ಬಿಜೆಪಿಯವರದ್ದು ಡ್ರಾಮಾ ಕಂಪನಿ, ರಾಮಲಿಂಗಾರೆಡ್ಡಿ; BSY ತಿರುಗೇಟು
Team Udayavani, Dec 23, 2017, 12:31 PM IST
ಬೆಂಗಳೂರು/ಹುಬ್ಬಳ್ಳಿ: ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ನಾಟಕವಾಡುತ್ತಿದ್ದಾರೆ. ಅವರೆಲ್ಲ ದೊಡ್ಡ ಕಲಾವಿದರು ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಹಿಂದೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಅವರಿಗೆ ಹಲವು ಪತ್ರ ಬರೆದಿದ್ದರು. ಆದರೆ ಯಾವುದಕ್ಕೂ ಪ್ರತಿಕ್ರಿಯೆ ನೀಡಿರಿಲಿಲ್ಲ. ಈಗ ಬಿಎಸ್ ಯಡಿಯೂರಪ್ಪ ಪತ್ರಕ್ಕೆ ಪ್ರತಿಕ್ರಿಯೆ ನೀಡುತ್ತಲೇ ಇದ್ದಾರೆ ಎಂದು ತಿರುಗೇಟು ನೀಡಿದರು.
ಸಮಸ್ಯೆಯನ್ನು ಮೊದಲೇ ಪರಿಹರಿಸಲು ಮುಂದಾಗಬಹುದಿತ್ತು, ಆದರೆ ರಾಜಕೀಯ ಲಾಭಕ್ಕಾಗಿ ಈ ನಾಟಕವಾಡುತ್ತಿದ್ದಾರೆ ಎಂದು ದೂರಿದರು.
ನಿಮ್ಮಿಂದ ಆಗದ ಕೆಲಸ ನಾವು ಮಾಡಿದ್ದೇವೆ: ಬಿಎಸ್ ವೈ
ಗೃಹ ಸಚಿವ ರಾಮಲಿಂಗಾರೆಡ್ಡಿ ಅವರ ಆರೋಪಕ್ಕೆ ಹುಬ್ಬಳ್ಳಿಯಲ್ಲಿ ತಿರುಗೇಟು ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, 2012ರಿಂದ 2015ರವರೆಗೆ ಕೇಂದ್ರ ಮತ್ತು ಗೋವಾದಲ್ಲಿ ನೀವೇ(ಕಾಂಗ್ರೆಸ್) ಅಧಿಕಾರದಲ್ಲಿ ಇದ್ದಿದ್ದೀರಿ.ಆಗ ಯಾಕೆ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸಲಿಲ್ಲ. ಕಳೆದ 15 ವರ್ಷಗಳಿಂದ ನಿಮ್ಮಿಂದ ಆಗದ ಕೆಲಸವನ್ನು ನಾವು(ಬಿಜೆಪಿ) ಮಾಡುತ್ತಿದ್ದೇವೆ, ಅದಕ್ಕೆ ಬೆಂಬಲ ಕೊಡೋದು ಬಿಟ್ಟು, ಈ ರೀತಿ ಅಡ್ಡಿಪಡಿಸುತ್ತಿರುವುದೇಕೆ ಎಂದು ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ