ಕೆಎಎಸ್ ಹುದ್ದೆಗಳ ನೇಮಕಾತಿ ಮರೆತ ಸರ್ಕಾರ
Team Udayavani, Feb 13, 2017, 3:45 AM IST
ಬೆಂಗಳೂರು: ಒಂದೂವರೆ ವರ್ಷದಿಂದ ಕೆಎಎಸ್ ಹುದ್ದೆಗಳ ನೇಮಕಾತಿ ಮರೆತಿರುವ ರಾಜ್ಯ ಸರ್ಕಾರ, 2015ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ಎ ಮತ್ತು ಬಿ ಗ್ರೂಪ್ ನ 401 ಖಾಲಿ ಹುದ್ದೆಗಳ ಪಟ್ಟಿ ಸಿದ್ಧವಿದ್ದರೂ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳುಹಿಸಲು ಮನಸ್ಸು ಮಾಡಿಲ್ಲ. ಇತ್ತ ಸರ್ಕಾರ ಖಾಲಿ ಹುದ್ದೆಗಳ ಪಟ್ಟಿ ಕಳಿಸುತ್ತಿಲ್ಲ.
ಅತ್ತ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸುತ್ತಿಲ್ಲ. ಹೀಗಾಗಿ 2015ನೇ ಸಾಲಿನ 401 ಗೆಜೆಟೆಡ್
ಪ್ರೊಬೇಷನರಿಯ (ಕೆಎಎಸ್) ಎ ಮತ್ತು ಬಿ ಗ್ರೂಪ್ ಹುದ್ದೆಗಳ ನೇಮಕಾತಿ ಒಂದೂವರೆ ವರ್ಷದಿಂದ ನನೆಗುದಿಗೆ
ಬಿದ್ದಿದೆ.
ಕೆಎಎಸ್ ಸೇರಿ ಇತರ ಖಾಲಿ ಹುದ್ದೆಗಳ ಭರ್ತಿಗೆ ಪ್ರತಿವರ್ಷ ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ
ನಡೆಸಬೇಕೆಂದು 2009ರಲ್ಲಿ ಪತ್ರಾಂಕಿತ ಹುದ್ದೆಗಳ ನೇಮಕಾತಿ ಕಾಯ್ದೆಯ ನಿಯಮ 40ಕ್ಕೆ ತಿದ್ದುಪಡಿ ತರಲಾಗಿದೆ. ಅದೇ ರೀತಿ ಲೋಕಾಸೇವಾ ಆಯೋಗಕ್ಕೆ ಕಾಯಕಲ್ಪ ಸಲ್ಲಿಸಲು ರಚಿಸಲಾಗಿದ್ದ ಹೂಟಾ ಸಮಿತಿಯು ಇದೇ ಶಿಫಾರಸು ಮಾಡಿದೆ. 2013ರಲ್ಲಿ ಹೂಟಾ ಸಮಿತಿ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ. ಆದಾಗ್ಯೂ 2015ನೇ ಸಾಲಿನ ಕೆಎಎಸ್ ಹುದ್ದೆಗಳ ನೇಮಕಾತಿಗೆ ಈವರೆಗೂ ಅಧಿಸೂಚನೆ ಹೊರಬಿದ್ದಿಲ್ಲ.
2015ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಆಯಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರಗಳನ್ನು ವೃಂದ ಮತ್ತು ಮೀಸಲಾತಿಯ ಜತೆಗೆ ಸಂಬಂಧಪಟ್ಟ ಇಲಾಖೆಗಳು 2015ರ ಜೂನ್-ಜುಲೈನಲ್ಲೇ
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸಲ್ಲಿಸಿವೆ.
2015ರ ಡಿಸೆಂಬರ್ ವೇಳೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಟ್ಟದಲ್ಲಿ 401 ಹುದ್ದೆಗಳ ಕ್ರೋಢೀಕೃತ
ಪಟ್ಟಿ ಅಂತಿಮಗೊಂಡಿದೆ. ಆದರೆ, ನೇಮಕಾತಿಗಳಲ್ಲಿ ಮಹಿಳಾ ಮೀಸಲಾತಿಯನ್ನು ಶೇ.30 ರಿಂದ 33ಕ್ಕೆ ಹೆಚ್ಚಿಸುವ
ಹಾಗೂ ವ್ಯಕ್ತಿತ್ವ ಪರೀಕ್ಷೆ ಅನುಪಾತವನ್ನು 1:3 ರಿಂದ 1:5ಗೆ ಹೆಚ್ಚಿಸುವ ವಿಚಾರದಲ್ಲಿ ಉಂಟಾಗಿರುವ ಗೊಂದಲದ
ನೆಪವನ್ನು ಮುಂದಿಟ್ಟುಕೊಂಡು ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಲೋಕಸೇವಾ ಆಯೋಗಕ್ಕೆ ಪಟ್ಟಿ ಕಳಿಸುತ್ತಿಲ್ಲ ಎಂದು
ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್ ಆರೋಪ
Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ
Govt ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಕಡ್ಡಾಯಕ್ಕೆ ಆದೇಶ
MUST WATCH
ಹೊಸ ಸೇರ್ಪಡೆ
IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?
Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ
Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ
IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್