗಿರುವ ತುಟ್ಟಿ ಭತ್ಯೆಯ ಮೂರು ತಿಂಗಳ ಹಿಂಬಾಕಿ ನಗದು ರೂಪದಲ್ಲಿ ನೌಕರರಿಗೆ ಪಾವತಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ