ರಾಜ್ಯೋತ್ಸವ ಪ್ರಶಸ್ತಿ ಪ್ರಕಟ,ನ.1ರಂದು ಪ್ರದಾನ ಯಾರಿಗೆಲ್ಲಾ ಪ್ರಶಸ್ತಿ
Team Udayavani, Oct 30, 2017, 6:27 PM IST
ಬೆಂಗಳೂರು: ಖ್ಯಾತ ಅಂಕಣಕಾರ ರಾಮಚಂದ್ರ ಗುಹಾ, ಪ್ರಸಿದ್ಧ ಗಾಯಕ ಯೇಸುದಾಸ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್, ಹಿರಿಯ ಸಾಹಿತಿ ವೈದೇಹಿ, ಖ್ಯಾತ ನಟ ಮುಖ್ಯಮಂತ್ರಿ ಚಂದ್ರ ಸೇರಿದಂತೆ 62 ಮಂದಿಗೆ 2017ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಸೋಮವಾರ ಪ್ರಕಟಿಸಿದೆ.
2017ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 1ರಂದು ಪ್ರದಾನ ಮಾಡಲಾಗುತ್ತಿದೆ. ಭಾಷಾ ತಜ್ಞ ಎಸ್ ಸೈಯದ್ ಅಹ್ಮದ್, ಜಾನಪದ ವಿದ್ವಾಂಸ ರಾಜಶೇಖರ್, ಸಾಹಿತಿ ಡಾ.ಹನುಮಾಕ್ಷಿ ಗೋಗಿ, ನಾಟಕಕಾರ ಬೇಲೂರು ಕೃಷ್ಣಮೂರ್ತಿ, ಯಕ್ಷಗಾನ ಕಲಾವಿದ ಶಿವರಾಮ ಜೋಗಿ, ಬಳ್ಕೂರು ಕೃಷ್ಣಯಾಜಿ, ವಿಠಪ್ಪ ಗೋರಂಟ್ಲಿ, ಸಮಾಜಸೇವಕ ಡಾ.ರವೀಂದ್ರನಾಥ ಡಾ.ರವೀಂದ್ರನಾಥ ಶ್ಯಾನಭಾಗ್ ಸೇರಿದಂತೆ 62 ಮಂದಿ ಗಣ್ಯರಿಗೆ ಪ್ರಶಸ್ತಿ ಘೋಷಿಸಿದೆ.
ನವೆಂಬರ್ 1ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ಜತೆ ಒಂದು ಲಕ್ಷ ರೂ ಹಾಗೂ 20 ಗ್ರಾಂ ಚಿನ್ನದ ಪದಕ ನೀಡಿ ಸನ್ಮಾನಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಾಳಿ ಮಳೆ : ಕಿಷ್ಕಿಂದಾ ಅಂಜನಾದ್ರಿ ಬಳಿ ನಿರ್ಮಾಣ ಹಂತದ ಮೊಬೈಲ್ ಟವರ್ ಬಿದ್ದು 7 ಮಂದಿಗೆ ಗಾಯ
ಬ್ರ್ಯಾಂಡ್ ಬೆಂಗಳೂರು ಬಂದಿದ್ದು ದೇವೇಗೌಡರ ಕಾಲದಲ್ಲಿ: ಎಸ್ಎಂಕೆ ಗೆ ಹೆಚ್ ಡಿಕೆ ಟಾಂಗ್
ಕುಣಿಗಲ್ ತಾಲೂಕಿನಲ್ಲಿ ಭಾರಿ ಮಳೆ : ಜನ ಜೀವನ ಅಸ್ತವ್ಯಸ್ತ, 10 ಮನೆಗಳಿಗೆ ಹಾನಿ
ನಾರಾಯಣ ಗುರು, ಭಗತ್ ಸಿಂಗ್ ಪಠ್ಯ ತೆಗೆದಿಲ್ಲ: ಸಚಿವ ಸುನಿಲ್ ಸ್ಪಷನೆ
ನಾನು ರಾಜ್ಯ ರಾಜಕಾರಣಕ್ಕೆ ಮರಳುತ್ತಿಲ್ಲ: ಶೋಭಾ ಕರಂದ್ಲಾಜೆ ಸ್ಪಷ್ಟನೆ