ಕರೋಪಾಡಿ ಜಲೀಲ್ ಕೊಲೆ ಪ್ರಕರಣ:8 ಆರೋಪಿಗಳಿಗೆ ಜಾಮೀನು
Team Udayavani, Oct 18, 2017, 11:35 AM IST
ಬೆಂಗಳೂರು: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾ.ಪಂ.ಉಪಾಧ್ಯಕ್ಷ ಅಬ್ದುಲ್ ಜಲೀಲ್ ಕೊಲೆ ಪ್ರಕರಣದ 7 ಮಂದಿ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
11 ಮಂದಿ ಆರೋಪಿಗಳು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾ| ಕೆ.ಎಸ್. ಮುದ್ಗಲ್ ಅವರಿದ್ದ ಏಕಸದಸ್ಯ ಪೀಠ, ಎಂಟು ಮಂದಿ ಆರೋಪಿಗಳಿಗೆ ತಲಾ 1 ಲಕ್ಷ ರೂ ಬಾಂಡ್, ಒಬ್ಬರ ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಗಮನಕ್ಕೆ ತಾರದೆ ಹೊರರಾಜ್ಯಗಳಿಗೆ ತೆರಳುವಂತಿಲ್ಲ ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತು.
ಆರೋಪಿಗಳಾದ ಪ್ರಜ್ವಲ್ ರೈ, ಪುಷ್ಪರಾಜ್, ಸಚಿನ್ , ರೋಶನ್, ಪುನೀತ್, ವಚನ, ಶ್ರೀ ಕೇಶವ, ಪ್ರಶಾಂತ್ ಅವರಿಗೆ ಜಾಮೀನು ಮಂಜೂರು ಮಾಡಿರುವ ನ್ಯಾಯಪೀಠ, ಪ್ರಕರಣದ ಒಂದನೇ ಆರೋಪಿ ರಾಜೇಶ್ ನಾಯಕ್, ನರಸಿಂಹ, ಸತೀಶ್ ರೈಗೆ ಜಾಮೀನು ನಿರಾಕರಿಸಿ ಆದೇಶಿಸಿದೆ. ಆರೋಪಿಗಳ ಪರ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.