HDK v/s ಬಂಡಾಯ ಶಾಸಕರು ; ಸೂಟ್ ಕೇಸ್ ಇಲ್ಲದೆ ಪಕ್ಷ ಕಟ್ಟಲು ಸಾಧ್ಯವೆ?
Team Udayavani, Jul 10, 2017, 5:38 PM IST
ಬೆಂಗಳೂರು: ಜೆಡಿಎಸ್ ನಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದೆ ಎಂಬ ಪ್ರಜ್ವಲ್ ರೇವಣ್ಣ ಹೇಳಿಕೆ ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ನಮ್ಮ ಪಕ್ಷದಲ್ಲಿ ಕೆಲವರು ಸೂಟ್ ಕೇಸ್ ಪಡೆಯುತ್ತಿದ್ದದ್ದು ನಿಜ. ಆದರೆ ಅವರೆಲ್ಲಾ ಪಕ್ಷ ಬಿಟ್ಟು ಹೋಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳುವ ಮೂಲಕ ಜೆಡಿಎಸ್ ಬಂಡಾಯ ಶಾಸಕರಿಗೆ ಟಾಂಗ್ ನೀಡಿದ್ದಾರೆ.
ಸೂಟ್ ಕೇಸ್ ಸಂಸ್ಕೃತಿ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಎಸ್ ನಲ್ಲಿ ಕೆಲವರು ಸೂಟ್ ಕೇಸ್ ಪಡೆಯುತ್ತಿದ್ದದ್ದು ನಿಜ. ಆದರೆ ಅವರೆಲ್ಲಾ ಈಗಾಗಲೇ ಪಕ್ಷ ಬಿಟ್ಟು ಹೋಗಿದ್ದಾರೆ. ಬಹುಶಃ ಅವರನ್ನು ಕುರಿತು ಪ್ರಜ್ವಲ್ ಹೇಳಿರಬಹುದು. ಈ ಬಗ್ಗೆ ಈಗಾಗಲೇ ಮಾತನಾಡಿ ಆಗಿದೆ. ಸೂಟ್ ಕೇಸ್ ಪಡೆಯುತ್ತಿದ್ದವರು ಮೊದಲ ಸಾಲಲ್ಲಿ ಕೂರುತ್ತಿದ್ದರು. ಈಗ ಅವರೆಲ್ಲ ಪಕ್ಷದಿಂದ ಹೊರನಡೆದಿದ್ದಾರೆ ಎಂದು ಹೇಳುವ ಮೂಲಕ ಬಂಡಾಯ ಶಾಸಕರಿಗೆ ಪರೋಕ್ಷ ಟಾಂಗ್ ನೀಡಿದ್ದರು.
ಸೂಟ್ ಕೇಸ್ ಇಲ್ಲದೆ ಪಕ್ಷ ಕಟ್ಟಲು ಸಾಧ್ಯವೆ? ಬಂಡಾಯ ಶಾಸಕರು:
ಸೂಟ್ ಕೇಸ್ ಇಲ್ಲದೆ ಪಕ್ಷ ಕಟ್ಟಲು ಸಾಧ್ಯವಾಗುತ್ತಾ? ಸಾಲ ಮಾಡಿ ಪಕ್ಷ ಕಟ್ಟಿರೋದೆಲ್ಲಾ ಸುಳ್ಳು. ಜೆಡಿಎಸ್ ಪಕ್ಷಕ್ಕೆ ಹಲವರು ಸಹಾಯ ಮಾಡಿದ್ದಾರೆ. ಎಲ್ಲಾ ಪಕ್ಷದಲ್ಲೂ ಸೂಟ್ ಕೇಸ್ ಸಂಸ್ಕೃತಿ ಇದೆ. ರಾಜಕೀಯದಲ್ಲಿ ಇದೆಲ್ಲಾ ಸರ್ವೆ ಸಾಮಾನ್ಯ ಎಂದು ಜೆಡಿಎಸ್ ಬಂಡಾಯ ಶಾಸಕರು ತಿರುಗೇಟು ನೀಡಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆರೋಪಕ್ಕೆ ಜೆಡಿಎಸ್ ಬಂಡಾಯ ಶಾಸಕರು ಸುದ್ದಿಗೋಷ್ಠಿ ನಡೆಸುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಮಾತನಾಡಲು ತುಂಬಾ ವಿಷಯಗಳಿವೆ. ಈ ಬಗ್ಗೆ ಚರ್ಚೆಗೆ ನಾವು ಸಿದ್ಧ. ಜೆಡಿಎಸ್ ಪಕ್ಷಕ್ಕೆ ಹಲವರು ಸಹಾಯ ಮಾಡಿದ್ದಾರೆ. ದೇವೇಗೌಡರು ತಂತ್ರಗಾರಿಕೆ ಮಾಡುತ್ತಾರೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.
ಏನಿದು ಸೂಟ್ ಕೇಸ್ ವಿವಾದ:
ಜೆಡಿಎಸ್ ಪಕ್ಷದಲ್ಲಿ ಸೂಟ್ ಕೇಸ್ ರಾಜಕಾರಣ ನಡೆಯುತ್ತಿದೆ ಎಂದು ಇತ್ತೀಚೆಗೆ ಸ್ವತಃ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಬಹಿರಂಗ ಸಭೆಯಲ್ಲಿ ಆರೋಪಿಸಿದ್ದರು. ಈ ಹೇಳಿಕೆ ಇದೀಗ ರಾಜಕೀಯ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್ ಆರೋಪ
Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ
Govt ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಕಡ್ಡಾಯಕ್ಕೆ ಆದೇಶ
MUST WATCH
ಹೊಸ ಸೇರ್ಪಡೆ
IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ